Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...