Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...