Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...