Homeಕರೋನಾ ತಲ್ಲಣ“ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

“ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಸರ್ಕಾರ ಕಿವಿಗೊಡದಿದ್ದಲ್ಲಿ ಲಾಕ್ ಡೌನ್ ಮುಗಿದ ಕೂಡಲೇ ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಳುವ ಪಕ್ಷದ ಶಾಸಕರ ಮನೆಗಳೆದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ನಾಳೆ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಎಲ್ಲೆಡೆಯೂ ಉಚಿತ ಚಿಕಿತ್ಸೆ ಸಿಗಬೇಕು, ಸರ್ವರಿಗೂ ವ್ಯಾಕ್ಸಿನ್ ದೊರಕಬೇಕು, ಬಡವರಿಗೆ ದಿನಸಿ ಮತ್ತು ನೆರವು ನೀಡಬೇಕು, ಕೋವಿಡ್‌ನಿಂದ ಸಾವಿಗೀಡಾದ, ಅನಾಥರಾದವರಿಗೆ ಪರಿಹಾರ ಕೊಡಬೇಕು ಮತ್ತು ರೈತರ ಬೀಜ, ಗೊಬ್ಬರದ ಮೇಲೆ ವಿಶೇಷ ಸಬ್ಸಿಡಿ ಘೋಷಿಸಬೇಕು ಎಂಬ ಪಂಚ ತುರ್ತು ಕ್ರಮಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.

“ನಾವೂ ಬದುಕಬೇಕು” ಎಂಬ ಘೋಷವಾಕ್ಯವನ್ನು ಮುಂದಿಟ್ಟುಕೊಂಡು, ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜನರು ಬೆಳಿಗ್ಗೆ 9ಕ್ಕೆ ಮನೆಯಿಂದ ಹೊರಬಂದು, ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ, ಖಾಲಿ ತಟ್ಟೆ – ಖಾಲಿ ಚೀಲಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಹಾಕುತ್ತಾ, ತಮ್ಮ ಹಕ್ಕೊತ್ತಾಯಗಳತ್ತ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ. ಈ ಬಾರಿ ನಮ್ಮ ನಮ್ಮ ಮನೆ ಬೀದಿಗಳಲ್ಲಿ ಪ್ರತಿಭಟನೆ ನಡೆಯಲಿದೆ. ಸರ್ಕಾರ ಕಿವಿಗೊಡದಿದ್ದಲ್ಲಿ ಲಾಕ್ ಡೌನ್ ಮುಗಿದ ಕೂಡಲೇ ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಳುವ ಪಕ್ಷದ ಶಾಸಕರ ಮನೆಗಳೆದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್ ಅಶೋಕ್ ಮತ್ತು ಮಾವಳ್ಳಿ ಶಂಕರ್ ತಿಳಿಸಿದ್ದಾರೆ.

ಜನಾಗ್ರಹ ಒಂದು ಸಂಘಟನೆಯಾಗಲೀ ಅಥವ ವೇದಿಕೆಯಾಗಲೀ ಆಗಿರದೆ ಜನಸಾಮಾನ್ಯರ ಒಕ್ಕೊರಲ ಕೂಗಾಗಿದೆ. ನಾವೆಲ್ಲರೂ ಸೇರಿಯೇ ಇದನ್ನು ಗಟ್ಟಿಗೊಳಿಸಬೇಕಿದೆ. ಈಗಾಗಲೇ ಎಲ್ಲಾ ಜನಪರ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಇದಕ್ಕೆ ದನಿ ಗೂಡಿಸಿವೆ. ಬದುಕು ದುಸ್ತರವಾಗಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಒಕ್ಕೊರಲಿನಿಂದ “ನಾವೂ ಬದುಕಬೇಕು” ಎಂದು ಕೂಗಿ ಹೇಳಲೇಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜನಾಗ್ರಹ ಆಂದೋಲನದ ಹೇಳಿಕೆಗೆ ಶಸಿಕಾಂತ್ ಸೆಂದಿಲ್, ಸಿದ್ದನಗೌಡ ಪಾಟೀಲ್, ಚಾಮರಸ ಮಾಲೀ ಮಾಟೀಲ್, ಹೆಚ್. ಆರ್. ಬಸವರಾಜಪ್ಪ, ಯೂಸೂಫ್ ಕನ್ನಿ, ಯಾಸೀನ್ ಮಲ್ಪೆ, ನೂರ್ ಶ್ರೀಧರ್, ಮಾವಳ್ಳಿ ಶಂಕರ್, ಸ್ವರ್ಣ ಭಟ್, ಕೆ.ಎಲ್. ಅಶೋಕ್ ಮೊದಲಾದವರು ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ: ಅಧೋಲೋಕದ ಈ ಲೇಖಕ ಇದೀಗ ಬಂಗಾಳದ ಶಾಸಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...