Homeಮುಖಪುಟರೈತರ ಟ್ರ್ಯಾಕ್ಟರ್ ಜಪ್ತಿ ಮಾಡಿದ್ರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗ್ತಿವಿ: ಡಿ.ಕೆ ಶಿವಕುಮಾರ್ ಗುಡುಗು

ರೈತರ ಟ್ರ್ಯಾಕ್ಟರ್ ಜಪ್ತಿ ಮಾಡಿದ್ರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗ್ತಿವಿ: ಡಿ.ಕೆ ಶಿವಕುಮಾರ್ ಗುಡುಗು

ನಾಳೆ ರಜೆ ಇದೆ ಯಾವ ಟ್ರಾಫಿಕ್ ಸಮಸ್ಯೆ ಆಗೋಲ್ಲ. ಅನ್ನದಾತ ಅನ್ನ ಕೊಟ್ಟರೇನೆ ನಾವು ಇರೋದು ಎಂಬುದನ್ನು ಮರೆಯಬೇಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ಬರುತ್ತಿರುವ ರೈತರ ಟ್ರ್ಯಾಕ್ಟರ್ ತಡೆಯುತ್ತಿರುವ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಟ್ರ್ಯಾಕ್ಟರ್ ಜಪ್ತಿ ಮಾಡಿದ್ರೆ ಅವನ್ನು ನಾವೇ ಬಿಡಿಸಿಕೊಡಲು ಹೋಗ್ತಿವಿ. ಕೇಸ್ ಹಾಕಿದ್ರೆ ಜೈಲ್ ಬರೋ ಚಳುವಳಿ ಮಾಡ್ತಿವಿ ಎಂದು ಅವರು ಘೋಷಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ತಮ್ಮ ನೋವು ಹೇಳಿಕೊಳ್ಳುವ ಹಕ್ಕಿದೆ. ಸರ್ಕಾರ ರೈತರ ಬಾಯಿ ಮುಚ್ಚಿಸುವ ಕೆಲಸ ಮಾಡಬಾರದು. ಮೊನ್ನೆ ನಮ್ಮ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯನ್ನು ಸರ್ಕಾರ ತಡೆದಿತ್ತು. ನಮ್ಮದು ಪಾರ್ಟಿ ಪ್ರತಿಭಟನೆ ಆಗಿತ್ತು. ಆದರೆ ನಾಳೆಯ ರೈತರ ಪ್ರತಿಭಟನೆ ಪರವಾಗಿ ಸರ್ಕಾರವೇ ನಿಂತುಕೊಳ್ಳಬೇಕು. ಅವರು ರೈತ ಧ್ವನಿಯಾಗಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ಪೊಲೀಸರೇ ನೀವು ಸರ್ಕಾರದ ಕೈಗೊಂಬೆಯಾಬೇಡಿ. ನೀವು ಎಲ್ಲರಿಗೂ ಒಂದೇ ನ್ಯಾಯ ಕೊಡಿ.
ಸುಪ್ರೀಂ ಕೋರ್ಟ್ ಸಹ ಪ್ರತಿಭಟನೆ ಮಾಡಬೇಡಿ ಎಂದು ಹೇಳಿಲ್ಲ. ನಾಳೆ ರಜೆ ಇದೆ ಯಾವ ಟ್ರಾಫಿಕ್ ಸಮಸ್ಯೆ ಆಗೋಲ್ಲ. ಅನ್ನದಾತ ಅನ್ನ ಕೊಟ್ಟರೇನೆ ನಾವು ಇರೋದು ಎಂಬುದನ್ನು ಮರೆಯಬೇಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ.

ಜಿಲ್ಲೆಗಳಲ್ಲಿ ರೈತರನ್ನು, ಟ್ರ್ಯಾಕ್ಟರ್‌ಗಳನ್ನು ತಡೆಯುತ್ತಿದ್ದಾರೆ. ವಾಹನಗಳ ಡ್ರೈವರ್‌ಗಳಿಗೆ ಹೆದರಿಸುತ್ತಿದ್ದಾರೆ. ಕಾಂಗ್ರೆಸ್ ರೈತರ ಬೆಂಬಲವಾಗಿ ನಿಂತುಕೊಳ್ಳುತ್ತದೆ. ಎಲ್ಲೇ ಟ್ರ್ಯಾಕ್ಟರ್ ತಡೆದು ಜಪ್ತಿ ಮಾಡಿದರೂ ನಮ್ಮ ಪಕ್ಷದ ಕಾರ್ಯಕರ್ತರು ಅದನ್ನು ಬಿಡಿಸಲು ಹೋಗುತ್ತಾರೆ. ಕೇಸ್ ಹಾಕಿದರೆ ಜೈಲ್ ಭರೋ ಚಳವಳಿ ನಡೆಸುತ್ತಾರೆ ಎಂದು ಡಿಕೆಶಿ ತಿಳಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ್ ಮಾತನಾಡಿ, “ನಾಳಿನ ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ರ್ಯಾಲಿಗೆ ನಮ್ಮ ಬೆಂಬಲವಿದೆ. ದೇಶದ ಇತಿಹಾಸದಲ್ಲಿ ಗಣರಾಜ್ಯೋತ್ಸವವನ್ನು ಬಹಳ ಸಂತೋಷದಿಂದ ಆಚರಿಸಲಾಗುತ್ತಿತ್ತು. ಆದ್ರೆ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಗಣತಂತ್ರ ವ್ಯವಸ್ಥೆಗೆ ಧಕ್ಕೆ ಬಂದಿದೆ. ರೈತರ ಅಹವಾಲುಗಳನ್ನು ಸರ್ಕಾರ ಪರಿಗಣಿಸದೇ ಇರೋದು ಶೋಚನೀಯ. ಇಡೀ ದೇಶದ ಎಲ್ಲಾ ಭಾಗದಲ್ಲೂ ರೈತರು ನಾಳೆ ಪ್ರತಿಭಟನೆ ಮಾಡ್ತಿದ್ದಾರೆ. ರೈತರ ಪರವಾಗಿ ನಮ್ಮ ಪಕ್ಷ ಇದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...