Homeಮುಖಪುಟನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ" ಎಂದು ಪೊಲೀಸರು ಹೇಳುತ್ತಾರೆ.

- Advertisement -
- Advertisement -

ಭಾರತದಲ್ಲಿ ಇಸ್ಲಾಮೋಫೋಬಿಯಾ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಬಹಿರಂಗ ಉದಾಹರಣೆಯೊಂದು ಮಧ್ಯಪ್ರದೇಶದ ಬೇತುಲ್‌ನಲ್ಲಿ ವರದಿಯಾಗಿದೆ. ಇದರಲ್ಲಿ ಪೊಲೀಸರೆ ಪ್ರಧಾನ ಪಾತ್ರಧಾರಿಗಲಾಗಿದ್ದು ಅವರ ಅಧಿಕಾರ ದುರುಪಯೋಗ ಮತ್ತು ಮುಸ್ಲಿಂ ದ್ವೇಷ ಹಾಡಹಗಲೇ ಜಗಜ್ಜಾಹೀರಾಗಿದೆ.

ಮಾರ್ಚ್ 23 ರಂದು ವಕೀಲ ದೀಪಕ್ ಬುಂಡೆಲೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಾಜ್ಯ ಪೊಲೀಸರು ಅವರನ್ನು ಕ್ರೂರವಾಗಿ ಥಳಿಸಿದ್ದರು. ಅಲ್ಲದೇ ದೀಪಕ್‌ ಒಂದು ತಿಂಗಳ ನಂತರ, ಅವರು ತಮ್ಮ ದೂರನ್ನು ಹಿಂಪಡೆಯುವಂತೆ ಪೊಲೀಸರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸ್ ಅಧಿಕಾರಿಗಳು, ಬುಂಡೆಲೆ ಅವರನ್ನು ಮುಸ್ಲಿಂ ವ್ಯಕ್ತಿ ಎಂದು ತಪ್ಪಾಗಿ ಗುರುತಿಸಿದ್ದರಿಂದ ಅವರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ!

ನಡೆದಿದ್ದೇನು?

ಮಾರ್ಚ್ 23 ರಂದು ಸಂಜೆ 5.30 ರಿಂದ 6 ರವರೆಗೆ ಅವರು ಆಸ್ಪತ್ರೆಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದಿದ್ದಾರೆ. “ಆಗಿನ್ನು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ಬಂದಿರಲ್ಲ. ಆದರೆ ಸೆಕ್ಷನ್ 144 ಅನ್ನು ಬೆತುಲ್‌ನಲ್ಲಿ ವಿಧಿಸಲಾಗಿತ್ತು. ನಾನು ಕಳೆದ 15 ವರ್ಷಗಳಿಂದ ತೀವ್ರ ಮಧುಮೇಹ ಮತ್ತು ರಕ್ತದೊತ್ತಡ ರೋಗಿಯಾಗಿದ್ದೇನೆ. ನನಗೆ ಆರೋಗ್ಯವಾಗದ ಕಾರಣ, ನಾನು ಆಸ್ಪತ್ರೆಗೆ ಭೇಟಿ ನೀಡಲು ಮತ್ತು ಕೆಲವು ಔಷಧಿಗಳನ್ನು ಪಡೆಯಲು ಹೊರಟಿದ್ದೆ. ಆದರೆ ನನ್ನನ್ನು ಪೊಲೀಸರು ಮಧ್ಯದಲ್ಲಿ ನಿಲ್ಲಿಸಿದರು. ಆಗ ನಾನು ಔಷಧಿಗಳನ್ನು ಪಡೆದುಕೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಗೆ ವಿವರಿಸಿದೆ. ಆದರೆ ಅವರಲ್ಲಿ ಒಬ್ಬರು ನಾನು ಹೇಳುತ್ತಿರುವುದನ್ನು ಕೇಳದೆ ಕಪಾಳಕ್ಕೆ ಹೊಡೆದರು” ಎಂದಿದಾರೆ.

“ಪೊಲೀಸರು ಸಾಂವಿಧಾನಿಕ ಮಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾನು ಅವರಿಗೆ ಹೇಳಿದೆ, ಮತ್ತು ನಾನು ತಪ್ಪು ಮಾಡಿದ್ದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಬಂಧನಕ್ಕೊಳಗಾಗಲು ಸಿದ್ಧನಿದ್ದೇನೆ ಎಂದು ಹೇಳಿದೆ. ಇದನ್ನು ಕೇಳಿದ ಪೊಲೀಸ್ ಸಿಬ್ಬಂದಿ ಕೋಪದಿಂದ ನನ್ನನ್ನು ಮತ್ತು ಭಾರತೀಯ ಸಂವಿಧಾನವನ್ನು ನಿಂದಿಸಲು ಪ್ರಾರಂಭಿಸಿದರು. ಆಗ ಅನೇಕ ಪೊಲೀಸ್ ಅಧಿಕಾರಿಗಳು ಬಂದು ನನ್ನನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು” ಎಂದು ಬುಂಡೆಲೆ ಹೇಳಿದ್ದಾರೆ.

ನಾನು ವಕೀಲನಾಗಿದ್ದೇನೆ ಮತ್ತು ಕೇಸು ದಾಖಲಿಸುತ್ತೇನೆ ಎಂದು ಹೇಳಿದ ನಂತರವೇ ಅವರು ನನ್ನನ್ನು ಹೊಡೆಯುವುದನ್ನು ನಿಲ್ಲಿಸಿದರು “ಆದರೆ ಆ ಹೊತ್ತಿಗೆ ನನ್ನ ಕಿವಿಯಲ್ಲಿ ತೀವ್ರವಾಗಿ ರಕ್ತಸ್ರಾವವಾಗಲು ಪ್ರಾರಂಭಿಸಿತು” ಎಂದು ಬುಂಡೆಲೆ ಆರೋಪಿಸಿದ್ದಾರೆ. ನಂತರ ಆಸ್ಪತ್ರೆಗೆ ಹೋಗಲು ನಾನು ನನ್ನ ಸ್ನೇಹಿತ ಮತ್ತು ಸಹೋದರನನ್ನು ಕರೆದು ಎಂಎಲ್ಸಿ ವರದಿ ಪಡೆದೆ. ಮಾರ್ಚ್ 24 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಭಡೋರಿಯಾ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೊಹ್ರಿ ಅವರಿಗೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನಂತರ ಮುಖ್ಯಮಂತ್ರಿ, ರಾಜ್ಯದ ಮಾನವ ಹಕ್ಕುಗಳ ಆಯೋಗ, ಮಧ್ಯಪ್ರದೇಶದ ಮುಖ್ಯ ನ್ಯಾಯಮೂರ್ತಿ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳಿಗೆ ಪತ್ರ ಬರೆದೆ. ಮಾರ್ಚ್ 23ರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಿಗಾಗಿ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿದ್ದೇನೆ, ಆದರೆ ಮಾಹಿತಿಯನ್ನು ನಿರಾಕರಿಸಲಾಗಿದೆ ಎಂದು ಬುಂಡೆಲೆ ಹೇಳಿದ್ದಾರೆ. “ನನ್ನ ಆರ್‌ಟಿಐ ಅರ್ಜಿಗೆ ಮಾಹಿತಿ ನೀಡದಿದ್ದುದ್ದಕ್ಕೆ ಪೊಲೀಸರು ಕಾರಣವನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಸರ್ಕಾರಿ ಫೈಲ್‌ಗಳಿಂದ ಅಳಿಸಿರಬಹುದು ಎಂದು ನನಗೆ ಅನಧಿಕೃತವಾಗಿ ತಿಳಿಸಲಾಗಿದೆ” ಎಂದು ಅವರು ದೂರಿದ್ದಾರೆ.

ಅಂದಿನಿಂದ, ಪೊಲೀಸರು ದೂರನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಎಂದು ತಪ್ಪಾಗಿ ತಿಳಿದು ಥಳಿಸಲಾಗಿದೆ. ನೀವು ಕೆಲವು ಉನ್ನತ ಅಧಿಕಾರಿಗಳು ನನ್ನ ದೂರನ್ನು ಹಿಂತೆಗೆದುಕೊಂಡರೆ ಘಟನೆಯನ್ನು ಖಂಡಿಸಿ ಕ್ಷಮೆಯಾಚಿಸುವ ಹೇಳಿಕೆ ನೀಡಬಹುದು ಎಂದು ಹೇಳಿದ್ದಾರೆ. ಆದರೆ ನನ್ನ ಸ್ನೇಹಿತೆರು ಶಾಂತಿಯುತವಾಗಿ ಕಾನೂನು ಸಮರ ಮುಂದುವರೆಸಲು ಸಲಹೆ ನೀಡಿದ್ದಾರೆ ಎಂದು ಬುಂಡೆಲೆ ತಿಳಿಸಿದ್ದಾರೆ.

“ನಾವು ಆ ಅಧಿಕಾರಿಗಳ ಪರವಾಗಿ [ಬುಂಡೆಲೆ ಮೇಲೆ ಹಲ್ಲೆ ಮಾಡಿದ] ಕ್ಷಮೆಯಾಚಿಸುತ್ತೇವೆ. ಘಟನೆಯಿಂದಾಗಿ ನಾವು ನಿಜವಾಗಿಯೂ ಮುಜುಗರಕ್ಕೊಳಗಾಗಿದ್ದೇವೆ. ನಿಮಗೆ ಬೇಕಾದರೆ ನಾನು ಆ ಅಧಿಕಾರಿಗಳನ್ನು ಕರೆತಂದು ನಿಮ್ಮಲ್ಲಿ ಖುದ್ದಾಗಿ ಕ್ಷಮೆಯಾಚಿಸುತ್ತೇನೆ” ಎಂದು ಆಪಾದಿತ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ.
“ಪೊಲೀಸರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲಿಲ್ಲ ಅಥವಾ ನನ್ನನ್ನು ಥಳಿಸಲಿಲ್ಲ” ಎಂದು ಬರೆಯಲು ನಾನು ನಿಮಗೆ ಹೃತ್ಪೂರ್ವಕ ವಿನಂತಿಯನ್ನು ಮಾಡುತ್ತಿದ್ದೇನೆ. ದಯವಿಟ್ಟು ನಮ್ಮ ವಿನಂತಿಯನ್ನು ಒಪ್ಪಿಕೊಳ್ಳಿ; ನಾವು ಗಾಂಧಿಯವರ ದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಅರ್ಥಮಾಡಿಕೊಳ್ಳಿ; ನಾವೆಲ್ಲರೂ ಗಾಂಧಿಯ ಮಕ್ಕಳು… ನಿಮ್ಮ ಜಾತಿಯಿಂದ ನನಗೆ ಕನಿಷ್ಠ 50 ಸ್ನೇಹಿತರಿದ್ದಾರೆ ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಬುಂಡೆಲೆ ಆರೋಪಿಸುತ್ತಾರೆ.

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ” ಎಂದು ಪೊಲೀಸರು ಹೇಳುತ್ತಾರೆ.

“ನೀವು ಉದ್ದನೆಯ ಗಡ್ಡವನ್ನು ಹೊಂದಿದ್ದೀರಿ. ಆ ಪೊಲೀಸ್‌ (ನಿಮ್ಮ ಮೇಲೆ ಹಲ್ಲೆ ಮಾಡಿದವನು) ಒಬ್ಬ ಕಟ್ಟರ್ (ಕಟ್ಟಾ) ಹಿಂದೂ… ಹಿಂದೂ-ಮುಸ್ಲಿಂ ಗಲಭೆಗಳಲ್ಲಿ ಮುಸ್ಲಿಂನನ್ನು ಬಂಧಿಸಿದಾಗಲೆಲ್ಲಾ ಅವನು ಅವರನ್ನು ಯಾವಾಗಲೂ ಕ್ರೂರವಾಗಿ ಹೊಡೆಯುತ್ತಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬುಂಡೆಲೆ ಮತ್ತಷ್ಟು ಚಿಂತಿತರಾಗಿದ್ದು, ಯಾವುದೇ ಕಾರಣಕ್ಕೂ ದೂರ ಹಿಂಪಡೆಯದಿರಲು ನಿರ್ಧರಿಸಿದ್ದಾರೆ. ಆದರೆ ಈ ಪ್ರಕರಣದ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ಹೇಳಿದ್ದಾರೆ. “ಪೊಲೀಸ್ ಅಧಿಕಾರಿಗಳು ಕ್ಷಮೆಯಾಚಿಸಿದ ರೀತಿಗೆ ನಾನು ಆಘಾತಕ್ಕೊಳಗಾಗಿದ್ದೆ. ನಾನು ಮುಸ್ಲಿಮನಾಗಿದ್ದರೂ, ಯಾವುದೇ ಕಾರಣವಿಲ್ಲದೆ ನನ್ನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ” ಎಂದಿದ್ದಾರೆ.

ಇದಿಷ್ಟು ನಡೆದ ಘಟನೆಯಾಗಿದೆ. ಇಲ್ಲಿ ಮಧ್ಯಪ್ರದೇಶದ ಪೊಲೀಸರು ಪಕ್ಷಪಾತಿಯಂತೆ ವರ್ತಿಸಿದ್ದಾರೆ. ಅಧಿಕಾರ ದುರಪಯೋಗಪಡಿಸಿಕೊಂಡಿದ್ದಾರೆ. ಒಂದು ಧರ್ಮದ ವಿರುದ್ಧ ಕೆಲಸ ಮಾಡಿದ್ದಾರೆ. ಅಂದರೆ ತಪ್ಪುಗಳ ಮೇಲೆ ತಪ್ಪು ಮಾಡಿದ್ದಾರೆ. ಸಂತ್ರಸ್ತ ವ್ಯಕ್ತಿ ವಕೀಲನಾಗಿರದಿದ್ದರೆ ಪೊಲೀಸರು ಎಂದೋ ಈ ಕೇಸನ್ನು ಮುಚ್ಚಿಹಾಕಿರುತ್ತಿದ್ದರು ಎಂಬುದರಲ್ಲಿ ಸಂದೇಹವಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಮೂಲ: ದಿ ವೈರ್


ಇದನ್ನೂ ಓದಿ: ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...