Homeಅಂತರಾಷ್ಟ್ರೀಯ‘ಪ್ರಧಾನಿಯ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸುತ್ತೇವೆ, ಆದರೆ...’: ಶ್ರೀಲಂಕಾ ವಿಪಕ್ಷ ನಾಯಕನ ಎಚ್ಚರಿಕೆ

‘ಪ್ರಧಾನಿಯ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸುತ್ತೇವೆ, ಆದರೆ…’: ಶ್ರೀಲಂಕಾ ವಿಪಕ್ಷ ನಾಯಕನ ಎಚ್ಚರಿಕೆ

- Advertisement -
- Advertisement -

ಶ್ರೀಲಂಕಾದ ಪ್ರತಿಪಕ್ಷದ ನಾಯಕ ಮತ್ತು ಸಮಗಿ ಜನ ಬಲವೇಗಯ (ಎಸ್‌ಜೆಬಿ) ಮೈತ್ರಿಕೂಟದ ಮುಖ್ಯಸ್ಥ ಸಜಿತ್ ಪ್ರೇಮದಾಸ ಅವರು ದೇಶದ ಆರ್ಥಿಕತೆಯನ್ನು ಪುನರ್ನಿರ್ಮಿಸಲು ಬೇಕಾಗಿ, ಹೊಸ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತೆಗೆದುಕೊಳ್ಳುವ ಎಲ್ಲಾ ಸಕಾರಾತ್ಮಕ ಕ್ರಮಗಳನ್ನು ಪ್ರತಿಪಕ್ಷಗಳು ಬೆಂಬಲಿಸುತ್ತವೆ ಎಂದು ಹೇಳಿದ್ದಾರೆ.

ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಹೊಸ ಪ್ರಧಾನಿಯನ್ನು ನೇಮಕ ಮಾಡುವ ಮೊದಲು ಪ್ರಮುಖ ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ನಿರಾಶೆಗೊಂಡಿದ್ದರು. ಆದರೆ ಇದೀಗ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸಲಿದ್ದೇವೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್ಥಿಕ ಬಿಕ್ಕಟ್ಟು ಬಗೆಹರಿಯುತ್ತದೆಯೇ ಎಂಬುದು ಸರ್ಕಾರದ ಮುಂದೆ ಉಳಿದಿರುವ ಪ್ರಶ್ನೆಯಾಗಿದೆ. ರಚನಾತ್ಮಕ ಮತ್ತು ಪ್ರಗತಿಪರ ಪ್ರತಿಪಕ್ಷವಾಗಿ, ಜನ ಸಾಮಾನ್ಯರ ದುಃಖವನ್ನು ನಿವಾರಿಸುವ ಗುರಿಯನ್ನು ಹೊಂದಿರುವ ಯಾವುದೇ ಸಕಾರಾತ್ಮಕ ಪ್ರಸ್ತಾಪಗಳಿಗೆ ರಚನಾತ್ಮಕ ಬೆಂಬಲವನ್ನು ನೀಡಲು ನಿರ್ಧರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡದೆ.

ಇದನ್ನೂ ಓದಿ: ಭೀಕರ ಆರ್ಥಿಕ ಬಿಕ್ಕಟ್ಟಿನ ನಡುವೆ ಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ

“ಶ್ರೀಲಂಕಾದ ಜನಸಾಮಾನ್ಯರ ಕೂಗು ಮತ್ತು ನಾವು ತೆಗೆದುಕೊಂಡ ತತ್ವದ ನಿಲುವಿನಿಂದ ನಾವು ಹಿಂತಿರುಗಲು ಸಾಧ್ಯವಿಲ್ಲ. ನಾವು ವಿಶ್ವಾಸಾರ್ಹತೆ ಮತ್ತು ಸಮಗ್ರತೆಯ ರಾಜಕಾರಣಿಗಳಾಗಿದ್ದು, ನಿಷ್ಠಾವಂತ ಪ್ರತಿಪಕ್ಷವಾಗಿ ಜನರು ನಮ್ಮನ್ನು ನಂಬಿದ್ದಾರೆ. ಹೀಗಾಗಿ ಜನರ ಆಶಯಗಳನ್ನು ನಾವು ಈಡೇರಿಸುತ್ತೇವೆ’’ ಎಂದು ಅವರು ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರು ಅಧ್ಯಕ್ಷೀಯ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಅಧ್ಯಕ್ಷರ ರಾಜೀನಾಮೆಗೆ ಸಾಂವಿಧಾನಿಕ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ. ಆದರೆ ಜನಸಾಮಾನ್ಯರ ನೋವನ್ನು ನಿವಾರಿಸಲು ಬೇಕಾಗಿ, ಮಂಡಿಸಲಾಗಿರುವ ಪ್ರಸ್ತಾಪಗಳನ್ನು ‘ರಚನಾತ್ಮಕವಾಗಿ ಮತ್ತು ಪ್ರಗತಿಪರವಾಗಿ’ ಬೆಂಬಲಿಸಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವು ವಿರೋಧ ಪಕ್ಷವಾಗಿ ಜನಾದೇಶವನ್ನು ಪಡೆದಿದ್ದೇವೆಯೆ ಹೊರತು ಸರ್ಕಾರವಾಗಿ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಆಹಾರ ಭದ್ರತೆಯನ್ನು ಹೆಚ್ಚಿಸುವ ಮತ್ತು ಇಂಧನ, ವಿದ್ಯುತ್, ಅನಿಲ, ರಸಗೊಬ್ಬರ ಮತ್ತು ಇತರ ಅಗತ್ಯ ವಸ್ತುಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಯಾವುದೇ ನೀತಿಗಳನ್ನು ಪ್ರತಿಪಕ್ಷಗಳು ವಿರೋಧಿಸುವುದಿಲ್ಲ ಎಂದು ಪ್ರೇಮದಾಸ ಒತ್ತಿ ಹೇಳಿದ್ದಾರೆ. “ಅಂತಹ ಉತ್ಪಾದಕ ಚಟುವಟಿಕೆಗಳಿಗೆ ಕಾರಣವಾಗುವ ಎಲ್ಲಾ ಪ್ರಸ್ತಾಪಗಳನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಆಡಳಿತ ಪಕ್ಷ ಮತ್ತು ‘ಆಡಳಿತದ ಗಣ್ಯರು’ ಎಂದು ಕರೆಯಲ್ಪಡುವವರು ವಿರೋಧ ಪಕ್ಷಗಳ ಜನರನ್ನು ಸವಲತ್ತುಗಳು ಮತ್ತು ಆಡಳಿತಾತ್ಮಕ ಸ್ಥಾನಗಳನ್ನು ಒದಗಿಸುವ ಮೂಲಕ ಬೇಟೆಯಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ನಾವು ಸಹಿಸುವುದಿಲ್ಲ. ಹಾಗೆ ನೋಡಿದರೆ ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸುವುದಿಲ್ಲ. ಆದ್ದರಿಂದ, ಈ ಬಿಕ್ಕಟ್ಟಿನ ನಡುವೆ ರಾಜಕೀಯ ಪಿತೂರಿ ಅಥವಾ ರಾಜಕೀಯ ಸಂಗೀತ ಕುರ್ಚಿಗಳ ಆಟದಲ್ಲಿ ತೊಡಗಬಾರದು. ಬದಲಾಗಿ ರಾಷ್ಟ್ರೀಯ ಸವಾಲುಗಳು ಮತ್ತು ರಾಷ್ಟ್ರೀಯ ಉದ್ದೇಶಗಳ ಮೇಲೆ ಗಮನವನ್ನು ಕೇಂದ್ರೀಕರಿಸಬೇಕು. ಏಕೆಂದರೆ ಆ ಉದ್ದೇಶಗಳನ್ನು ಸಾಧಿಸಲು ನಾವು ಬೆಂಬಲ ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಇಂತಹ ಸಮಯದಲ್ಲಿ ದೇಶಕ್ಕೆ ಪ್ರಚಂಡ ಬೆಂಬಲ ನೀಡಿದ್ದಕ್ಕಾಗಿ ಅವರು ಪ್ರಧಾನಿ ಮೋದಿ ಮತ್ತು ಭಾರತೀಯರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. “ಭಾರತೀಯ ನೆರವು ಅನಿವಾರ್ಯ ಮತ್ತು ಅತ್ಯಮೂಲ್ಯವಾಗಿದೆ. ನಮ್ಮ ತಾಯಿನಾಡಿಗೆ ಹೆಚ್ಚು ಸಹಾಯ ಮಾಡಲು ನಾನು ಭಾರತವನ್ನು ಪ್ರೋತ್ಸಾಹಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...