Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...