Homeಮುಖಪುಟ'ನಮಗೆ ಪಿತೂರಿಯ ಶಂಕೆಯಿದೆ': ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

‘ನಮಗೆ ಪಿತೂರಿಯ ಶಂಕೆಯಿದೆ’: ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

- Advertisement -
- Advertisement -

ತಮಿಳುನಾಡಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುಂದಾಗಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಕ್ರಮಲ್ಲಿ ‘ಪಿತೂರಿ’ಯ ಶಂಕೆ ವ್ಯಕ್ತಪಡಿಸಿರುವ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನವೆಂಬರ್ 2ರಂದು ಚೆನ್ನೈನಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.

ತಮಿಳುನಾಡು ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಮುಂದಿನ ಹಂತದ ಎಸ್‌ಐಆರ್ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ಘೋಷಿಸಿದೆ. ಈ ಬೆನ್ನಲ್ಲೇ ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿ ಜಾತ್ಯತೀತ ಪ್ರಗತಿಪರ ಒಕ್ಕೂಟದ ನಾಯಕರ ಸಮಾಲೋಚನಾ ಸಭೆ ನಡೆದಿದೆ. ಸಭೆಯ ಬಳಿಕ ನವೆಂಬರ್ 2ರ ಸರ್ವಪಕ್ಷ ಸಭೆಗೆ ಆಹ್ವಾನ ನೀಡಲಾಗಿದೆ.

ಜಂಟಿ ಹೇಳಿಕೆಯಲ್ಲಿ, ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಪಡಿಸುತ್ತಿದೆ. ಸ್ವತಂತ್ರ ಸಂಸ್ಥೆಗಳನ್ನು ತನ್ನ ಇಚ್ಛೆಯಂತೆ ದುರುಪಯೋಗಪಡಿಸಿಕೊಳ್ಳುತ್ತಿದೆ. ಚುನಾವಣಾ ಆಯೋಗದ ಕಾರ್ಯನಿರ್ವಹಣೆ ವಿವಾದಾತ್ಮಕ ಮಾತ್ರವಲ್ಲದೆ, ಅನುಮಾನಾಸ್ಪದವಾಗಿದೆ ಎಂದು ಡಿಎಂಕೆ ಮೈತ್ರಿಕೂಟದ ನಾಯಕರು ಹೇಳಿದ್ದಾರೆ.

ಬಿಹಾರದಲ್ಲಿ ನಡೆಸಲಾದ ಎಸ್‌ಐಆರ್ ಅನ್ನು ಉಲ್ಲೇಖಿಸಿದ ನಾಯಕರು, “ಬಿಹಾರದಲ್ಲಿ ನಡೆದ ಎಸ್‌ಐಆರ್ ವಾಸ್ತವವಾಗಿ ನಿಜವಾದ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ಸಂಚು ಎಂಬುವುದು ನಮಗೆ ಗೊತ್ತಾಗಿದೆ. ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಕೂಡ ಪಾಲಿಸಿಲ್ಲ. ಈ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಯನ್ನು ನಡೆಸಲು ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ಪ್ರಚೋದಿಸಿದೆ” ಎಂದು ಆರೋಪಿಸಿದ್ದಾರೆ.

ನವೆಂಬರ್ ಮತ್ತು ಡಿಸೆಂಬರ್ ಮಳೆಗಾಲದ ತಿಂಗಳುಗಳಲ್ಲಿ ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸುವುದು ತುಂಬಾ ಕಷ್ಟಕರ ಮತ್ತು ಪ್ರಾಯೋಗಿಕವಾಗಿ ಅಸಾಧ್ಯ. ಚುನಾವಣಾ ಆಯೋಗ ಘೋಷಿಸಿದ ಕಾರ್ಯವಿಧಾನಗಳು ಜನಸಂಖ್ಯೆಯ ಹೆಚ್ಚಿನ ಭಾಗಕ್ಕೆ ತೊಂದರೆಯನ್ನುಂಟುಮಾಡುತ್ತವೆ ಎಂದು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಎಸ್‌ಐಆರ್‌ಗೆ ಆಧಾರ್ ಕಾರ್ಡ್ ಅನ್ನು ಏಕೆ ಸ್ವೀಕರಿಸಿಲ್ಲ? ಪದೇ ಪದೇ ಒತ್ತಾಯಿಸಿದರೂ ಪಡಿತರ ಚೀಟಿಯನ್ನು ಏಕೆ ಸ್ವೀಕರಿಸಿಲ್ಲ ಎಂದು ಡಿಎಂಕೆ ಮೈತ್ರಿಕೂಟದ ನಾಯಕರು ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಅಗತ್ಯವನ್ನು ಒಪ್ಪಿಕೊಂಡರೂ, ಆತುರದಿಂದ ಈ ಪ್ರಕ್ರಿಯೆ ನಡೆಸಬಾರದು ಎಂದಿದ್ದಾರೆ.

“ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗ, ಈಗ ಎಸ್‌ಐಆರ್ ಘೋಷಿಸುವುದು ಅನ್ಯಾಯ. ತಮಿಳುನಾಡಿನ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಪಿತೂರಿ ನಡೆಯುತ್ತಿದೆ ಎಂಬ ಅನುಮಾನ ನಮಗಿದೆ. ಬಿಹಾರದಲ್ಲಿ ಮುಸ್ಲಿಮರು, ಪರಿಶಿಷ್ಟ ಜಾತಿ ಸಮುದಾಯಗಳು ಮತ್ತು ಮಹಿಳೆಯರನ್ನು ಹೆಸರು ತೆಗೆಯುವಿಕೆಗೆ ಗುರಿಯಾಗಿಸಲಾಗಿತ್ತು. ತಮಿಳುನಾಡು ಅಂತಹ ಸಂಚನ್ನು ಎಂದಿಗೂ ಅನುಮತಿಸುವುದಿಲ್ಲ. ಈ ವಿಷಯದಲ್ಲಿ ರಾಜ್ಯವು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಲಿದೆ” ಎಂದು ನಾಯಕರು ಹೇಳಿದ್ದಾರೆ.

ಇದೇ ವಿಷಯದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸ್ಟಾಲಿನ್, “ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ. ತಮಿಳುನಾಡು ಅದನ್ನು ಕೊಲ್ಲುವ ಯಾವುದೇ ಪ್ರಯತ್ನದ ವಿರುದ್ಧ ಹೋರಾಡುತ್ತದೆ ಮತ್ತು ತಮಿಳುನಾಡು ಗೆಲ್ಲುತ್ತದೆ” ಎಂದು ಬರೆದುಕೊಂಡಿದ್ದಾರೆ.

“ಆತುರ ಮತ್ತು ಅಪಾರದರ್ಶಕ ರೀತಿಯಲ್ಲಿ ಎಸ್‌ಐಆರ್‌ ನಡೆಸುವುದು ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಮತ್ತು ಬಿಜೆಪಿಗೆ ಸಹಾಯ ಮಾಡಲು ಚುನಾವಣಾ ಆಯೋಗ ನಡೆಸುತ್ತಿರುವ ಪಿತೂರಿಯಲ್ಲದೆ ಬೇರೇನೂ ಅಲ್ಲ” ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಹಾರದ ಎಸ್‌ಐಆರ್‌ನಲ್ಲಿ ಉಂಟಾದ ಗೊಂದಲಗಳನ್ನು ಬೆಟ್ಟು ಮಾಡಿದ ಸ್ಟಾಲಿನ್, “ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಪಾರದರ್ಶಕತೆಯ ಕೊರತೆಯು ಸಾರ್ವಜನಿಕ ಮನಸ್ಸಿನಲ್ಲಿ ಅನುಮಾನವನ್ನು ಹೆಚ್ಚಿಸಿದೆ ಎಂದಿದ್ದಾರೆ.

12 ರಾಜ್ಯಗಳಲ್ಲಿ ಎರಡನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...