Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...