Homeಮುಖಪುಟನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ" ಎಂದು ಪೊಲೀಸರು ಹೇಳುತ್ತಾರೆ.

- Advertisement -
- Advertisement -

ಭಾರತದಲ್ಲಿ ಇಸ್ಲಾಮೋಫೋಬಿಯಾ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಬಹಿರಂಗ ಉದಾಹರಣೆಯೊಂದು ಮಧ್ಯಪ್ರದೇಶದ ಬೇತುಲ್‌ನಲ್ಲಿ ವರದಿಯಾಗಿದೆ. ಇದರಲ್ಲಿ ಪೊಲೀಸರೆ ಪ್ರಧಾನ ಪಾತ್ರಧಾರಿಗಲಾಗಿದ್ದು ಅವರ ಅಧಿಕಾರ ದುರುಪಯೋಗ ಮತ್ತು ಮುಸ್ಲಿಂ ದ್ವೇಷ ಹಾಡಹಗಲೇ ಜಗಜ್ಜಾಹೀರಾಗಿದೆ.

ಮಾರ್ಚ್ 23 ರಂದು ವಕೀಲ ದೀಪಕ್ ಬುಂಡೆಲೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಾಜ್ಯ ಪೊಲೀಸರು ಅವರನ್ನು ಕ್ರೂರವಾಗಿ ಥಳಿಸಿದ್ದರು. ಅಲ್ಲದೇ ದೀಪಕ್‌ ಒಂದು ತಿಂಗಳ ನಂತರ, ಅವರು ತಮ್ಮ ದೂರನ್ನು ಹಿಂಪಡೆಯುವಂತೆ ಪೊಲೀಸರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸ್ ಅಧಿಕಾರಿಗಳು, ಬುಂಡೆಲೆ ಅವರನ್ನು ಮುಸ್ಲಿಂ ವ್ಯಕ್ತಿ ಎಂದು ತಪ್ಪಾಗಿ ಗುರುತಿಸಿದ್ದರಿಂದ ಅವರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ!

ನಡೆದಿದ್ದೇನು?

ಮಾರ್ಚ್ 23 ರಂದು ಸಂಜೆ 5.30 ರಿಂದ 6 ರವರೆಗೆ ಅವರು ಆಸ್ಪತ್ರೆಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದಿದ್ದಾರೆ. “ಆಗಿನ್ನು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ಬಂದಿರಲ್ಲ. ಆದರೆ ಸೆಕ್ಷನ್ 144 ಅನ್ನು ಬೆತುಲ್‌ನಲ್ಲಿ ವಿಧಿಸಲಾಗಿತ್ತು. ನಾನು ಕಳೆದ 15 ವರ್ಷಗಳಿಂದ ತೀವ್ರ ಮಧುಮೇಹ ಮತ್ತು ರಕ್ತದೊತ್ತಡ ರೋಗಿಯಾಗಿದ್ದೇನೆ. ನನಗೆ ಆರೋಗ್ಯವಾಗದ ಕಾರಣ, ನಾನು ಆಸ್ಪತ್ರೆಗೆ ಭೇಟಿ ನೀಡಲು ಮತ್ತು ಕೆಲವು ಔಷಧಿಗಳನ್ನು ಪಡೆಯಲು ಹೊರಟಿದ್ದೆ. ಆದರೆ ನನ್ನನ್ನು ಪೊಲೀಸರು ಮಧ್ಯದಲ್ಲಿ ನಿಲ್ಲಿಸಿದರು. ಆಗ ನಾನು ಔಷಧಿಗಳನ್ನು ಪಡೆದುಕೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಗೆ ವಿವರಿಸಿದೆ. ಆದರೆ ಅವರಲ್ಲಿ ಒಬ್ಬರು ನಾನು ಹೇಳುತ್ತಿರುವುದನ್ನು ಕೇಳದೆ ಕಪಾಳಕ್ಕೆ ಹೊಡೆದರು” ಎಂದಿದಾರೆ.

“ಪೊಲೀಸರು ಸಾಂವಿಧಾನಿಕ ಮಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾನು ಅವರಿಗೆ ಹೇಳಿದೆ, ಮತ್ತು ನಾನು ತಪ್ಪು ಮಾಡಿದ್ದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಬಂಧನಕ್ಕೊಳಗಾಗಲು ಸಿದ್ಧನಿದ್ದೇನೆ ಎಂದು ಹೇಳಿದೆ. ಇದನ್ನು ಕೇಳಿದ ಪೊಲೀಸ್ ಸಿಬ್ಬಂದಿ ಕೋಪದಿಂದ ನನ್ನನ್ನು ಮತ್ತು ಭಾರತೀಯ ಸಂವಿಧಾನವನ್ನು ನಿಂದಿಸಲು ಪ್ರಾರಂಭಿಸಿದರು. ಆಗ ಅನೇಕ ಪೊಲೀಸ್ ಅಧಿಕಾರಿಗಳು ಬಂದು ನನ್ನನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು” ಎಂದು ಬುಂಡೆಲೆ ಹೇಳಿದ್ದಾರೆ.

ನಾನು ವಕೀಲನಾಗಿದ್ದೇನೆ ಮತ್ತು ಕೇಸು ದಾಖಲಿಸುತ್ತೇನೆ ಎಂದು ಹೇಳಿದ ನಂತರವೇ ಅವರು ನನ್ನನ್ನು ಹೊಡೆಯುವುದನ್ನು ನಿಲ್ಲಿಸಿದರು “ಆದರೆ ಆ ಹೊತ್ತಿಗೆ ನನ್ನ ಕಿವಿಯಲ್ಲಿ ತೀವ್ರವಾಗಿ ರಕ್ತಸ್ರಾವವಾಗಲು ಪ್ರಾರಂಭಿಸಿತು” ಎಂದು ಬುಂಡೆಲೆ ಆರೋಪಿಸಿದ್ದಾರೆ. ನಂತರ ಆಸ್ಪತ್ರೆಗೆ ಹೋಗಲು ನಾನು ನನ್ನ ಸ್ನೇಹಿತ ಮತ್ತು ಸಹೋದರನನ್ನು ಕರೆದು ಎಂಎಲ್ಸಿ ವರದಿ ಪಡೆದೆ. ಮಾರ್ಚ್ 24 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಭಡೋರಿಯಾ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೊಹ್ರಿ ಅವರಿಗೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನಂತರ ಮುಖ್ಯಮಂತ್ರಿ, ರಾಜ್ಯದ ಮಾನವ ಹಕ್ಕುಗಳ ಆಯೋಗ, ಮಧ್ಯಪ್ರದೇಶದ ಮುಖ್ಯ ನ್ಯಾಯಮೂರ್ತಿ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳಿಗೆ ಪತ್ರ ಬರೆದೆ. ಮಾರ್ಚ್ 23ರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಿಗಾಗಿ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿದ್ದೇನೆ, ಆದರೆ ಮಾಹಿತಿಯನ್ನು ನಿರಾಕರಿಸಲಾಗಿದೆ ಎಂದು ಬುಂಡೆಲೆ ಹೇಳಿದ್ದಾರೆ. “ನನ್ನ ಆರ್‌ಟಿಐ ಅರ್ಜಿಗೆ ಮಾಹಿತಿ ನೀಡದಿದ್ದುದ್ದಕ್ಕೆ ಪೊಲೀಸರು ಕಾರಣವನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಸರ್ಕಾರಿ ಫೈಲ್‌ಗಳಿಂದ ಅಳಿಸಿರಬಹುದು ಎಂದು ನನಗೆ ಅನಧಿಕೃತವಾಗಿ ತಿಳಿಸಲಾಗಿದೆ” ಎಂದು ಅವರು ದೂರಿದ್ದಾರೆ.

ಅಂದಿನಿಂದ, ಪೊಲೀಸರು ದೂರನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಎಂದು ತಪ್ಪಾಗಿ ತಿಳಿದು ಥಳಿಸಲಾಗಿದೆ. ನೀವು ಕೆಲವು ಉನ್ನತ ಅಧಿಕಾರಿಗಳು ನನ್ನ ದೂರನ್ನು ಹಿಂತೆಗೆದುಕೊಂಡರೆ ಘಟನೆಯನ್ನು ಖಂಡಿಸಿ ಕ್ಷಮೆಯಾಚಿಸುವ ಹೇಳಿಕೆ ನೀಡಬಹುದು ಎಂದು ಹೇಳಿದ್ದಾರೆ. ಆದರೆ ನನ್ನ ಸ್ನೇಹಿತೆರು ಶಾಂತಿಯುತವಾಗಿ ಕಾನೂನು ಸಮರ ಮುಂದುವರೆಸಲು ಸಲಹೆ ನೀಡಿದ್ದಾರೆ ಎಂದು ಬುಂಡೆಲೆ ತಿಳಿಸಿದ್ದಾರೆ.

“ನಾವು ಆ ಅಧಿಕಾರಿಗಳ ಪರವಾಗಿ [ಬುಂಡೆಲೆ ಮೇಲೆ ಹಲ್ಲೆ ಮಾಡಿದ] ಕ್ಷಮೆಯಾಚಿಸುತ್ತೇವೆ. ಘಟನೆಯಿಂದಾಗಿ ನಾವು ನಿಜವಾಗಿಯೂ ಮುಜುಗರಕ್ಕೊಳಗಾಗಿದ್ದೇವೆ. ನಿಮಗೆ ಬೇಕಾದರೆ ನಾನು ಆ ಅಧಿಕಾರಿಗಳನ್ನು ಕರೆತಂದು ನಿಮ್ಮಲ್ಲಿ ಖುದ್ದಾಗಿ ಕ್ಷಮೆಯಾಚಿಸುತ್ತೇನೆ” ಎಂದು ಆಪಾದಿತ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ.
“ಪೊಲೀಸರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲಿಲ್ಲ ಅಥವಾ ನನ್ನನ್ನು ಥಳಿಸಲಿಲ್ಲ” ಎಂದು ಬರೆಯಲು ನಾನು ನಿಮಗೆ ಹೃತ್ಪೂರ್ವಕ ವಿನಂತಿಯನ್ನು ಮಾಡುತ್ತಿದ್ದೇನೆ. ದಯವಿಟ್ಟು ನಮ್ಮ ವಿನಂತಿಯನ್ನು ಒಪ್ಪಿಕೊಳ್ಳಿ; ನಾವು ಗಾಂಧಿಯವರ ದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಅರ್ಥಮಾಡಿಕೊಳ್ಳಿ; ನಾವೆಲ್ಲರೂ ಗಾಂಧಿಯ ಮಕ್ಕಳು… ನಿಮ್ಮ ಜಾತಿಯಿಂದ ನನಗೆ ಕನಿಷ್ಠ 50 ಸ್ನೇಹಿತರಿದ್ದಾರೆ ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಬುಂಡೆಲೆ ಆರೋಪಿಸುತ್ತಾರೆ.

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ” ಎಂದು ಪೊಲೀಸರು ಹೇಳುತ್ತಾರೆ.

“ನೀವು ಉದ್ದನೆಯ ಗಡ್ಡವನ್ನು ಹೊಂದಿದ್ದೀರಿ. ಆ ಪೊಲೀಸ್‌ (ನಿಮ್ಮ ಮೇಲೆ ಹಲ್ಲೆ ಮಾಡಿದವನು) ಒಬ್ಬ ಕಟ್ಟರ್ (ಕಟ್ಟಾ) ಹಿಂದೂ… ಹಿಂದೂ-ಮುಸ್ಲಿಂ ಗಲಭೆಗಳಲ್ಲಿ ಮುಸ್ಲಿಂನನ್ನು ಬಂಧಿಸಿದಾಗಲೆಲ್ಲಾ ಅವನು ಅವರನ್ನು ಯಾವಾಗಲೂ ಕ್ರೂರವಾಗಿ ಹೊಡೆಯುತ್ತಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬುಂಡೆಲೆ ಮತ್ತಷ್ಟು ಚಿಂತಿತರಾಗಿದ್ದು, ಯಾವುದೇ ಕಾರಣಕ್ಕೂ ದೂರ ಹಿಂಪಡೆಯದಿರಲು ನಿರ್ಧರಿಸಿದ್ದಾರೆ. ಆದರೆ ಈ ಪ್ರಕರಣದ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ಹೇಳಿದ್ದಾರೆ. “ಪೊಲೀಸ್ ಅಧಿಕಾರಿಗಳು ಕ್ಷಮೆಯಾಚಿಸಿದ ರೀತಿಗೆ ನಾನು ಆಘಾತಕ್ಕೊಳಗಾಗಿದ್ದೆ. ನಾನು ಮುಸ್ಲಿಮನಾಗಿದ್ದರೂ, ಯಾವುದೇ ಕಾರಣವಿಲ್ಲದೆ ನನ್ನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ” ಎಂದಿದ್ದಾರೆ.

ಇದಿಷ್ಟು ನಡೆದ ಘಟನೆಯಾಗಿದೆ. ಇಲ್ಲಿ ಮಧ್ಯಪ್ರದೇಶದ ಪೊಲೀಸರು ಪಕ್ಷಪಾತಿಯಂತೆ ವರ್ತಿಸಿದ್ದಾರೆ. ಅಧಿಕಾರ ದುರಪಯೋಗಪಡಿಸಿಕೊಂಡಿದ್ದಾರೆ. ಒಂದು ಧರ್ಮದ ವಿರುದ್ಧ ಕೆಲಸ ಮಾಡಿದ್ದಾರೆ. ಅಂದರೆ ತಪ್ಪುಗಳ ಮೇಲೆ ತಪ್ಪು ಮಾಡಿದ್ದಾರೆ. ಸಂತ್ರಸ್ತ ವ್ಯಕ್ತಿ ವಕೀಲನಾಗಿರದಿದ್ದರೆ ಪೊಲೀಸರು ಎಂದೋ ಈ ಕೇಸನ್ನು ಮುಚ್ಚಿಹಾಕಿರುತ್ತಿದ್ದರು ಎಂಬುದರಲ್ಲಿ ಸಂದೇಹವಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಮೂಲ: ದಿ ವೈರ್


ಇದನ್ನೂ ಓದಿ: ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...