Homeಮುಖಪುಟನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

ನಾವು ನಿನ್ನನ್ನು ಮುಸ್ಲಿಂ ಎಂದು ತಿಳಿದಿದ್ದೆವು: ವಕೀಲನಿಗೆ ಥಳಿಸಿದ ಮಧ್ಯಪ್ರದೇಶ ಪೊಲೀಸರ ಕ್ಷಮೆಯಾಚನೆ!

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ" ಎಂದು ಪೊಲೀಸರು ಹೇಳುತ್ತಾರೆ.

- Advertisement -
- Advertisement -

ಭಾರತದಲ್ಲಿ ಇಸ್ಲಾಮೋಫೋಬಿಯಾ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಬಹಿರಂಗ ಉದಾಹರಣೆಯೊಂದು ಮಧ್ಯಪ್ರದೇಶದ ಬೇತುಲ್‌ನಲ್ಲಿ ವರದಿಯಾಗಿದೆ. ಇದರಲ್ಲಿ ಪೊಲೀಸರೆ ಪ್ರಧಾನ ಪಾತ್ರಧಾರಿಗಲಾಗಿದ್ದು ಅವರ ಅಧಿಕಾರ ದುರುಪಯೋಗ ಮತ್ತು ಮುಸ್ಲಿಂ ದ್ವೇಷ ಹಾಡಹಗಲೇ ಜಗಜ್ಜಾಹೀರಾಗಿದೆ.

ಮಾರ್ಚ್ 23 ರಂದು ವಕೀಲ ದೀಪಕ್ ಬುಂಡೆಲೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಾಜ್ಯ ಪೊಲೀಸರು ಅವರನ್ನು ಕ್ರೂರವಾಗಿ ಥಳಿಸಿದ್ದರು. ಅಲ್ಲದೇ ದೀಪಕ್‌ ಒಂದು ತಿಂಗಳ ನಂತರ, ಅವರು ತಮ್ಮ ದೂರನ್ನು ಹಿಂಪಡೆಯುವಂತೆ ಪೊಲೀಸರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸ್ ಅಧಿಕಾರಿಗಳು, ಬುಂಡೆಲೆ ಅವರನ್ನು ಮುಸ್ಲಿಂ ವ್ಯಕ್ತಿ ಎಂದು ತಪ್ಪಾಗಿ ಗುರುತಿಸಿದ್ದರಿಂದ ಅವರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ!

ನಡೆದಿದ್ದೇನು?

ಮಾರ್ಚ್ 23 ರಂದು ಸಂಜೆ 5.30 ರಿಂದ 6 ರವರೆಗೆ ಅವರು ಆಸ್ಪತ್ರೆಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದಿದ್ದಾರೆ. “ಆಗಿನ್ನು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ಬಂದಿರಲ್ಲ. ಆದರೆ ಸೆಕ್ಷನ್ 144 ಅನ್ನು ಬೆತುಲ್‌ನಲ್ಲಿ ವಿಧಿಸಲಾಗಿತ್ತು. ನಾನು ಕಳೆದ 15 ವರ್ಷಗಳಿಂದ ತೀವ್ರ ಮಧುಮೇಹ ಮತ್ತು ರಕ್ತದೊತ್ತಡ ರೋಗಿಯಾಗಿದ್ದೇನೆ. ನನಗೆ ಆರೋಗ್ಯವಾಗದ ಕಾರಣ, ನಾನು ಆಸ್ಪತ್ರೆಗೆ ಭೇಟಿ ನೀಡಲು ಮತ್ತು ಕೆಲವು ಔಷಧಿಗಳನ್ನು ಪಡೆಯಲು ಹೊರಟಿದ್ದೆ. ಆದರೆ ನನ್ನನ್ನು ಪೊಲೀಸರು ಮಧ್ಯದಲ್ಲಿ ನಿಲ್ಲಿಸಿದರು. ಆಗ ನಾನು ಔಷಧಿಗಳನ್ನು ಪಡೆದುಕೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಗೆ ವಿವರಿಸಿದೆ. ಆದರೆ ಅವರಲ್ಲಿ ಒಬ್ಬರು ನಾನು ಹೇಳುತ್ತಿರುವುದನ್ನು ಕೇಳದೆ ಕಪಾಳಕ್ಕೆ ಹೊಡೆದರು” ಎಂದಿದಾರೆ.

“ಪೊಲೀಸರು ಸಾಂವಿಧಾನಿಕ ಮಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾನು ಅವರಿಗೆ ಹೇಳಿದೆ, ಮತ್ತು ನಾನು ತಪ್ಪು ಮಾಡಿದ್ದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಬಂಧನಕ್ಕೊಳಗಾಗಲು ಸಿದ್ಧನಿದ್ದೇನೆ ಎಂದು ಹೇಳಿದೆ. ಇದನ್ನು ಕೇಳಿದ ಪೊಲೀಸ್ ಸಿಬ್ಬಂದಿ ಕೋಪದಿಂದ ನನ್ನನ್ನು ಮತ್ತು ಭಾರತೀಯ ಸಂವಿಧಾನವನ್ನು ನಿಂದಿಸಲು ಪ್ರಾರಂಭಿಸಿದರು. ಆಗ ಅನೇಕ ಪೊಲೀಸ್ ಅಧಿಕಾರಿಗಳು ಬಂದು ನನ್ನನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು” ಎಂದು ಬುಂಡೆಲೆ ಹೇಳಿದ್ದಾರೆ.

ನಾನು ವಕೀಲನಾಗಿದ್ದೇನೆ ಮತ್ತು ಕೇಸು ದಾಖಲಿಸುತ್ತೇನೆ ಎಂದು ಹೇಳಿದ ನಂತರವೇ ಅವರು ನನ್ನನ್ನು ಹೊಡೆಯುವುದನ್ನು ನಿಲ್ಲಿಸಿದರು “ಆದರೆ ಆ ಹೊತ್ತಿಗೆ ನನ್ನ ಕಿವಿಯಲ್ಲಿ ತೀವ್ರವಾಗಿ ರಕ್ತಸ್ರಾವವಾಗಲು ಪ್ರಾರಂಭಿಸಿತು” ಎಂದು ಬುಂಡೆಲೆ ಆರೋಪಿಸಿದ್ದಾರೆ. ನಂತರ ಆಸ್ಪತ್ರೆಗೆ ಹೋಗಲು ನಾನು ನನ್ನ ಸ್ನೇಹಿತ ಮತ್ತು ಸಹೋದರನನ್ನು ಕರೆದು ಎಂಎಲ್ಸಿ ವರದಿ ಪಡೆದೆ. ಮಾರ್ಚ್ 24 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಭಡೋರಿಯಾ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೊಹ್ರಿ ಅವರಿಗೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನಂತರ ಮುಖ್ಯಮಂತ್ರಿ, ರಾಜ್ಯದ ಮಾನವ ಹಕ್ಕುಗಳ ಆಯೋಗ, ಮಧ್ಯಪ್ರದೇಶದ ಮುಖ್ಯ ನ್ಯಾಯಮೂರ್ತಿ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳಿಗೆ ಪತ್ರ ಬರೆದೆ. ಮಾರ್ಚ್ 23ರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಿಗಾಗಿ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿದ್ದೇನೆ, ಆದರೆ ಮಾಹಿತಿಯನ್ನು ನಿರಾಕರಿಸಲಾಗಿದೆ ಎಂದು ಬುಂಡೆಲೆ ಹೇಳಿದ್ದಾರೆ. “ನನ್ನ ಆರ್‌ಟಿಐ ಅರ್ಜಿಗೆ ಮಾಹಿತಿ ನೀಡದಿದ್ದುದ್ದಕ್ಕೆ ಪೊಲೀಸರು ಕಾರಣವನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಸರ್ಕಾರಿ ಫೈಲ್‌ಗಳಿಂದ ಅಳಿಸಿರಬಹುದು ಎಂದು ನನಗೆ ಅನಧಿಕೃತವಾಗಿ ತಿಳಿಸಲಾಗಿದೆ” ಎಂದು ಅವರು ದೂರಿದ್ದಾರೆ.

ಅಂದಿನಿಂದ, ಪೊಲೀಸರು ದೂರನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಎಂದು ತಪ್ಪಾಗಿ ತಿಳಿದು ಥಳಿಸಲಾಗಿದೆ. ನೀವು ಕೆಲವು ಉನ್ನತ ಅಧಿಕಾರಿಗಳು ನನ್ನ ದೂರನ್ನು ಹಿಂತೆಗೆದುಕೊಂಡರೆ ಘಟನೆಯನ್ನು ಖಂಡಿಸಿ ಕ್ಷಮೆಯಾಚಿಸುವ ಹೇಳಿಕೆ ನೀಡಬಹುದು ಎಂದು ಹೇಳಿದ್ದಾರೆ. ಆದರೆ ನನ್ನ ಸ್ನೇಹಿತೆರು ಶಾಂತಿಯುತವಾಗಿ ಕಾನೂನು ಸಮರ ಮುಂದುವರೆಸಲು ಸಲಹೆ ನೀಡಿದ್ದಾರೆ ಎಂದು ಬುಂಡೆಲೆ ತಿಳಿಸಿದ್ದಾರೆ.

“ನಾವು ಆ ಅಧಿಕಾರಿಗಳ ಪರವಾಗಿ [ಬುಂಡೆಲೆ ಮೇಲೆ ಹಲ್ಲೆ ಮಾಡಿದ] ಕ್ಷಮೆಯಾಚಿಸುತ್ತೇವೆ. ಘಟನೆಯಿಂದಾಗಿ ನಾವು ನಿಜವಾಗಿಯೂ ಮುಜುಗರಕ್ಕೊಳಗಾಗಿದ್ದೇವೆ. ನಿಮಗೆ ಬೇಕಾದರೆ ನಾನು ಆ ಅಧಿಕಾರಿಗಳನ್ನು ಕರೆತಂದು ನಿಮ್ಮಲ್ಲಿ ಖುದ್ದಾಗಿ ಕ್ಷಮೆಯಾಚಿಸುತ್ತೇನೆ” ಎಂದು ಆಪಾದಿತ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ.
“ಪೊಲೀಸರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲಿಲ್ಲ ಅಥವಾ ನನ್ನನ್ನು ಥಳಿಸಲಿಲ್ಲ” ಎಂದು ಬರೆಯಲು ನಾನು ನಿಮಗೆ ಹೃತ್ಪೂರ್ವಕ ವಿನಂತಿಯನ್ನು ಮಾಡುತ್ತಿದ್ದೇನೆ. ದಯವಿಟ್ಟು ನಮ್ಮ ವಿನಂತಿಯನ್ನು ಒಪ್ಪಿಕೊಳ್ಳಿ; ನಾವು ಗಾಂಧಿಯವರ ದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಅರ್ಥಮಾಡಿಕೊಳ್ಳಿ; ನಾವೆಲ್ಲರೂ ಗಾಂಧಿಯ ಮಕ್ಕಳು… ನಿಮ್ಮ ಜಾತಿಯಿಂದ ನನಗೆ ಕನಿಷ್ಠ 50 ಸ್ನೇಹಿತರಿದ್ದಾರೆ ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಬುಂಡೆಲೆ ಆರೋಪಿಸುತ್ತಾರೆ.

“ನಿಮ್ಮ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ. ಹಿಂದೂ-ಮುಸ್ಲಿಂ ಗಲಭೆ ನಡೆದಾಗಲೆಲ್ಲಾ ಪೊಲೀಸರು ಯಾವಾಗಲೂ ಹಿಂದೂಗಳನ್ನು ಬೆಂಬಲಿಸುತ್ತಾರೆ; ಮುಸ್ಲಿಮರಿಗೂ ಇದು ತಿಳಿದಿದೆ. ಆದರೆ ಅಜ್ಞಾನದಿಂದಾಗಿ ಅಂದು ನಡೆದ ಘಟನೆಯಿಂದ ಬೇಸರವಾಗಿದೆ” ಎಂದು ಪೊಲೀಸರು ಹೇಳುತ್ತಾರೆ.

“ನೀವು ಉದ್ದನೆಯ ಗಡ್ಡವನ್ನು ಹೊಂದಿದ್ದೀರಿ. ಆ ಪೊಲೀಸ್‌ (ನಿಮ್ಮ ಮೇಲೆ ಹಲ್ಲೆ ಮಾಡಿದವನು) ಒಬ್ಬ ಕಟ್ಟರ್ (ಕಟ್ಟಾ) ಹಿಂದೂ… ಹಿಂದೂ-ಮುಸ್ಲಿಂ ಗಲಭೆಗಳಲ್ಲಿ ಮುಸ್ಲಿಂನನ್ನು ಬಂಧಿಸಿದಾಗಲೆಲ್ಲಾ ಅವನು ಅವರನ್ನು ಯಾವಾಗಲೂ ಕ್ರೂರವಾಗಿ ಹೊಡೆಯುತ್ತಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬುಂಡೆಲೆ ಮತ್ತಷ್ಟು ಚಿಂತಿತರಾಗಿದ್ದು, ಯಾವುದೇ ಕಾರಣಕ್ಕೂ ದೂರ ಹಿಂಪಡೆಯದಿರಲು ನಿರ್ಧರಿಸಿದ್ದಾರೆ. ಆದರೆ ಈ ಪ್ರಕರಣದ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ಹೇಳಿದ್ದಾರೆ. “ಪೊಲೀಸ್ ಅಧಿಕಾರಿಗಳು ಕ್ಷಮೆಯಾಚಿಸಿದ ರೀತಿಗೆ ನಾನು ಆಘಾತಕ್ಕೊಳಗಾಗಿದ್ದೆ. ನಾನು ಮುಸ್ಲಿಮನಾಗಿದ್ದರೂ, ಯಾವುದೇ ಕಾರಣವಿಲ್ಲದೆ ನನ್ನ ಮೇಲೆ ಹಲ್ಲೆ ನಡೆಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ” ಎಂದಿದ್ದಾರೆ.

ಇದಿಷ್ಟು ನಡೆದ ಘಟನೆಯಾಗಿದೆ. ಇಲ್ಲಿ ಮಧ್ಯಪ್ರದೇಶದ ಪೊಲೀಸರು ಪಕ್ಷಪಾತಿಯಂತೆ ವರ್ತಿಸಿದ್ದಾರೆ. ಅಧಿಕಾರ ದುರಪಯೋಗಪಡಿಸಿಕೊಂಡಿದ್ದಾರೆ. ಒಂದು ಧರ್ಮದ ವಿರುದ್ಧ ಕೆಲಸ ಮಾಡಿದ್ದಾರೆ. ಅಂದರೆ ತಪ್ಪುಗಳ ಮೇಲೆ ತಪ್ಪು ಮಾಡಿದ್ದಾರೆ. ಸಂತ್ರಸ್ತ ವ್ಯಕ್ತಿ ವಕೀಲನಾಗಿರದಿದ್ದರೆ ಪೊಲೀಸರು ಎಂದೋ ಈ ಕೇಸನ್ನು ಮುಚ್ಚಿಹಾಕಿರುತ್ತಿದ್ದರು ಎಂಬುದರಲ್ಲಿ ಸಂದೇಹವಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಮೂಲ: ದಿ ವೈರ್


ಇದನ್ನೂ ಓದಿ: ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...