Homeಕರ್ನಾಟಕತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

- Advertisement -
- Advertisement -

ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, ‘ಬಯಲು ಸೀಮೆ ರಂಗಾಯಣ’ ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.

ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ ಜಿಲ್ಲೆಯಾಗಿದೆ. ಇಲ್ಲಿ ಜನಪದ ರಂಗಭೂಮಿಯಾದ ಮೂಢಲಪಾಯ, ಬಯಲಾಟ, ಪೌರಾಣಿಕ ನಾಟಕಗಳು ಮತ್ತು ಆಧುನಿಕ ನಾಟಕಗಳು ಹೆಚ್ಚಿನದಾಗಿ ನಡೆಯುತ್ತಿವೆ. ಆದರೆ ಇತ್ತಿಚಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾದ ತುಮಕೂರು ಜಿಲ್ಲೆಯ ರಂಗಭೂಮಿ ಸಾಕಷ್ಟು ಸಾಧ್ಯತೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಲಾವಿದರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಗುಬ್ಬಿ ವೀರಣ್ಣ, ನರಸಿಂಹರಾಜು ಅಂತಹ ಹಲುವು ರಂಗಭೂಮಿ ಮತ್ತು ಸಿನೆಮಾ ದಿಗ್ಗಜರ ಜಿಲ್ಲೆ ಇನ್ನಷ್ಟು ಹೆಚ್ಚು ಪ್ರತಿಭಾವಂತರನ್ನು ಹೊರತರುವ ವಾತವಾರಣವನ್ನು ಸರ್ಕಾರ ಸೃಷ್ಟಿಸುವ ಅವಶ್ಯಕತೆಯಿದೆ. ಆದರೆ ಇಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನ ಇಲ್ಲಿ ರಂಗಭೂಮಿ ಚಟುವಟಿಕೆಗಳು ಇನ್ನಷ್ಟು ಚಿಗುರಲು ತಡೆಯಾಗಿದ್ದಾರೆ. ನಗರದ ಗುಬ್ಬಿ ವೀರಣ್ಣ ರಂಗಮಂದಿರವನ್ನು ಇಲಾಖೆ ಪ್ರತಿವರ್ಷ ಲಕ್ಷ ಲಕ್ಷ ಖರ್ಚು ಮಾಡಿ ರಿಪೇರಿ ಮಾಡುತ್ತಿದ್ದರು ಸಹ ಇದುವರೆಗೂ ಆಧುನಿಕ ರಂಗಭೂಮಿಯ ನಾಟಕಗಳನ್ನು ಪ್ರದರ್ಶಿಸಲು ಯೋಗ್ಯವಾಗಿಲ್ಲ ಎಂದು ಹಲವಾರು ಆರೋಪಗಳು ಬಂದಿವೆ.

ಇದೇ ಅಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಉತ್ತಮವಾದ ರಂಗ ಮಂದಿರಗಳಿಲ್ಲ. ಇರುವ ರಂಗಮಂದಿರಗಳು ಬಳಸಲು ಯೋಗ್ಯವಲ್ಲದ ರೀತಿಯಲ್ಲಿ ಹಾಳಾಗಿವೆ. ಜಿಲ್ಲೆಯಲ್ಲಿ ಹೀಗಾಗಲೆ ಇರುವ ಹಲವು ರಂಗ ನಿರ್ದೇಶಕರು, ವಿನ್ಯಾಸಕಾರು, ನಟರು, ತಂತ್ರಜ್ಞರನ್ನು ಬಳಸಿಕೊಂಡು ಉತ್ತಮವಾದ ರಂಗಕಾರ್ಯ ಮಾಡಬಹುದಾಗಿದೆ. ಈ ಕುರಿತು ರಂಗಭೂಮಿ ಕಲಾವಿದರ ಒಕ್ಕೂಟ ಈ ಕೆಳಗಿನ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

1. ಜಿಲ್ಲೆಗೆ ರಂಗಾಯಣ : ರಾಜ್ಯದ ಹಾಗೂ ರಾಷ್ಟ್ರದ ರಂಪ್ರಯೋಗಗಳನ್ನು ನೋಡುವ, ಚರ್ಚಿಸುವ ಮೂಲಕ ಜಿಲ್ಲೆಯಲ್ಲಿಯೇ ಒಂದು ರೀತಿಯ ರಂಗ ಸಂವೇದನೆ ಬರುತ್ತದೆ. 20 ಜನ ಕಲಾವಿದರಿಗೆ ಕೆಲಸ ಸಿಗುತ್ತದೆ. ತುಮಕೂರು ಜಿಲ್ಲೆಯ ಘನತೆ ಹೆಚ್ಚಾಗುತ್ತದೆ. ಹಾಗಾಗಿ ಜಿಲ್ಲೆಗೆ ‘ಬಯಲು ಸೀಮೆ ರಂಗಾಯಣ’ ಒದಗಿಸಬೇಕು.

2. ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ : ಇಲ್ಲಿ ಸಮಾರು 500 ಜನ ಕುಳಿತುಕೊಳ್ಳುವ ರಂಗಮಂದಿರ, ಬಯಲು ರಂಗಮಂದಿರ ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರ, ತಾಲೀಮು ಕೊಠಡಿ, ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಸ್ಥಳ ರಂಗ ಗ್ರಂಥಾಲಯ, ಕ್ಯಾಂಟೀನ್, ಹೊರಗಿನಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಅತಿಥಿ ಗೃಹ , ಆಡಿಯೋ , ವಿಷುವಲ್ ಸ್ಟುಡಿಯೋ, ಇದಕ್ಕಾಗಿ 3 ರಿಂದ 5 ಎಕರೆಯಲ್ಲಿ ಬೆಂಗಳೂರಿನ ಕಲಾಗ್ರಾಮ ಮಾದರಿಯಲ್ಲಿ ಡಾ. ಗುಬ್ಬಿ ವೀರಣ್ಣ ಕ್ಯಾಂಪಸ್ ಸ್ಥಾಪಿಸಬೇಕು. ಸ್ಮಾರ್ಟ್ ಸಿಟಿಯ ಯೋಜನೆಯ ಒಳಗೆ ಈ ಯೋಜನಯನ್ನೂ ತರಬಹುದು.

3. ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರ : ಆಧುನಿಕ ಸವಲತ್ತುಗಳು ಮತ್ತು ಅದರ ಉಸ್ತುವಾರಿ ಸಮಿತಿಯಲ್ಲಿ ರಂಗತಜ್ಞರನ್ನು ಸೇರಿಸುವುದು. ರಂಗಮಂದಿರದ ನಿರ್ವಹಣೆಗೆ ರಂಗಭೂಮಿಯ ಪದವೀದರರನ್ನು ನೇಮಿಸುವುದು.

4. ತುಮಕೂರಿನ 10 ತಾಲೂಕುಗಳಿಗೂ ಒಂದೊಂದು ಪುಟ್ಟ ರಂಗಮಂದಿರ : ಈಗಾಗಲೇ ಕೆಲವು ತಾಲ್ಲೂಕಿನಲ್ಲಿ ರಂಗಮಂದಿರ ಕಟ್ಟುತ್ತಿದ್ದರೆ ಅದರ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು ನೆರವು ಕೂಡುವುದು.

5. ಪ್ರತಿವರ್ಷ ಬಯಲುಸೀಮೆ ನಾಟಕೋತ್ಸವ : ತಾಲ್ಲೂಕಿನ ಆಯ್ದ ನಾಟಕಗಳ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಅಪರೂಪದ ನಾಟಕಗಳನ್ನೊಳಗೊಂಡ ನಾಟಕೋತ್ಸವ ಏರ್ಪಡಿಸುವುದು. ಒಂದೊಂದು ವರ್ಷ ಒಂದೊಂದು ತಾಲ್ಲೂಕಿನಲ್ಲಿ ಏರ್ಪಡಿಸುವುದು.

ಈ ಬೇಡಿಕೆಗಳಿಗೆ ಸ್ಮಂದಿಸಿ ನಮ್ಮ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಅಭಿವ್ಯಕ್ತಿಯನ್ನು ಶ್ರೀಮಂತಗೊಳಿಸಲು ಒತ್ತಾಸೆಯಾಗಿ ನಿಲ್ಲಬೇಕೆಂದು ಕಲಾವಿದರ ಒಕ್ಕೂಟ ಒತ್ತಾಯಿಸಿದೆ. ರಂಗಭೂಮಿ ಕಲಾವಿದರ ಒಕ್ಕೂಟದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಒಕ್ಕೂಟದ ಸಂಚಾಲಕರಾದ ನಟರಾಜ್ ಹೊನ್ನವಳ್ಳಿ, ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜನಾಥ್, ಉಗಮ ಶ್ರೀನಿವಾಸ್, ನಾಟಕ ಮನೆ ಮಹಲಿಂಗು, ಚನ್ನಬಸಯ್ಯ ಗುಬ್ಬಿ, ದಿನೇಶ್ ಕುಮಾರ್, ಚೇತನ್, ಸುನೀಲ ಜಾರಂದಗುಡ್ಡೆ, ರಂಗಾಯಣ ರವಿಶಂಕರ್, ನಿಜಲಿಂಗಪ್ಪ ಮತ್ತು ಹೋರಾಟಗಾರರಾದ ಉಜ್ಜಜಿ ರಾಜಣ್ಣ, ತಿಪಟೂರು ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...