Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...