Homeಕರ್ನಾಟಕಒಳಮೀಸಲಾತಿಗೆ ನಮ್ಮ ಬೆಂಬಲವಿದೆ, ವರದಿ ಪರಿಷ್ಕರಿಸಿ ಕೂಡಲೇ ಜಾರಿಗೊಳಿಸಿ: ಜ್ಞಾನಪ್ರಕಾಶ ಸ್ವಾಮೀಜಿ

ಒಳಮೀಸಲಾತಿಗೆ ನಮ್ಮ ಬೆಂಬಲವಿದೆ, ವರದಿ ಪರಿಷ್ಕರಿಸಿ ಕೂಡಲೇ ಜಾರಿಗೊಳಿಸಿ: ಜ್ಞಾನಪ್ರಕಾಶ ಸ್ವಾಮೀಜಿ

- Advertisement -
- Advertisement -

“ನಾವು ಯಾರ ವಿರುದ್ಧವೂ ಇಲ್ಲ. ಒಳಮೀಸಲಾತಿ ವಿಚಾರದಲ್ಲಿ ಹೊಲೆಯ ಸಮುದಾಯ ತಕರಾರು ತೆಗೆಯುತ್ತಿದೆ ಎಂದು ಹೊರರಾಜ್ಯಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಒಳಮೀಸಲಾತಿಗೆ ನಮ್ಮ ಬೆಂಬಲವಿದ್ದು,  ವರದಿ ಪರಿಷ್ಕರಣೆ ಮಾಡಿ ಜಾರಿ ಮಾಡಬೇಕು” ಎಂದು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಳಮೀಸಲಾತಿ ಏಕಸದಸ್ಯ ಆಯೋಗದ ವರದಿ ತಿರಸ್ಕಾರಕ್ಕೆ ಆಗ್ರಹಿಸಿ ಸೋಮವಾರ (ಆ.18) ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌ಸಿ, ಎಸ್‌ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದ್ರಶೇಖರಯ್ಯ ಸಮಾವೇಶದ ಆಗ್ರಹಗಳನ್ನು ಹಂಚಿಕೊಂಡರು.

“ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ವರದಿಯಲ್ಲಿ ತಮ್ಮ ಜೀವಮಾನದ ಕನಸು ನನಸಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಹೊಲೆಯ ಸಮುದಾಯವನ್ನು ತುಳಿಯಬೇಕು ಎನ್ನುವ ಅವರ ಕನಸನ್ನು ನುಚ್ಚುನೂರು ಮಾಡುತ್ತಿದ್ದೇವೆ. ಏಕರೂಪಿ ಲಕ್ಷಣಗಳನ್ನು ಹೊಂದಿರುವ ಸಮುದಾಯಗಳನ್ನು ಒಂದುಗೂಡಿಸಬೇಕು. ಶೇ.7ಕ್ಕಿಂತ ಕಡಿಮೆ ಮೀಸಲಾತಿಯನ್ನು ಬಲಗೈ ಸಮುದಾಯ ಒಪ್ಪುವುದಿಲ್ಲ. ಯಾರಿಗೆ ಎಷ್ಟಾದರೂ ಕೊಡಿ, ನಮಗೆ 7 ಪರ್ಸೆಂಟ್ ಮೀಸಲಿಡಿ. ಬಲಗೈ ಸಮುದಾಯದ ಕಾಂಗ್ರೆಸ್ ನಾಯಕರು ಇದನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಪರಿಣಾಮಗಳನ್ನು ಎದುರಿಸಲಿದ್ದಾರೆ” ಎಂದರು.

ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, “ನಾವು ತಿಂಗಳುಗಟ್ಟಲೇ, ವರ್ಷಗಟ್ಟಲೇ ಹೋರಾಟ ಮಾಡುವುದಿಲ್ಲ. ಒಂದೇ ಬಾರಿಗೆ ಬೀದಿಗಿಳಿದು ಗೆಲ್ಲುತ್ತೇವೆ. ನಮ್ಮ ಹೋರಾಟದ ಫಲವನ್ನು ಎಲ್ಲರೂ ಉಂಡಿದ್ದಾರೆ. ನಮ್ಮ ಸಾಹಿತಿಗಳು, ಚಿಂತಕರು ನಮ್ಮನ್ನು ಹೀಯಾಳಿಸಿ ಮಾತನಾಡುತ್ತಿದ್ದಾರೆ. ನಮ್ಮ ಸಾಹಿತಿಗಳ ಮಾತು ಕೇಳಲು ಹಿಂಸೆಯಾಗುತ್ತಿದೆ” ಎಂದು ಹೇಳಿದರು.

ಒಕ್ಕೂಟದ ಮೈಸೂರು ವಿಭಾಗೀಯ ಸಂಚಾಲಕ ವೆಂಕಟರಮಣ ಸ್ವಾಮಿ ಮಾತನಾಡಿ, “ನಾಗಮೋಹನ್ ದಾಸ್ ಅವರ ಭಾವಚಿತ್ರ ಮೊದಲು ಸುಟ್ಟವನು ನಾನು. ನಾಳೆಯೂ ಪಟ ಸುಡಲು ಸಿದ್ಧವಾಗಿದ್ದೇನೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದರ ಮೇಲೆ ಸಿದ್ದರಾಮಯ್ಯನವರ ಭವಿಷ್ಯ ನಿರ್ಧಾರವಾಗುತ್ತದೆ” ಎಂದರು.

ಹಿರಿಯ ಹೋರಾಟಗಾರ ಎಂ. ವೆಂಕಟಸ್ವಾಮಿ ಮಾತನಾಡಿ, ‘ನ್ಯಾಯಮೂರ್ತಿ  ನಾಗಮೋಹನ್ ದಾಸ್ ಅವರು ಮೊದಲಿನಿಂದಲೂ ದಲಿತ ಚಳವಳಿಯ ಭಾಗವಾಗಿದ್ದವರು. ಅವರು ತಮ್ಮ ವರದಿಯಲ್ಲಿ ಸರ್ಕಾರ ಇದನ್ನು ತಿರಸ್ಕರಿಸಬಹುದು, ಪುರಸ್ಕರಿಸಬಹುದು ಅಥವಾ ಪರಿಷ್ಕರಿಸಬಹುದು ಎಂದು ಹೇಳಿದ್ದಾರೆ. ವರದಿ ಪರಿಷ್ಕಾರ ಮಾಡಲೇಬೇಕು” ಎಂದರು.

ಚಿತ್ರದುರ್ಗ ಛಲವಾದಿ ಮಹಾಸಂಸ್ಥಾನ ಮಠದ ಬಸವಲಿಂಗನಾಗಿ ಸ್ವಾಮೀಜಿ, ಬೆಂಗಳೂರು ಸಂತ ರವಿದಾಸ ಪೀಠದ ಬುದ್ಧಾನಂದ ಸ್ವಾಮೀಜಿ, ಪ್ರೊ. ಜ್ಞಾನಸ್ವರೂಪಾನಂದ ಸ್ವಾಮೀಜಿ ವೇದಿಕೆಯಲ್ಲಿ ಹಾಜರಿದ್ದರು.

Courtesy : eedina.com

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...