Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...