Homeಚಳವಳಿಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ - ಯೋಗೇಂದ್ರ ಯಾದವ್

ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ಕೃಷಿ ಕಾಯ್ದೆಗಳ ವಿರುದ್ಧ ರೈತರೊಂದಿಗೆ ವಿರೋಧ ಪಕ್ಷಗಳು ಒಗ್ಗಟ್ಟಿನ ಹೋರಾಟ ನಡೆಸಿದ್ದಾರೆ.

- Advertisement -
- Advertisement -

ಸಂಸತ್ತಿನ ಮಾನ್ಸೂನ್ ಅಧಿವೇಶನ ನಾಲ್ಕನೇ ಕಾಲಿಟ್ಟವೇಳೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದಾರೆ. ಕಾಂಗ್ರೆಸ್, ಟಿಎಂಸಿ, ಸಿಪಿಐ, ಸಿಪಿಐ, ಡಿಎಂಕೆ, ಅಕಾಲಿ ದಳ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

“ಅವರು ಅಸತ್ಯ, ಅನ್ಯಾಯ, ದುರಹಂಕಾರ ತೋರಿಸುತ್ತಿದ್ದಾರೆ. ನಾವು ಸತ್ಯಾಗ್ರಹಿಗಳು, ನಿರ್ಭೀತರು, ಇಲ್ಲಿ ಒಂದಾಗಿ ನಿಂತಿದ್ದೇವೆ. ಜೈ ಕಿಸಾನ್” ಎಂದು ರಾಹುಲ್ ಗಾಂಧಿ ಪ್ರತಿಭಟನೆಯ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

ಶಿರೋಮಣಿ ಅಕಾಲಿ ದಳದ ಸಂಸದರು ಸಂಸತ್ತಿನ ಮುಂದೆ ಕೃಷಿ ಕಾಯ್ದೆಗಳ ವಿರುದ್ಧ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಮುಂದೆ ಭಿತ್ತಿಪತ್ರಗಳನ್ನು ತೋರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಕ್ಷಗಳು, ಆರ್‌ಜೆಡಿ, ಡಿಎಂಕೆ ಸೇರಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ರೈತರು ಜಂತರ್ ಮಂತರ್‌ನಲ್ಲಿ ‘ಕಿಸಾನ್ ಪಾರ್ಲಿಮೆಂಟ್’ ನಡೆಸುವ ಮೂಲಕ ಹೊರಗಿನಿಂದ ಸರ್ಕಾರದ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ. 200 ಕ್ಕೂ ಹೆಚ್ಚು ರೈತರು ಸಿಂಘು ಗಡಿಯಿಂದ ಪಾದಯಾತ್ರೆ ನಡೆಸಿ ಜಂತರ್ ಮಂತರ್ ತಲುಪಿದ್ದಾರೆ. ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್, ಬಿಕೆಯುವಿನ ರಾಕೇಶ್ ಟಿಕಾಯತ್ ಸೇರಿದಂತೆ ಪ್ರಮುಖರ ಹೋರಾಟದ ನೇತೃತ್ವ ವಹಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ಚಿಕಿತ್ಸೆ ಸಂಸತ್ತಿನಲ್ಲಿ ನೀಡಬೇಕು. ಸಂಸತ್ತಿನಲ್ಲಿ ಕುಳಿತಿರುವವರಿಗೆ ನಾವು ಚಿಕಿತ್ಸೆ ನೀಡುತ್ತೇವೆ. ‘ಎಂಟು ತಿಂಗಳ ಹಿಂದೆ ಸರ್ಕಾರ ನಮ್ಮನ್ನು ರೈತರೆಂದು ಪರಿಗಣಿಸಲು ಸಿದ್ದರಿರಲಿಲ್ಲ. ಈಗ ಪರಿಗಣಿಸುತ್ತಿದ್ದಾರೆ. ಅವರು ಷರತ್ತಬದ್ದ ಮಾತುಕತೆಯನ್ನು ಮಾತ್ರ ಬಯಸುತ್ತಿದ್ದಾರೆ. ಅದಕ್ಕೆ ನಮ್ಮ ಒಪ್ಪಿಗೆಯಿಲ್ಲ’ ಎಂದು ರಾಕೇಶ್ ಟಿಕಾಯತ್ ಹೇಳಿದರೆ “ಸಂಸತ್ತನ್ನು ಹೇಗೆ ನಡೆಸಬೇಕು ಎಂಬುದನ್ನು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಆಗಸ್ಟ್ 09ರವರೆಗೂ ಪ್ರತಿದಿನ ನಮ್ಮ ಕಿಸಾನ್ ಪಾರ್ಲಿಮೆಂಟ್ ನಡೆಯಲಿದೆ. ನಾವು ಶಾಂತಿ ಮತ್ತು ಉತ್ಸಾಹದಿಂದ ಅಧಿವೇಶನ ನಡೆಸುತ್ತೇವೆ ಎಂದು ರೈತರು ಘೋಷಿಸಿದ್ದಾರೆ. ರೈತ ಹೋರಾಟವನ್ನು ವರದಿ ಮಾಡಲು ಪತ್ರಕರ್ತರಿಗೆ ಅವಕಾಶ ನೀಡುತ್ತಿಲ್ಲ, ಜಂತರ್ ಮಂತರ್ ಮೈದಾನ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಪತ್ರಕರ್ತರು ಆರೋಪಿಸಿ ಧರಣಿ ನಡೆಸಿದ್ದಾರೆ.


ಇದನ್ನೂ ಓದಿ: ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...