Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...