Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...