Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...