Homeಮುಖಪುಟಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

- Advertisement -
- Advertisement -

ಭಾರತೀಯ ರಾಯಭಾರಿ ಕಚೇರಿಯು ವಿದ್ಯಾರ್ಥಿಗಳಿಗೆ ವಿಮಾನ ಹತ್ತುವ ಮೊದಲು ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಹೇಳಿರುವುದಾಗಿ ವಿದ್ಯಾರ್ಥಿನಿಯರು ಆರೋಪಿಸಿರುವ ವಿಡಿಯೊ ವೈರಲ್‌ ಆಗಿದೆ.

ಈ ವಿಡಿಯೊವನ್ನು ಕಾಂಗ್ರೆಸ್‌ನ ಸೇವಾದಳ ಟ್ವಿಟರ್‌ ಖಾತೆಯ ಮೂಲಕ ಹಂಚಿಕೊಳ್ಳಲಾಗಿದೆ. “ಟಾಯ್ಲೆಟ್ ಕ್ಲೀನ್ ಮಾಡಲು ಹೇಳಿರುವುದು ಹಾಸ್ಯಾಸ್ಪದ ಮತ್ತು ಅತ್ಯಂತ ಅಸೂಕ್ಷ್ಮ ಹೇಳಿಕೆಯಾಗಿದೆ. ಮೋದಿ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕು” ಎಂದು ಸೇವಾದಳ ಟೀಕಿಸಿದೆ.

ವಿಡಿಯೊದಲ್ಲಿ ಮಾತನಾಡಿರುವ ವಿದ್ಯಾರ್ಥಿನಿಯು, “ಒಂದು ಶೆಲ್ಟರ್‌ನಲ್ಲಿ ಸಾವಿರ ವಿದ್ಯಾರ್ಥಿಗಳು ಇದ್ದೆವು. ಯಾರು ಮೊದಲು ಬಾತ್‌ರೂಮ್‌ ಕ್ಲೀನ್ ಮಾಡುತ್ತೀರೋ ಅವರನ್ನು ಮೊದಲು ಕರೆದುಕೊಂಡು ಹೋಗುತ್ತೇವೆ ಎಂದು ಭಾರತೀಯ ರಾಯಭಾರಿ ಕಚೇರಿ ಹೇಳಿತು. ನಾವು ಅಷ್ಟು ಕಷ್ಟಪಡುತ್ತಿದ್ದಾಗ ಬಾತ್‌ರೂಮ್‌ ಕ್ಲೀನ್‌ ಮಾಡಿ ಅಂದರು” ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

“ಮಂತ್ರಿಗಳು, ಅಧಿಕಾರಿಗಳು ಇರಲಿಲ್ಲವೇ?” ಎಂದು ಕೇಳಿದಾಗ, “ಅಲ್ಲಿಂದ ಹೊರಗೆ ಬರುವುದು ನಮಗೆ ಮುಖ್ಯವಾಗಿತ್ತು” ಎಂದು ವಿದ್ಯಾರ್ಥಿನಿ ಹೇಳುತ್ತಾರೆ. ಈ ವಿಡಿಯೊವನ್ನು ಕಾಂಗ್ರೆಸ್ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ವಿಚಾರದಲ್ಲಿ ಭಾರತ ಸರ್ಕಾರ ನಿಷ್ಕ್ರಿಯವಾಗಿದೆ ಎಂಬ ಆರೋಪಗಳು ಹೆಚ್ಚಾಗುತ್ತಿವೆ. ಯುದ್ಧದ ನೆಲದಲ್ಲಿ ಸಿಲುಕಿರುವ ಹಾಗೂ ಅಲ್ಲಿಂದ ವಾಪಸ್‌ ಬರುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ನಿಷ್ಕ್ರಿಯತೆಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ.

ಬಿಹಾರ ಮೋತಿಹಾರಿ ಮೂಲದ ದಿವ್ಯಾಂಶು ಸಿಂಗ್ ಎಂಬ ವಿದ್ಯಾರ್ಥಿ ಉಕ್ರೇನ್‌ನಿಂದ ಹಂಗೇರಿ ಮೂಲಕ ಗುರುವಾರ ಮಧ್ಯಾಹ್ನ ದೆಹಲಿಗೆ ಬಂದಿಳಿದಿದ್ದು ಅವರನ್ನು ಗುಲಾಬಿಯೊಂದಿಗೆ ಸ್ವಾಗತಿಸಲಾಗಿತ್ತು. “ಒಕ್ಕೂಟ ಸರ್ಕಾರವು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತಿಲ್ಲ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು “ಉಕ್ರೇನ್‌ನಿಂದ ನಾಗರಿಕರನ್ನು ರಕ್ಷಿಸಲು ಸಮಯೋಚಿತ ಕ್ರಮಗಳನ್ನು ತೆಗೆದುಕೊಳ್ಳದೆ ಹೂವುಗಳನ್ನು ವಿತರಿಸುವುದು ಅರ್ಥಹೀನ” ಎಂದು ಹೇಳಿದ್ದರು.

ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ನಿಮಗೆ ಸಹಾಯ ಸಿಕ್ಕಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ನಾವು ಹಂಗೇರಿಗೆ ಗಡಿ ದಾಟಿದ ನಂತರವೇ ನಮಗೆ ಸಹಾಯ ಸಿಕ್ಕಿತು. ಅದಕ್ಕೂ ಮೊದಲು ಯಾವುದೇ ಸಹಾಯ ಮಾಡಲಿಲ್ಲ. ನಾವಾಗಿಯೆ ಬಂದಿದ್ದು, ನಮ್ಮ ಹತ್ತು ಮಂದಿಯ ಗುಂಪು ರೈಲಿನಲ್ಲಿ ಹತ್ತಿ ಬಂದಿದ್ದೇವೆ. ಆ ರೈಲು ತುಂಬಿ ತುಳುಕುತ್ತಿತ್ತು” ಎಂದು ಹೇಳಿದ್ದಾರೆ.

ಅನೇಕ ವಿದ್ಯಾರ್ಥಿಗಳು ಸರ್ಕಾರದ ನಿಷ್ಕ್ರಿಯತೆಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ. ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.


ಇದನ್ನೂ ಓದಿರಿ: ‘ಈ ಗುಲಾಬಿಯಿಂದ ಏನು ಮಾಡುವುದು?’: ಕೇಂದ್ರ ಸರ್ಕಾರದ ವಿರುದ್ಧ ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಿದ್ಯಾರ್ಥಿಗಳಿಗೆ ಶೌಚಾಲಯ ತೊಳೆಯುವಂತೆ ಹೇಳಿದ್ದು ಅಮಾನವೀಯ. ಈ ರೀತಿಯಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿರುವ ಭಾರತದ ರಾಯಬಾರ ಕಚೇರಿಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...