Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...