Homeಮುಖಪುಟರೈತರ ಟ್ರ್ಯಾಕ್ಟರ್ ಜಪ್ತಿ ಮಾಡಿದ್ರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗ್ತಿವಿ: ಡಿ.ಕೆ ಶಿವಕುಮಾರ್ ಗುಡುಗು

ರೈತರ ಟ್ರ್ಯಾಕ್ಟರ್ ಜಪ್ತಿ ಮಾಡಿದ್ರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗ್ತಿವಿ: ಡಿ.ಕೆ ಶಿವಕುಮಾರ್ ಗುಡುಗು

ನಾಳೆ ರಜೆ ಇದೆ ಯಾವ ಟ್ರಾಫಿಕ್ ಸಮಸ್ಯೆ ಆಗೋಲ್ಲ. ಅನ್ನದಾತ ಅನ್ನ ಕೊಟ್ಟರೇನೆ ನಾವು ಇರೋದು ಎಂಬುದನ್ನು ಮರೆಯಬೇಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ಬರುತ್ತಿರುವ ರೈತರ ಟ್ರ್ಯಾಕ್ಟರ್ ತಡೆಯುತ್ತಿರುವ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಟ್ರ್ಯಾಕ್ಟರ್ ಜಪ್ತಿ ಮಾಡಿದ್ರೆ ಅವನ್ನು ನಾವೇ ಬಿಡಿಸಿಕೊಡಲು ಹೋಗ್ತಿವಿ. ಕೇಸ್ ಹಾಕಿದ್ರೆ ಜೈಲ್ ಬರೋ ಚಳುವಳಿ ಮಾಡ್ತಿವಿ ಎಂದು ಅವರು ಘೋಷಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ತಮ್ಮ ನೋವು ಹೇಳಿಕೊಳ್ಳುವ ಹಕ್ಕಿದೆ. ಸರ್ಕಾರ ರೈತರ ಬಾಯಿ ಮುಚ್ಚಿಸುವ ಕೆಲಸ ಮಾಡಬಾರದು. ಮೊನ್ನೆ ನಮ್ಮ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯನ್ನು ಸರ್ಕಾರ ತಡೆದಿತ್ತು. ನಮ್ಮದು ಪಾರ್ಟಿ ಪ್ರತಿಭಟನೆ ಆಗಿತ್ತು. ಆದರೆ ನಾಳೆಯ ರೈತರ ಪ್ರತಿಭಟನೆ ಪರವಾಗಿ ಸರ್ಕಾರವೇ ನಿಂತುಕೊಳ್ಳಬೇಕು. ಅವರು ರೈತ ಧ್ವನಿಯಾಗಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ಪೊಲೀಸರೇ ನೀವು ಸರ್ಕಾರದ ಕೈಗೊಂಬೆಯಾಬೇಡಿ. ನೀವು ಎಲ್ಲರಿಗೂ ಒಂದೇ ನ್ಯಾಯ ಕೊಡಿ.
ಸುಪ್ರೀಂ ಕೋರ್ಟ್ ಸಹ ಪ್ರತಿಭಟನೆ ಮಾಡಬೇಡಿ ಎಂದು ಹೇಳಿಲ್ಲ. ನಾಳೆ ರಜೆ ಇದೆ ಯಾವ ಟ್ರಾಫಿಕ್ ಸಮಸ್ಯೆ ಆಗೋಲ್ಲ. ಅನ್ನದಾತ ಅನ್ನ ಕೊಟ್ಟರೇನೆ ನಾವು ಇರೋದು ಎಂಬುದನ್ನು ಮರೆಯಬೇಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ.

ಜಿಲ್ಲೆಗಳಲ್ಲಿ ರೈತರನ್ನು, ಟ್ರ್ಯಾಕ್ಟರ್‌ಗಳನ್ನು ತಡೆಯುತ್ತಿದ್ದಾರೆ. ವಾಹನಗಳ ಡ್ರೈವರ್‌ಗಳಿಗೆ ಹೆದರಿಸುತ್ತಿದ್ದಾರೆ. ಕಾಂಗ್ರೆಸ್ ರೈತರ ಬೆಂಬಲವಾಗಿ ನಿಂತುಕೊಳ್ಳುತ್ತದೆ. ಎಲ್ಲೇ ಟ್ರ್ಯಾಕ್ಟರ್ ತಡೆದು ಜಪ್ತಿ ಮಾಡಿದರೂ ನಮ್ಮ ಪಕ್ಷದ ಕಾರ್ಯಕರ್ತರು ಅದನ್ನು ಬಿಡಿಸಲು ಹೋಗುತ್ತಾರೆ. ಕೇಸ್ ಹಾಕಿದರೆ ಜೈಲ್ ಭರೋ ಚಳವಳಿ ನಡೆಸುತ್ತಾರೆ ಎಂದು ಡಿಕೆಶಿ ತಿಳಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ್ ಮಾತನಾಡಿ, “ನಾಳಿನ ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ರ್ಯಾಲಿಗೆ ನಮ್ಮ ಬೆಂಬಲವಿದೆ. ದೇಶದ ಇತಿಹಾಸದಲ್ಲಿ ಗಣರಾಜ್ಯೋತ್ಸವವನ್ನು ಬಹಳ ಸಂತೋಷದಿಂದ ಆಚರಿಸಲಾಗುತ್ತಿತ್ತು. ಆದ್ರೆ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಗಣತಂತ್ರ ವ್ಯವಸ್ಥೆಗೆ ಧಕ್ಕೆ ಬಂದಿದೆ. ರೈತರ ಅಹವಾಲುಗಳನ್ನು ಸರ್ಕಾರ ಪರಿಗಣಿಸದೇ ಇರೋದು ಶೋಚನೀಯ. ಇಡೀ ದೇಶದ ಎಲ್ಲಾ ಭಾಗದಲ್ಲೂ ರೈತರು ನಾಳೆ ಪ್ರತಿಭಟನೆ ಮಾಡ್ತಿದ್ದಾರೆ. ರೈತರ ಪರವಾಗಿ ನಮ್ಮ ಪಕ್ಷ ಇದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...