Homeಮುಖಪುಟಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

- Advertisement -
- Advertisement -

ಭಾರತೀಯ ರಾಯಭಾರಿ ಕಚೇರಿಯು ವಿದ್ಯಾರ್ಥಿಗಳಿಗೆ ವಿಮಾನ ಹತ್ತುವ ಮೊದಲು ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಹೇಳಿರುವುದಾಗಿ ವಿದ್ಯಾರ್ಥಿನಿಯರು ಆರೋಪಿಸಿರುವ ವಿಡಿಯೊ ವೈರಲ್‌ ಆಗಿದೆ.

ಈ ವಿಡಿಯೊವನ್ನು ಕಾಂಗ್ರೆಸ್‌ನ ಸೇವಾದಳ ಟ್ವಿಟರ್‌ ಖಾತೆಯ ಮೂಲಕ ಹಂಚಿಕೊಳ್ಳಲಾಗಿದೆ. “ಟಾಯ್ಲೆಟ್ ಕ್ಲೀನ್ ಮಾಡಲು ಹೇಳಿರುವುದು ಹಾಸ್ಯಾಸ್ಪದ ಮತ್ತು ಅತ್ಯಂತ ಅಸೂಕ್ಷ್ಮ ಹೇಳಿಕೆಯಾಗಿದೆ. ಮೋದಿ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕು” ಎಂದು ಸೇವಾದಳ ಟೀಕಿಸಿದೆ.

ವಿಡಿಯೊದಲ್ಲಿ ಮಾತನಾಡಿರುವ ವಿದ್ಯಾರ್ಥಿನಿಯು, “ಒಂದು ಶೆಲ್ಟರ್‌ನಲ್ಲಿ ಸಾವಿರ ವಿದ್ಯಾರ್ಥಿಗಳು ಇದ್ದೆವು. ಯಾರು ಮೊದಲು ಬಾತ್‌ರೂಮ್‌ ಕ್ಲೀನ್ ಮಾಡುತ್ತೀರೋ ಅವರನ್ನು ಮೊದಲು ಕರೆದುಕೊಂಡು ಹೋಗುತ್ತೇವೆ ಎಂದು ಭಾರತೀಯ ರಾಯಭಾರಿ ಕಚೇರಿ ಹೇಳಿತು. ನಾವು ಅಷ್ಟು ಕಷ್ಟಪಡುತ್ತಿದ್ದಾಗ ಬಾತ್‌ರೂಮ್‌ ಕ್ಲೀನ್‌ ಮಾಡಿ ಅಂದರು” ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

“ಮಂತ್ರಿಗಳು, ಅಧಿಕಾರಿಗಳು ಇರಲಿಲ್ಲವೇ?” ಎಂದು ಕೇಳಿದಾಗ, “ಅಲ್ಲಿಂದ ಹೊರಗೆ ಬರುವುದು ನಮಗೆ ಮುಖ್ಯವಾಗಿತ್ತು” ಎಂದು ವಿದ್ಯಾರ್ಥಿನಿ ಹೇಳುತ್ತಾರೆ. ಈ ವಿಡಿಯೊವನ್ನು ಕಾಂಗ್ರೆಸ್ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ವಿಚಾರದಲ್ಲಿ ಭಾರತ ಸರ್ಕಾರ ನಿಷ್ಕ್ರಿಯವಾಗಿದೆ ಎಂಬ ಆರೋಪಗಳು ಹೆಚ್ಚಾಗುತ್ತಿವೆ. ಯುದ್ಧದ ನೆಲದಲ್ಲಿ ಸಿಲುಕಿರುವ ಹಾಗೂ ಅಲ್ಲಿಂದ ವಾಪಸ್‌ ಬರುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ನಿಷ್ಕ್ರಿಯತೆಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ.

ಬಿಹಾರ ಮೋತಿಹಾರಿ ಮೂಲದ ದಿವ್ಯಾಂಶು ಸಿಂಗ್ ಎಂಬ ವಿದ್ಯಾರ್ಥಿ ಉಕ್ರೇನ್‌ನಿಂದ ಹಂಗೇರಿ ಮೂಲಕ ಗುರುವಾರ ಮಧ್ಯಾಹ್ನ ದೆಹಲಿಗೆ ಬಂದಿಳಿದಿದ್ದು ಅವರನ್ನು ಗುಲಾಬಿಯೊಂದಿಗೆ ಸ್ವಾಗತಿಸಲಾಗಿತ್ತು. “ಒಕ್ಕೂಟ ಸರ್ಕಾರವು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತಿಲ್ಲ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು “ಉಕ್ರೇನ್‌ನಿಂದ ನಾಗರಿಕರನ್ನು ರಕ್ಷಿಸಲು ಸಮಯೋಚಿತ ಕ್ರಮಗಳನ್ನು ತೆಗೆದುಕೊಳ್ಳದೆ ಹೂವುಗಳನ್ನು ವಿತರಿಸುವುದು ಅರ್ಥಹೀನ” ಎಂದು ಹೇಳಿದ್ದರು.

ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ನಿಮಗೆ ಸಹಾಯ ಸಿಕ್ಕಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ನಾವು ಹಂಗೇರಿಗೆ ಗಡಿ ದಾಟಿದ ನಂತರವೇ ನಮಗೆ ಸಹಾಯ ಸಿಕ್ಕಿತು. ಅದಕ್ಕೂ ಮೊದಲು ಯಾವುದೇ ಸಹಾಯ ಮಾಡಲಿಲ್ಲ. ನಾವಾಗಿಯೆ ಬಂದಿದ್ದು, ನಮ್ಮ ಹತ್ತು ಮಂದಿಯ ಗುಂಪು ರೈಲಿನಲ್ಲಿ ಹತ್ತಿ ಬಂದಿದ್ದೇವೆ. ಆ ರೈಲು ತುಂಬಿ ತುಳುಕುತ್ತಿತ್ತು” ಎಂದು ಹೇಳಿದ್ದಾರೆ.

ಅನೇಕ ವಿದ್ಯಾರ್ಥಿಗಳು ಸರ್ಕಾರದ ನಿಷ್ಕ್ರಿಯತೆಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ. ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.


ಇದನ್ನೂ ಓದಿರಿ: ‘ಈ ಗುಲಾಬಿಯಿಂದ ಏನು ಮಾಡುವುದು?’: ಕೇಂದ್ರ ಸರ್ಕಾರದ ವಿರುದ್ಧ ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಿದ್ಯಾರ್ಥಿಗಳಿಗೆ ಶೌಚಾಲಯ ತೊಳೆಯುವಂತೆ ಹೇಳಿದ್ದು ಅಮಾನವೀಯ. ಈ ರೀತಿಯಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿರುವ ಭಾರತದ ರಾಯಬಾರ ಕಚೇರಿಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಬೇಕು.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...