Homeಚಳವಳಿಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ - ಯೋಗೇಂದ್ರ ಯಾದವ್

ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ಕೃಷಿ ಕಾಯ್ದೆಗಳ ವಿರುದ್ಧ ರೈತರೊಂದಿಗೆ ವಿರೋಧ ಪಕ್ಷಗಳು ಒಗ್ಗಟ್ಟಿನ ಹೋರಾಟ ನಡೆಸಿದ್ದಾರೆ.

- Advertisement -
- Advertisement -

ಸಂಸತ್ತಿನ ಮಾನ್ಸೂನ್ ಅಧಿವೇಶನ ನಾಲ್ಕನೇ ಕಾಲಿಟ್ಟವೇಳೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದಾರೆ. ಕಾಂಗ್ರೆಸ್, ಟಿಎಂಸಿ, ಸಿಪಿಐ, ಸಿಪಿಐ, ಡಿಎಂಕೆ, ಅಕಾಲಿ ದಳ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

“ಅವರು ಅಸತ್ಯ, ಅನ್ಯಾಯ, ದುರಹಂಕಾರ ತೋರಿಸುತ್ತಿದ್ದಾರೆ. ನಾವು ಸತ್ಯಾಗ್ರಹಿಗಳು, ನಿರ್ಭೀತರು, ಇಲ್ಲಿ ಒಂದಾಗಿ ನಿಂತಿದ್ದೇವೆ. ಜೈ ಕಿಸಾನ್” ಎಂದು ರಾಹುಲ್ ಗಾಂಧಿ ಪ್ರತಿಭಟನೆಯ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

ಶಿರೋಮಣಿ ಅಕಾಲಿ ದಳದ ಸಂಸದರು ಸಂಸತ್ತಿನ ಮುಂದೆ ಕೃಷಿ ಕಾಯ್ದೆಗಳ ವಿರುದ್ಧ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಮುಂದೆ ಭಿತ್ತಿಪತ್ರಗಳನ್ನು ತೋರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಕ್ಷಗಳು, ಆರ್‌ಜೆಡಿ, ಡಿಎಂಕೆ ಸೇರಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ರೈತರು ಜಂತರ್ ಮಂತರ್‌ನಲ್ಲಿ ‘ಕಿಸಾನ್ ಪಾರ್ಲಿಮೆಂಟ್’ ನಡೆಸುವ ಮೂಲಕ ಹೊರಗಿನಿಂದ ಸರ್ಕಾರದ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ. 200 ಕ್ಕೂ ಹೆಚ್ಚು ರೈತರು ಸಿಂಘು ಗಡಿಯಿಂದ ಪಾದಯಾತ್ರೆ ನಡೆಸಿ ಜಂತರ್ ಮಂತರ್ ತಲುಪಿದ್ದಾರೆ. ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್, ಬಿಕೆಯುವಿನ ರಾಕೇಶ್ ಟಿಕಾಯತ್ ಸೇರಿದಂತೆ ಪ್ರಮುಖರ ಹೋರಾಟದ ನೇತೃತ್ವ ವಹಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ಚಿಕಿತ್ಸೆ ಸಂಸತ್ತಿನಲ್ಲಿ ನೀಡಬೇಕು. ಸಂಸತ್ತಿನಲ್ಲಿ ಕುಳಿತಿರುವವರಿಗೆ ನಾವು ಚಿಕಿತ್ಸೆ ನೀಡುತ್ತೇವೆ. ‘ಎಂಟು ತಿಂಗಳ ಹಿಂದೆ ಸರ್ಕಾರ ನಮ್ಮನ್ನು ರೈತರೆಂದು ಪರಿಗಣಿಸಲು ಸಿದ್ದರಿರಲಿಲ್ಲ. ಈಗ ಪರಿಗಣಿಸುತ್ತಿದ್ದಾರೆ. ಅವರು ಷರತ್ತಬದ್ದ ಮಾತುಕತೆಯನ್ನು ಮಾತ್ರ ಬಯಸುತ್ತಿದ್ದಾರೆ. ಅದಕ್ಕೆ ನಮ್ಮ ಒಪ್ಪಿಗೆಯಿಲ್ಲ’ ಎಂದು ರಾಕೇಶ್ ಟಿಕಾಯತ್ ಹೇಳಿದರೆ “ಸಂಸತ್ತನ್ನು ಹೇಗೆ ನಡೆಸಬೇಕು ಎಂಬುದನ್ನು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಆಗಸ್ಟ್ 09ರವರೆಗೂ ಪ್ರತಿದಿನ ನಮ್ಮ ಕಿಸಾನ್ ಪಾರ್ಲಿಮೆಂಟ್ ನಡೆಯಲಿದೆ. ನಾವು ಶಾಂತಿ ಮತ್ತು ಉತ್ಸಾಹದಿಂದ ಅಧಿವೇಶನ ನಡೆಸುತ್ತೇವೆ ಎಂದು ರೈತರು ಘೋಷಿಸಿದ್ದಾರೆ. ರೈತ ಹೋರಾಟವನ್ನು ವರದಿ ಮಾಡಲು ಪತ್ರಕರ್ತರಿಗೆ ಅವಕಾಶ ನೀಡುತ್ತಿಲ್ಲ, ಜಂತರ್ ಮಂತರ್ ಮೈದಾನ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಪತ್ರಕರ್ತರು ಆರೋಪಿಸಿ ಧರಣಿ ನಡೆಸಿದ್ದಾರೆ.


ಇದನ್ನೂ ಓದಿ: ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...