Homeಕರೋನಾ ತಲ್ಲಣ“ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

“ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಸರ್ಕಾರ ಕಿವಿಗೊಡದಿದ್ದಲ್ಲಿ ಲಾಕ್ ಡೌನ್ ಮುಗಿದ ಕೂಡಲೇ ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಳುವ ಪಕ್ಷದ ಶಾಸಕರ ಮನೆಗಳೆದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ನಾಳೆ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಎಲ್ಲೆಡೆಯೂ ಉಚಿತ ಚಿಕಿತ್ಸೆ ಸಿಗಬೇಕು, ಸರ್ವರಿಗೂ ವ್ಯಾಕ್ಸಿನ್ ದೊರಕಬೇಕು, ಬಡವರಿಗೆ ದಿನಸಿ ಮತ್ತು ನೆರವು ನೀಡಬೇಕು, ಕೋವಿಡ್‌ನಿಂದ ಸಾವಿಗೀಡಾದ, ಅನಾಥರಾದವರಿಗೆ ಪರಿಹಾರ ಕೊಡಬೇಕು ಮತ್ತು ರೈತರ ಬೀಜ, ಗೊಬ್ಬರದ ಮೇಲೆ ವಿಶೇಷ ಸಬ್ಸಿಡಿ ಘೋಷಿಸಬೇಕು ಎಂಬ ಪಂಚ ತುರ್ತು ಕ್ರಮಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.

“ನಾವೂ ಬದುಕಬೇಕು” ಎಂಬ ಘೋಷವಾಕ್ಯವನ್ನು ಮುಂದಿಟ್ಟುಕೊಂಡು, ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜನರು ಬೆಳಿಗ್ಗೆ 9ಕ್ಕೆ ಮನೆಯಿಂದ ಹೊರಬಂದು, ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ, ಖಾಲಿ ತಟ್ಟೆ – ಖಾಲಿ ಚೀಲಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಹಾಕುತ್ತಾ, ತಮ್ಮ ಹಕ್ಕೊತ್ತಾಯಗಳತ್ತ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ. ಈ ಬಾರಿ ನಮ್ಮ ನಮ್ಮ ಮನೆ ಬೀದಿಗಳಲ್ಲಿ ಪ್ರತಿಭಟನೆ ನಡೆಯಲಿದೆ. ಸರ್ಕಾರ ಕಿವಿಗೊಡದಿದ್ದಲ್ಲಿ ಲಾಕ್ ಡೌನ್ ಮುಗಿದ ಕೂಡಲೇ ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಳುವ ಪಕ್ಷದ ಶಾಸಕರ ಮನೆಗಳೆದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್ ಅಶೋಕ್ ಮತ್ತು ಮಾವಳ್ಳಿ ಶಂಕರ್ ತಿಳಿಸಿದ್ದಾರೆ.

ಜನಾಗ್ರಹ ಒಂದು ಸಂಘಟನೆಯಾಗಲೀ ಅಥವ ವೇದಿಕೆಯಾಗಲೀ ಆಗಿರದೆ ಜನಸಾಮಾನ್ಯರ ಒಕ್ಕೊರಲ ಕೂಗಾಗಿದೆ. ನಾವೆಲ್ಲರೂ ಸೇರಿಯೇ ಇದನ್ನು ಗಟ್ಟಿಗೊಳಿಸಬೇಕಿದೆ. ಈಗಾಗಲೇ ಎಲ್ಲಾ ಜನಪರ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಇದಕ್ಕೆ ದನಿ ಗೂಡಿಸಿವೆ. ಬದುಕು ದುಸ್ತರವಾಗಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಒಕ್ಕೊರಲಿನಿಂದ “ನಾವೂ ಬದುಕಬೇಕು” ಎಂದು ಕೂಗಿ ಹೇಳಲೇಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜನಾಗ್ರಹ ಆಂದೋಲನದ ಹೇಳಿಕೆಗೆ ಶಸಿಕಾಂತ್ ಸೆಂದಿಲ್, ಸಿದ್ದನಗೌಡ ಪಾಟೀಲ್, ಚಾಮರಸ ಮಾಲೀ ಮಾಟೀಲ್, ಹೆಚ್. ಆರ್. ಬಸವರಾಜಪ್ಪ, ಯೂಸೂಫ್ ಕನ್ನಿ, ಯಾಸೀನ್ ಮಲ್ಪೆ, ನೂರ್ ಶ್ರೀಧರ್, ಮಾವಳ್ಳಿ ಶಂಕರ್, ಸ್ವರ್ಣ ಭಟ್, ಕೆ.ಎಲ್. ಅಶೋಕ್ ಮೊದಲಾದವರು ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ: ಅಧೋಲೋಕದ ಈ ಲೇಖಕ ಇದೀಗ ಬಂಗಾಳದ ಶಾಸಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....