Homeಮುಖಪುಟ'ನಮಗೆ ಪಿತೂರಿಯ ಶಂಕೆಯಿದೆ': ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

‘ನಮಗೆ ಪಿತೂರಿಯ ಶಂಕೆಯಿದೆ’: ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

- Advertisement -
- Advertisement -

ತಮಿಳುನಾಡಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುಂದಾಗಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಕ್ರಮಲ್ಲಿ ‘ಪಿತೂರಿ’ಯ ಶಂಕೆ ವ್ಯಕ್ತಪಡಿಸಿರುವ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನವೆಂಬರ್ 2ರಂದು ಚೆನ್ನೈನಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.

ತಮಿಳುನಾಡು ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಮುಂದಿನ ಹಂತದ ಎಸ್‌ಐಆರ್ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ಘೋಷಿಸಿದೆ. ಈ ಬೆನ್ನಲ್ಲೇ ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿ ಜಾತ್ಯತೀತ ಪ್ರಗತಿಪರ ಒಕ್ಕೂಟದ ನಾಯಕರ ಸಮಾಲೋಚನಾ ಸಭೆ ನಡೆದಿದೆ. ಸಭೆಯ ಬಳಿಕ ನವೆಂಬರ್ 2ರ ಸರ್ವಪಕ್ಷ ಸಭೆಗೆ ಆಹ್ವಾನ ನೀಡಲಾಗಿದೆ.

ಜಂಟಿ ಹೇಳಿಕೆಯಲ್ಲಿ, ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಪಡಿಸುತ್ತಿದೆ. ಸ್ವತಂತ್ರ ಸಂಸ್ಥೆಗಳನ್ನು ತನ್ನ ಇಚ್ಛೆಯಂತೆ ದುರುಪಯೋಗಪಡಿಸಿಕೊಳ್ಳುತ್ತಿದೆ. ಚುನಾವಣಾ ಆಯೋಗದ ಕಾರ್ಯನಿರ್ವಹಣೆ ವಿವಾದಾತ್ಮಕ ಮಾತ್ರವಲ್ಲದೆ, ಅನುಮಾನಾಸ್ಪದವಾಗಿದೆ ಎಂದು ಡಿಎಂಕೆ ಮೈತ್ರಿಕೂಟದ ನಾಯಕರು ಹೇಳಿದ್ದಾರೆ.

ಬಿಹಾರದಲ್ಲಿ ನಡೆಸಲಾದ ಎಸ್‌ಐಆರ್ ಅನ್ನು ಉಲ್ಲೇಖಿಸಿದ ನಾಯಕರು, “ಬಿಹಾರದಲ್ಲಿ ನಡೆದ ಎಸ್‌ಐಆರ್ ವಾಸ್ತವವಾಗಿ ನಿಜವಾದ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ಸಂಚು ಎಂಬುವುದು ನಮಗೆ ಗೊತ್ತಾಗಿದೆ. ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಕೂಡ ಪಾಲಿಸಿಲ್ಲ. ಈ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಯನ್ನು ನಡೆಸಲು ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ಪ್ರಚೋದಿಸಿದೆ” ಎಂದು ಆರೋಪಿಸಿದ್ದಾರೆ.

ನವೆಂಬರ್ ಮತ್ತು ಡಿಸೆಂಬರ್ ಮಳೆಗಾಲದ ತಿಂಗಳುಗಳಲ್ಲಿ ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸುವುದು ತುಂಬಾ ಕಷ್ಟಕರ ಮತ್ತು ಪ್ರಾಯೋಗಿಕವಾಗಿ ಅಸಾಧ್ಯ. ಚುನಾವಣಾ ಆಯೋಗ ಘೋಷಿಸಿದ ಕಾರ್ಯವಿಧಾನಗಳು ಜನಸಂಖ್ಯೆಯ ಹೆಚ್ಚಿನ ಭಾಗಕ್ಕೆ ತೊಂದರೆಯನ್ನುಂಟುಮಾಡುತ್ತವೆ ಎಂದು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಎಸ್‌ಐಆರ್‌ಗೆ ಆಧಾರ್ ಕಾರ್ಡ್ ಅನ್ನು ಏಕೆ ಸ್ವೀಕರಿಸಿಲ್ಲ? ಪದೇ ಪದೇ ಒತ್ತಾಯಿಸಿದರೂ ಪಡಿತರ ಚೀಟಿಯನ್ನು ಏಕೆ ಸ್ವೀಕರಿಸಿಲ್ಲ ಎಂದು ಡಿಎಂಕೆ ಮೈತ್ರಿಕೂಟದ ನಾಯಕರು ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಅಗತ್ಯವನ್ನು ಒಪ್ಪಿಕೊಂಡರೂ, ಆತುರದಿಂದ ಈ ಪ್ರಕ್ರಿಯೆ ನಡೆಸಬಾರದು ಎಂದಿದ್ದಾರೆ.

“ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗ, ಈಗ ಎಸ್‌ಐಆರ್ ಘೋಷಿಸುವುದು ಅನ್ಯಾಯ. ತಮಿಳುನಾಡಿನ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಪಿತೂರಿ ನಡೆಯುತ್ತಿದೆ ಎಂಬ ಅನುಮಾನ ನಮಗಿದೆ. ಬಿಹಾರದಲ್ಲಿ ಮುಸ್ಲಿಮರು, ಪರಿಶಿಷ್ಟ ಜಾತಿ ಸಮುದಾಯಗಳು ಮತ್ತು ಮಹಿಳೆಯರನ್ನು ಹೆಸರು ತೆಗೆಯುವಿಕೆಗೆ ಗುರಿಯಾಗಿಸಲಾಗಿತ್ತು. ತಮಿಳುನಾಡು ಅಂತಹ ಸಂಚನ್ನು ಎಂದಿಗೂ ಅನುಮತಿಸುವುದಿಲ್ಲ. ಈ ವಿಷಯದಲ್ಲಿ ರಾಜ್ಯವು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಲಿದೆ” ಎಂದು ನಾಯಕರು ಹೇಳಿದ್ದಾರೆ.

ಇದೇ ವಿಷಯದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸ್ಟಾಲಿನ್, “ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ. ತಮಿಳುನಾಡು ಅದನ್ನು ಕೊಲ್ಲುವ ಯಾವುದೇ ಪ್ರಯತ್ನದ ವಿರುದ್ಧ ಹೋರಾಡುತ್ತದೆ ಮತ್ತು ತಮಿಳುನಾಡು ಗೆಲ್ಲುತ್ತದೆ” ಎಂದು ಬರೆದುಕೊಂಡಿದ್ದಾರೆ.

“ಆತುರ ಮತ್ತು ಅಪಾರದರ್ಶಕ ರೀತಿಯಲ್ಲಿ ಎಸ್‌ಐಆರ್‌ ನಡೆಸುವುದು ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಮತ್ತು ಬಿಜೆಪಿಗೆ ಸಹಾಯ ಮಾಡಲು ಚುನಾವಣಾ ಆಯೋಗ ನಡೆಸುತ್ತಿರುವ ಪಿತೂರಿಯಲ್ಲದೆ ಬೇರೇನೂ ಅಲ್ಲ” ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಹಾರದ ಎಸ್‌ಐಆರ್‌ನಲ್ಲಿ ಉಂಟಾದ ಗೊಂದಲಗಳನ್ನು ಬೆಟ್ಟು ಮಾಡಿದ ಸ್ಟಾಲಿನ್, “ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಪಾರದರ್ಶಕತೆಯ ಕೊರತೆಯು ಸಾರ್ವಜನಿಕ ಮನಸ್ಸಿನಲ್ಲಿ ಅನುಮಾನವನ್ನು ಹೆಚ್ಚಿಸಿದೆ ಎಂದಿದ್ದಾರೆ.

12 ರಾಜ್ಯಗಳಲ್ಲಿ ಎರಡನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...