Homeಮುಖಪುಟನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ" ಎಂದು ಪೊಲೀಸರು ಹೇಳುತ್ತಾರೆ.

- Advertisement -
- Advertisement -

ಭಾರತದಲ್ಲಿ ಇಸ್ಲಾಮೋಫೋಬಿಯಾ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಬಹಿರಂಗ ಉದಾಹರಣೆಯೊಂದು ಮಧ್ಯಪ್ರದೇಶದ ಬೇತುಲ್‌ನಲ್ಲಿ ವರದಿಯಾಗಿದೆ. ಇದರಲ್ಲಿ ಪೊಲೀಸರೆ ಪ್ರಧಾನ ಪಾತ್ರಧಾರಿಗಲಾಗಿದ್ದು ಅವರ ಅಧಿಕಾರ ದುರುಪಯೋಗ ಮತ್ತು ಮುಸ್ಲಿಂ ದ್ವೇಷ ಹಾಡಹಗಲೇ ಜಗಜ್ಜಾಹೀರಾಗಿದೆ.

ಮಾರ್ಚ್ 23 ರಂದು ವಕೀಲ ದೀಪಕ್ ಬುಂಡೆಲೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಾಜ್ಯ ಪೊಲೀಸರು ಅವರನ್ನು ಕ್ರೂರವಾಗಿ ಥಳಿಸಿದ್ದರು. ಅಲ್ಲದೇ ದೀಪಕ್‌ ಒಂದು ತಿಂಗಳ ನಂತರ, ಅವರು ತಮ್ಮ ದೂರನ್ನು ಹಿಂಪಡೆಯುವಂತೆ ಪೊಲೀಸರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸ್ ಅಧಿಕಾರಿಗಳು, ಬುಂಡೆಲೆ ಅವರನ್ನು ಮುಸ್ಲಿಂ ವ್ಯಕ್ತಿ ಎಂದು ತಪ್ಪಾಗಿ ಗುರುತಿಸಿದ್ದರಿಂದ ಅವರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ!

ನಡೆದಿದ್ದೇನು?

ಮಾರ್ಚ್ 23 ರಂದು ಸಂಜೆ 5.30 ರಿಂದ 6 ರವರೆಗೆ ಅವರು ಆಸ್ಪತ್ರೆಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದಿದ್ದಾರೆ. “ಆಗಿನ್ನು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ಬಂದಿರಲ್ಲ. ಆದರೆ ಸೆಕ್ಷನ್ 144 ಅನ್ನು ಬೆತುಲ್‌ನಲ್ಲಿ ವಿಧಿಸಲಾಗಿತ್ತು. ನಾನು ಕಳೆದ 15 ವರ್ಷಗಳಿಂದ ತೀವ್ರ ಮಧುಮೇಹ ಮತ್ತು ರಕ್ತದೊತ್ತಡ ರೋಗಿಯಾಗಿದ್ದೇನೆ. ನನಗೆ ಆರೋಗ್ಯವಾಗದ ಕಾರಣ, ನಾನು ಆಸ್ಪತ್ರೆಗೆ ಭೇಟಿ ನೀಡಲು ಮತ್ತು ಕೆಲವು ಔಷಧಿಗಳನ್ನು ಪಡೆಯಲು ಹೊರಟಿದ್ದೆ. ಆದರೆ ನನ್ನನ್ನು ಪೊಲೀಸರು ಮಧ್ಯದಲ್ಲಿ ನಿಲ್ಲಿಸಿದರು. ಆಗ ನಾನು ಔಷಧಿಗಳನ್ನು ಪಡೆದುಕೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಗೆ ವಿವರಿಸಿದೆ. ಆದರೆ ಅವರಲ್ಲಿ ಒಬ್ಬರು ನಾನು ಹೇಳುತ್ತಿರುವುದನ್ನು ಕೇಳದೆ ಕಪಾಳಕ್ಕೆ ಹೊಡೆದರು” ಎಂದಿದಾರೆ.

“ಪೊಲೀಸರು ಸಾಂವಿಧಾನಿಕ ಮಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾನು ಅವರಿಗೆ ಹೇಳಿದೆ, ಮತ್ತು ನಾನು ತಪ್ಪು ಮಾಡಿದ್ದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಬಂಧನಕ್ಕೊಳಗಾಗಲು ಸಿದ್ಧನಿದ್ದೇನೆ ಎಂದು ಹೇಳಿದೆ. ಇದನ್ನು ಕೇಳಿದ ಪೊಲೀಸ್ ಸಿಬ್ಬಂದಿ ಕೋಪದಿಂದ ನನ್ನನ್ನು ಮತ್ತು ಭಾರತೀಯ ಸಂವಿಧಾನವನ್ನು ನಿಂದಿಸಲು ಪ್ರಾರಂಭಿಸಿದರು. ಆಗ ಅನೇಕ ಪೊಲೀಸ್ ಅಧಿಕಾರಿಗಳು ಬಂದು ನನ್ನನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು” ಎಂದು ಬುಂಡೆಲೆ ಹೇಳಿದ್ದಾರೆ.

ನಾನು ವಕೀಲನಾಗಿದ್ದೇನೆ ಮತ್ತು ಕೇಸು ದಾಖಲಿಸುತ್ತೇನೆ ಎಂದು ಹೇಳಿದ ನಂತರವೇ ಅವರು ನನ್ನನ್ನು ಹೊಡೆಯುವುದನ್ನು ನಿಲ್ಲಿಸಿದರು “ಆದರೆ ಆ ಹೊತ್ತಿಗೆ ನನ್ನ ಕಿವಿಯಲ್ಲಿ ತೀವ್ರವಾಗಿ ರಕ್ತಸ್ರಾವವಾಗಲು ಪ್ರಾರಂಭಿಸಿತು” ಎಂದು ಬುಂಡೆಲೆ ಆರೋಪಿಸಿದ್ದಾರೆ. ನಂತರ ಆಸ್ಪತ್ರೆಗೆ ಹೋಗಲು ನಾನು ನನ್ನ ಸ್ನೇಹಿತ ಮತ್ತು ಸಹೋದರನನ್ನು ಕರೆದು ಎಂಎಲ್ಸಿ ವರದಿ ಪಡೆದೆ. ಮಾರ್ಚ್ 24 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಭಡೋರಿಯಾ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೊಹ್ರಿ ಅವರಿಗೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನಂತರ ಮುಖ್ಯಮಂತ್ರಿ, ರಾಜ್ಯದ ಮಾನವ ಹಕ್ಕುಗಳ ಆಯೋಗ, ಮಧ್ಯಪ್ರದೇಶದ ಮುಖ್ಯ ನ್ಯಾಯಮೂರ್ತಿ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳಿಗೆ ಪತ್ರ ಬರೆದೆ. ಮಾರ್ಚ್ 23ರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಿಗಾಗಿ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿದ್ದೇನೆ, ಆದರೆ ಮಾಹಿತಿಯನ್ನು ನಿರಾಕರಿಸಲಾಗಿದೆ ಎಂದು ಬುಂಡೆಲೆ ಹೇಳಿದ್ದಾರೆ. “ನನ್ನ ಆರ್‌ಟಿಐ ಅರ್ಜಿಗೆ ಮಾಹಿತಿ ನೀಡದಿದ್ದುದ್ದಕ್ಕೆ ಪೊಲೀಸರು ಕಾರಣವನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಸರ್ಕಾರಿ ಫೈಲ್‌ಗಳಿಂದ ಅಳಿಸಿರಬಹುದು ಎಂದು ನನಗೆ ಅನಧಿಕೃತವಾಗಿ ತಿಳಿಸಲಾಗಿದೆ” ಎಂದು ಅವರು ದೂರಿದ್ದಾರೆ.

ಅಂದಿನಿಂದ, ಪೊಲೀಸರು ದೂರನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಎಂದು ತಪ್ಪಾಗಿ ತಿಳಿದು ಥಳಿಸಲಾಗಿದೆ. ನೀವು ಕೆಲವು ಉನ್ನತ ಅಧಿಕಾರಿಗಳು ನನ್ನ ದೂರನ್ನು ಹಿಂತೆಗೆದುಕೊಂಡರೆ ಘಟನೆಯನ್ನು ಖಂಡಿಸಿ ಕ್ಷಮೆಯಾಚಿಸುವ ಹೇಳಿಕೆ ನೀಡಬಹುದು ಎಂದು ಹೇಳಿದ್ದಾರೆ. ಆದರೆ ನನ್ನ ಸ್ನೇಹಿತೆರು ಶಾಂತಿಯುತವಾಗಿ ಕಾನೂನು ಸಮರ ಮುಂದುವರೆಸಲು ಸಲಹೆ ನೀಡಿದ್ದಾರೆ ಎಂದು ಬುಂಡೆಲೆ ತಿಳಿಸಿದ್ದಾರೆ.

“ನಾವು ಆ ಅಧಿಕಾರಿಗಳ ಪರವಾಗಿ [ಬುಂಡೆಲೆ ಮೇಲೆ ಹಲ್ಲೆ ಮಾಡಿದ] ಕ್ಷಮೆಯಾಚಿಸುತ್ತೇವೆ. ಘಟನೆಯಿಂದಾಗಿ ನಾವು ನಿಜವಾಗಿಯೂ ಮುಜುಗರಕ್ಕೊಳಗಾಗಿದ್ದೇವೆ. ನಿಮಗೆ ಬೇಕಾದರೆ ನಾನು ಆ ಅಧಿಕಾರಿಗಳನ್ನು ಕರೆತಂದು ನಿಮ್ಮಲ್ಲಿ ಖುದ್ದಾಗಿ ಕ್ಷಮೆಯಾಚಿಸುತ್ತೇನೆ” ಎಂದು ಆಪಾದಿತ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ.
“ಪೊಲೀಸರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲಿಲ್ಲ ಅಥವಾ ನನ್ನನ್ನು ಥಳಿಸಲಿಲ್ಲ” ಎಂದು ಬರೆಯಲು ನಾನು ನಿಮಗೆ ಹೃತ್ಪೂರ್ವಕ ವಿನಂತಿಯನ್ನು ಮಾಡುತ್ತಿದ್ದೇನೆ. ದಯವಿಟ್ಟು ನಮ್ಮ ವಿನಂತಿಯನ್ನು ಒಪ್ಪಿಕೊಳ್ಳಿ; ನಾವು ಗಾಂಧಿಯವರ ದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಅರ್ಥಮಾಡಿಕೊಳ್ಳಿ; ನಾವೆಲ್ಲರೂ ಗಾಂಧಿಯ ಮಕ್ಕಳು… ನಿಮ್ಮ ಜಾತಿಯಿಂದ ನನಗೆ ಕನಿಷ್ಠ 50 ಸ್ನೇಹಿತರಿದ್ದಾರೆ ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಬುಂಡೆಲೆ ಆರೋಪಿಸುತ್ತಾರೆ.

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ” ಎಂದು ಪೊಲೀಸರು ಹೇಳುತ್ತಾರೆ.

“ನೀವು ಉದ್ದನೆಯ ಗಡ್ಡವನ್ನು ಹೊಂದಿದ್ದೀರಿ. ಆ ಪೊಲೀಸ್‌ (ನಿಮ್ಮ ಮೇಲೆ ಹಲ್ಲೆ ಮಾಡಿದವನು) ಒಬ್ಬ ಕಟ್ಟರ್ (ಕಟ್ಟಾ) ಹಿಂದೂ… ಹಿಂದೂ-ಮುಸ್ಲಿಂ ಗಲಭೆಗಳಲ್ಲಿ ಮುಸ್ಲಿಂನನ್ನು ಬಂಧಿಸಿದಾಗಲೆಲ್ಲಾ ಅವನು ಅವರನ್ನು ಯಾವಾಗಲೂ ಕ್ರೂರವಾಗಿ ಹೊಡೆಯುತ್ತಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬುಂಡೆಲೆ ಮತ್ತಷ್ಟು ಚಿಂತಿತರಾಗಿದ್ದು, ಯಾವುದೇ ಕಾರಣಕ್ಕೂ ದೂರ ಹಿಂಪಡೆಯದಿರಲು ನಿರ್ಧರಿಸಿದ್ದಾರೆ. ಆದರೆ ಈ ಪ್ರಕರಣದ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ಹೇಳಿದ್ದಾರೆ. “ಪೊಲೀಸ್ ಅಧಿಕಾರಿಗಳು ಕ್ಷಮೆಯಾಚಿಸಿದ ರೀತಿಗೆ ನಾನು ಆಘಾತಕ್ಕೊಳಗಾಗಿದ್ದೆ. ನಾನು ಮುಸ್ಲಿಮನಾಗಿದ್ದರೂ, ಯಾವುದೇ ಕಾರಣವಿಲ್ಲದೆ ನನ್ನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ” ಎಂದಿದ್ದಾರೆ.

ಇದಿಷ್ಟು ನಡೆದ ಘಟನೆಯಾಗಿದೆ. ಇಲ್ಲಿ ಮಧ್ಯಪ್ರದೇಶದ ಪೊಲೀಸರು ಪಕ್ಷಪಾತಿಯಂತೆ ವರ್ತಿಸಿದ್ದಾರೆ. ಅಧಿಕಾರ ದುರಪಯೋಗಪಡಿಸಿಕೊಂಡಿದ್ದಾರೆ. ಒಂದು ಧರ್ಮದ ವಿರುದ್ಧ ಕೆಲಸ ಮಾಡಿದ್ದಾರೆ. ಅಂದರೆ ತಪ್ಪುಗಳ ಮೇಲೆ ತಪ್ಪು ಮಾಡಿದ್ದಾರೆ. ಸಂತ್ರಸ್ತ ವ್ಯಕ್ತಿ ವಕೀಲನಾಗಿರದಿದ್ದರೆ ಪೊಲೀಸರು ಎಂದೋ ಈ ಕೇಸನ್ನು ಮುಚ್ಚಿಹಾಕಿರುತ್ತಿದ್ದರು ಎಂಬುದರಲ್ಲಿ ಸಂದೇಹವಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಮೂಲ: ದಿ ವೈರ್


ಇದನ್ನೂ ಓದಿ: ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...