Homeಅಂತರಾಷ್ಟ್ರೀಯ‘ಪ್ರಧಾನಿಯ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸುತ್ತೇವೆ, ಆದರೆ...’: ಶ್ರೀಲಂಕಾ ವಿಪಕ್ಷ ನಾಯಕನ ಎಚ್ಚರಿಕೆ

‘ಪ್ರಧಾನಿಯ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸುತ್ತೇವೆ, ಆದರೆ…’: ಶ್ರೀಲಂಕಾ ವಿಪಕ್ಷ ನಾಯಕನ ಎಚ್ಚರಿಕೆ

- Advertisement -
- Advertisement -

ಶ್ರೀಲಂಕಾದ ಪ್ರತಿಪಕ್ಷದ ನಾಯಕ ಮತ್ತು ಸಮಗಿ ಜನ ಬಲವೇಗಯ (ಎಸ್‌ಜೆಬಿ) ಮೈತ್ರಿಕೂಟದ ಮುಖ್ಯಸ್ಥ ಸಜಿತ್ ಪ್ರೇಮದಾಸ ಅವರು ದೇಶದ ಆರ್ಥಿಕತೆಯನ್ನು ಪುನರ್ನಿರ್ಮಿಸಲು ಬೇಕಾಗಿ, ಹೊಸ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತೆಗೆದುಕೊಳ್ಳುವ ಎಲ್ಲಾ ಸಕಾರಾತ್ಮಕ ಕ್ರಮಗಳನ್ನು ಪ್ರತಿಪಕ್ಷಗಳು ಬೆಂಬಲಿಸುತ್ತವೆ ಎಂದು ಹೇಳಿದ್ದಾರೆ.

ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಹೊಸ ಪ್ರಧಾನಿಯನ್ನು ನೇಮಕ ಮಾಡುವ ಮೊದಲು ಪ್ರಮುಖ ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ನಿರಾಶೆಗೊಂಡಿದ್ದರು. ಆದರೆ ಇದೀಗ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸಲಿದ್ದೇವೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್ಥಿಕ ಬಿಕ್ಕಟ್ಟು ಬಗೆಹರಿಯುತ್ತದೆಯೇ ಎಂಬುದು ಸರ್ಕಾರದ ಮುಂದೆ ಉಳಿದಿರುವ ಪ್ರಶ್ನೆಯಾಗಿದೆ. ರಚನಾತ್ಮಕ ಮತ್ತು ಪ್ರಗತಿಪರ ಪ್ರತಿಪಕ್ಷವಾಗಿ, ಜನ ಸಾಮಾನ್ಯರ ದುಃಖವನ್ನು ನಿವಾರಿಸುವ ಗುರಿಯನ್ನು ಹೊಂದಿರುವ ಯಾವುದೇ ಸಕಾರಾತ್ಮಕ ಪ್ರಸ್ತಾಪಗಳಿಗೆ ರಚನಾತ್ಮಕ ಬೆಂಬಲವನ್ನು ನೀಡಲು ನಿರ್ಧರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡದೆ.

ಇದನ್ನೂ ಓದಿ: ಭೀಕರ ಆರ್ಥಿಕ ಬಿಕ್ಕಟ್ಟಿನ ನಡುವೆ ಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ

“ಶ್ರೀಲಂಕಾದ ಜನಸಾಮಾನ್ಯರ ಕೂಗು ಮತ್ತು ನಾವು ತೆಗೆದುಕೊಂಡ ತತ್ವದ ನಿಲುವಿನಿಂದ ನಾವು ಹಿಂತಿರುಗಲು ಸಾಧ್ಯವಿಲ್ಲ. ನಾವು ವಿಶ್ವಾಸಾರ್ಹತೆ ಮತ್ತು ಸಮಗ್ರತೆಯ ರಾಜಕಾರಣಿಗಳಾಗಿದ್ದು, ನಿಷ್ಠಾವಂತ ಪ್ರತಿಪಕ್ಷವಾಗಿ ಜನರು ನಮ್ಮನ್ನು ನಂಬಿದ್ದಾರೆ. ಹೀಗಾಗಿ ಜನರ ಆಶಯಗಳನ್ನು ನಾವು ಈಡೇರಿಸುತ್ತೇವೆ’’ ಎಂದು ಅವರು ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರು ಅಧ್ಯಕ್ಷೀಯ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಅಧ್ಯಕ್ಷರ ರಾಜೀನಾಮೆಗೆ ಸಾಂವಿಧಾನಿಕ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ. ಆದರೆ ಜನಸಾಮಾನ್ಯರ ನೋವನ್ನು ನಿವಾರಿಸಲು ಬೇಕಾಗಿ, ಮಂಡಿಸಲಾಗಿರುವ ಪ್ರಸ್ತಾಪಗಳನ್ನು ‘ರಚನಾತ್ಮಕವಾಗಿ ಮತ್ತು ಪ್ರಗತಿಪರವಾಗಿ’ ಬೆಂಬಲಿಸಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವು ವಿರೋಧ ಪಕ್ಷವಾಗಿ ಜನಾದೇಶವನ್ನು ಪಡೆದಿದ್ದೇವೆಯೆ ಹೊರತು ಸರ್ಕಾರವಾಗಿ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಆಹಾರ ಭದ್ರತೆಯನ್ನು ಹೆಚ್ಚಿಸುವ ಮತ್ತು ಇಂಧನ, ವಿದ್ಯುತ್, ಅನಿಲ, ರಸಗೊಬ್ಬರ ಮತ್ತು ಇತರ ಅಗತ್ಯ ವಸ್ತುಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಯಾವುದೇ ನೀತಿಗಳನ್ನು ಪ್ರತಿಪಕ್ಷಗಳು ವಿರೋಧಿಸುವುದಿಲ್ಲ ಎಂದು ಪ್ರೇಮದಾಸ ಒತ್ತಿ ಹೇಳಿದ್ದಾರೆ. “ಅಂತಹ ಉತ್ಪಾದಕ ಚಟುವಟಿಕೆಗಳಿಗೆ ಕಾರಣವಾಗುವ ಎಲ್ಲಾ ಪ್ರಸ್ತಾಪಗಳನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಆಡಳಿತ ಪಕ್ಷ ಮತ್ತು ‘ಆಡಳಿತದ ಗಣ್ಯರು’ ಎಂದು ಕರೆಯಲ್ಪಡುವವರು ವಿರೋಧ ಪಕ್ಷಗಳ ಜನರನ್ನು ಸವಲತ್ತುಗಳು ಮತ್ತು ಆಡಳಿತಾತ್ಮಕ ಸ್ಥಾನಗಳನ್ನು ಒದಗಿಸುವ ಮೂಲಕ ಬೇಟೆಯಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ನಾವು ಸಹಿಸುವುದಿಲ್ಲ. ಹಾಗೆ ನೋಡಿದರೆ ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸುವುದಿಲ್ಲ. ಆದ್ದರಿಂದ, ಈ ಬಿಕ್ಕಟ್ಟಿನ ನಡುವೆ ರಾಜಕೀಯ ಪಿತೂರಿ ಅಥವಾ ರಾಜಕೀಯ ಸಂಗೀತ ಕುರ್ಚಿಗಳ ಆಟದಲ್ಲಿ ತೊಡಗಬಾರದು. ಬದಲಾಗಿ ರಾಷ್ಟ್ರೀಯ ಸವಾಲುಗಳು ಮತ್ತು ರಾಷ್ಟ್ರೀಯ ಉದ್ದೇಶಗಳ ಮೇಲೆ ಗಮನವನ್ನು ಕೇಂದ್ರೀಕರಿಸಬೇಕು. ಏಕೆಂದರೆ ಆ ಉದ್ದೇಶಗಳನ್ನು ಸಾಧಿಸಲು ನಾವು ಬೆಂಬಲ ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಇಂತಹ ಸಮಯದಲ್ಲಿ ದೇಶಕ್ಕೆ ಪ್ರಚಂಡ ಬೆಂಬಲ ನೀಡಿದ್ದಕ್ಕಾಗಿ ಅವರು ಪ್ರಧಾನಿ ಮೋದಿ ಮತ್ತು ಭಾರತೀಯರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. “ಭಾರತೀಯ ನೆರವು ಅನಿವಾರ್ಯ ಮತ್ತು ಅತ್ಯಮೂಲ್ಯವಾಗಿದೆ. ನಮ್ಮ ತಾಯಿನಾಡಿಗೆ ಹೆಚ್ಚು ಸಹಾಯ ಮಾಡಲು ನಾನು ಭಾರತವನ್ನು ಪ್ರೋತ್ಸಾಹಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...