Homeಮುಖಪುಟನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ" ಎಂದು ಪೊಲೀಸರು ಹೇಳುತ್ತಾರೆ.

- Advertisement -
- Advertisement -

ಭಾರತದಲ್ಲಿ ಇಸ್ಲಾಮೋಫೋಬಿಯಾ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಬಹಿರಂಗ ಉದಾಹರಣೆಯೊಂದು ಮಧ್ಯಪ್ರದೇಶದ ಬೇತುಲ್‌ನಲ್ಲಿ ವರದಿಯಾಗಿದೆ. ಇದರಲ್ಲಿ ಪೊಲೀಸರೆ ಪ್ರಧಾನ ಪಾತ್ರಧಾರಿಗಲಾಗಿದ್ದು ಅವರ ಅಧಿಕಾರ ದುರುಪಯೋಗ ಮತ್ತು ಮುಸ್ಲಿಂ ದ್ವೇಷ ಹಾಡಹಗಲೇ ಜಗಜ್ಜಾಹೀರಾಗಿದೆ.

ಮಾರ್ಚ್ 23 ರಂದು ವಕೀಲ ದೀಪಕ್ ಬುಂಡೆಲೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಾಜ್ಯ ಪೊಲೀಸರು ಅವರನ್ನು ಕ್ರೂರವಾಗಿ ಥಳಿಸಿದ್ದರು. ಅಲ್ಲದೇ ದೀಪಕ್‌ ಒಂದು ತಿಂಗಳ ನಂತರ, ಅವರು ತಮ್ಮ ದೂರನ್ನು ಹಿಂಪಡೆಯುವಂತೆ ಪೊಲೀಸರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸ್ ಅಧಿಕಾರಿಗಳು, ಬುಂಡೆಲೆ ಅವರನ್ನು ಮುಸ್ಲಿಂ ವ್ಯಕ್ತಿ ಎಂದು ತಪ್ಪಾಗಿ ಗುರುತಿಸಿದ್ದರಿಂದ ಅವರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ!

ನಡೆದಿದ್ದೇನು?

ಮಾರ್ಚ್ 23 ರಂದು ಸಂಜೆ 5.30 ರಿಂದ 6 ರವರೆಗೆ ಅವರು ಆಸ್ಪತ್ರೆಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದಿದ್ದಾರೆ. “ಆಗಿನ್ನು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ಬಂದಿರಲ್ಲ. ಆದರೆ ಸೆಕ್ಷನ್ 144 ಅನ್ನು ಬೆತುಲ್‌ನಲ್ಲಿ ವಿಧಿಸಲಾಗಿತ್ತು. ನಾನು ಕಳೆದ 15 ವರ್ಷಗಳಿಂದ ತೀವ್ರ ಮಧುಮೇಹ ಮತ್ತು ರಕ್ತದೊತ್ತಡ ರೋಗಿಯಾಗಿದ್ದೇನೆ. ನನಗೆ ಆರೋಗ್ಯವಾಗದ ಕಾರಣ, ನಾನು ಆಸ್ಪತ್ರೆಗೆ ಭೇಟಿ ನೀಡಲು ಮತ್ತು ಕೆಲವು ಔಷಧಿಗಳನ್ನು ಪಡೆಯಲು ಹೊರಟಿದ್ದೆ. ಆದರೆ ನನ್ನನ್ನು ಪೊಲೀಸರು ಮಧ್ಯದಲ್ಲಿ ನಿಲ್ಲಿಸಿದರು. ಆಗ ನಾನು ಔಷಧಿಗಳನ್ನು ಪಡೆದುಕೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಗೆ ವಿವರಿಸಿದೆ. ಆದರೆ ಅವರಲ್ಲಿ ಒಬ್ಬರು ನಾನು ಹೇಳುತ್ತಿರುವುದನ್ನು ಕೇಳದೆ ಕಪಾಳಕ್ಕೆ ಹೊಡೆದರು” ಎಂದಿದಾರೆ.

“ಪೊಲೀಸರು ಸಾಂವಿಧಾನಿಕ ಮಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾನು ಅವರಿಗೆ ಹೇಳಿದೆ, ಮತ್ತು ನಾನು ತಪ್ಪು ಮಾಡಿದ್ದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಬಂಧನಕ್ಕೊಳಗಾಗಲು ಸಿದ್ಧನಿದ್ದೇನೆ ಎಂದು ಹೇಳಿದೆ. ಇದನ್ನು ಕೇಳಿದ ಪೊಲೀಸ್ ಸಿಬ್ಬಂದಿ ಕೋಪದಿಂದ ನನ್ನನ್ನು ಮತ್ತು ಭಾರತೀಯ ಸಂವಿಧಾನವನ್ನು ನಿಂದಿಸಲು ಪ್ರಾರಂಭಿಸಿದರು. ಆಗ ಅನೇಕ ಪೊಲೀಸ್ ಅಧಿಕಾರಿಗಳು ಬಂದು ನನ್ನನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು” ಎಂದು ಬುಂಡೆಲೆ ಹೇಳಿದ್ದಾರೆ.

ನಾನು ವಕೀಲನಾಗಿದ್ದೇನೆ ಮತ್ತು ಕೇಸು ದಾಖಲಿಸುತ್ತೇನೆ ಎಂದು ಹೇಳಿದ ನಂತರವೇ ಅವರು ನನ್ನನ್ನು ಹೊಡೆಯುವುದನ್ನು ನಿಲ್ಲಿಸಿದರು “ಆದರೆ ಆ ಹೊತ್ತಿಗೆ ನನ್ನ ಕಿವಿಯಲ್ಲಿ ತೀವ್ರವಾಗಿ ರಕ್ತಸ್ರಾವವಾಗಲು ಪ್ರಾರಂಭಿಸಿತು” ಎಂದು ಬುಂಡೆಲೆ ಆರೋಪಿಸಿದ್ದಾರೆ. ನಂತರ ಆಸ್ಪತ್ರೆಗೆ ಹೋಗಲು ನಾನು ನನ್ನ ಸ್ನೇಹಿತ ಮತ್ತು ಸಹೋದರನನ್ನು ಕರೆದು ಎಂಎಲ್ಸಿ ವರದಿ ಪಡೆದೆ. ಮಾರ್ಚ್ 24 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಭಡೋರಿಯಾ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೊಹ್ರಿ ಅವರಿಗೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನಂತರ ಮುಖ್ಯಮಂತ್ರಿ, ರಾಜ್ಯದ ಮಾನವ ಹಕ್ಕುಗಳ ಆಯೋಗ, ಮಧ್ಯಪ್ರದೇಶದ ಮುಖ್ಯ ನ್ಯಾಯಮೂರ್ತಿ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳಿಗೆ ಪತ್ರ ಬರೆದೆ. ಮಾರ್ಚ್ 23ರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಿಗಾಗಿ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿದ್ದೇನೆ, ಆದರೆ ಮಾಹಿತಿಯನ್ನು ನಿರಾಕರಿಸಲಾಗಿದೆ ಎಂದು ಬುಂಡೆಲೆ ಹೇಳಿದ್ದಾರೆ. “ನನ್ನ ಆರ್‌ಟಿಐ ಅರ್ಜಿಗೆ ಮಾಹಿತಿ ನೀಡದಿದ್ದುದ್ದಕ್ಕೆ ಪೊಲೀಸರು ಕಾರಣವನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಸರ್ಕಾರಿ ಫೈಲ್‌ಗಳಿಂದ ಅಳಿಸಿರಬಹುದು ಎಂದು ನನಗೆ ಅನಧಿಕೃತವಾಗಿ ತಿಳಿಸಲಾಗಿದೆ” ಎಂದು ಅವರು ದೂರಿದ್ದಾರೆ.

ಅಂದಿನಿಂದ, ಪೊಲೀಸರು ದೂರನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಎಂದು ತಪ್ಪಾಗಿ ತಿಳಿದು ಥಳಿಸಲಾಗಿದೆ. ನೀವು ಕೆಲವು ಉನ್ನತ ಅಧಿಕಾರಿಗಳು ನನ್ನ ದೂರನ್ನು ಹಿಂತೆಗೆದುಕೊಂಡರೆ ಘಟನೆಯನ್ನು ಖಂಡಿಸಿ ಕ್ಷಮೆಯಾಚಿಸುವ ಹೇಳಿಕೆ ನೀಡಬಹುದು ಎಂದು ಹೇಳಿದ್ದಾರೆ. ಆದರೆ ನನ್ನ ಸ್ನೇಹಿತೆರು ಶಾಂತಿಯುತವಾಗಿ ಕಾನೂನು ಸಮರ ಮುಂದುವರೆಸಲು ಸಲಹೆ ನೀಡಿದ್ದಾರೆ ಎಂದು ಬುಂಡೆಲೆ ತಿಳಿಸಿದ್ದಾರೆ.

“ನಾವು ಆ ಅಧಿಕಾರಿಗಳ ಪರವಾಗಿ [ಬುಂಡೆಲೆ ಮೇಲೆ ಹಲ್ಲೆ ಮಾಡಿದ] ಕ್ಷಮೆಯಾಚಿಸುತ್ತೇವೆ. ಘಟನೆಯಿಂದಾಗಿ ನಾವು ನಿಜವಾಗಿಯೂ ಮುಜುಗರಕ್ಕೊಳಗಾಗಿದ್ದೇವೆ. ನಿಮಗೆ ಬೇಕಾದರೆ ನಾನು ಆ ಅಧಿಕಾರಿಗಳನ್ನು ಕರೆತಂದು ನಿಮ್ಮಲ್ಲಿ ಖುದ್ದಾಗಿ ಕ್ಷಮೆಯಾಚಿಸುತ್ತೇನೆ” ಎಂದು ಆಪಾದಿತ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ.
“ಪೊಲೀಸರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲಿಲ್ಲ ಅಥವಾ ನನ್ನನ್ನು ಥಳಿಸಲಿಲ್ಲ” ಎಂದು ಬರೆಯಲು ನಾನು ನಿಮಗೆ ಹೃತ್ಪೂರ್ವಕ ವಿನಂತಿಯನ್ನು ಮಾಡುತ್ತಿದ್ದೇನೆ. ದಯವಿಟ್ಟು ನಮ್ಮ ವಿನಂತಿಯನ್ನು ಒಪ್ಪಿಕೊಳ್ಳಿ; ನಾವು ಗಾಂಧಿಯವರ ದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಅರ್ಥಮಾಡಿಕೊಳ್ಳಿ; ನಾವೆಲ್ಲರೂ ಗಾಂಧಿಯ ಮಕ್ಕಳು… ನಿಮ್ಮ ಜಾತಿಯಿಂದ ನನಗೆ ಕನಿಷ್ಠ 50 ಸ್ನೇಹಿತರಿದ್ದಾರೆ ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಬುಂಡೆಲೆ ಆರೋಪಿಸುತ್ತಾರೆ.

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ” ಎಂದು ಪೊಲೀಸರು ಹೇಳುತ್ತಾರೆ.

“ನೀವು ಉದ್ದನೆಯ ಗಡ್ಡವನ್ನು ಹೊಂದಿದ್ದೀರಿ. ಆ ಪೊಲೀಸ್‌ (ನಿಮ್ಮ ಮೇಲೆ ಹಲ್ಲೆ ಮಾಡಿದವನು) ಒಬ್ಬ ಕಟ್ಟರ್ (ಕಟ್ಟಾ) ಹಿಂದೂ… ಹಿಂದೂ-ಮುಸ್ಲಿಂ ಗಲಭೆಗಳಲ್ಲಿ ಮುಸ್ಲಿಂನನ್ನು ಬಂಧಿಸಿದಾಗಲೆಲ್ಲಾ ಅವನು ಅವರನ್ನು ಯಾವಾಗಲೂ ಕ್ರೂರವಾಗಿ ಹೊಡೆಯುತ್ತಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬುಂಡೆಲೆ ಮತ್ತಷ್ಟು ಚಿಂತಿತರಾಗಿದ್ದು, ಯಾವುದೇ ಕಾರಣಕ್ಕೂ ದೂರ ಹಿಂಪಡೆಯದಿರಲು ನಿರ್ಧರಿಸಿದ್ದಾರೆ. ಆದರೆ ಈ ಪ್ರಕರಣದ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ಹೇಳಿದ್ದಾರೆ. “ಪೊಲೀಸ್ ಅಧಿಕಾರಿಗಳು ಕ್ಷಮೆಯಾಚಿಸಿದ ರೀತಿಗೆ ನಾನು ಆಘಾತಕ್ಕೊಳಗಾಗಿದ್ದೆ. ನಾನು ಮುಸ್ಲಿಮನಾಗಿದ್ದರೂ, ಯಾವುದೇ ಕಾರಣವಿಲ್ಲದೆ ನನ್ನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ” ಎಂದಿದ್ದಾರೆ.

ಇದಿಷ್ಟು ನಡೆದ ಘಟನೆಯಾಗಿದೆ. ಇಲ್ಲಿ ಮಧ್ಯಪ್ರದೇಶದ ಪೊಲೀಸರು ಪಕ್ಷಪಾತಿಯಂತೆ ವರ್ತಿಸಿದ್ದಾರೆ. ಅಧಿಕಾರ ದುರಪಯೋಗಪಡಿಸಿಕೊಂಡಿದ್ದಾರೆ. ಒಂದು ಧರ್ಮದ ವಿರುದ್ಧ ಕೆಲಸ ಮಾಡಿದ್ದಾರೆ. ಅಂದರೆ ತಪ್ಪುಗಳ ಮೇಲೆ ತಪ್ಪು ಮಾಡಿದ್ದಾರೆ. ಸಂತ್ರಸ್ತ ವ್ಯಕ್ತಿ ವಕೀಲನಾಗಿರದಿದ್ದರೆ ಪೊಲೀಸರು ಎಂದೋ ಈ ಕೇಸನ್ನು ಮುಚ್ಚಿಹಾಕಿರುತ್ತಿದ್ದರು ಎಂಬುದರಲ್ಲಿ ಸಂದೇಹವಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಮೂಲ: ದಿ ವೈರ್


ಇದನ್ನೂ ಓದಿ: ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...