Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...