Homeಮುಖಪುಟಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು - ಮನ್‌ಕಿ...

ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು – ಮನ್‌ಕಿ ಬಾತ್‌ಗೆ ಡಿಸ್‌ಲೈಕ್‌ಗಳ ಸುರಿಮಳೆ

ಯುವಜನರ ಕಮೆಂಟ್‌ಗಳಿಗೆ ಹೆದರಿ ಎಲ್ಲಾ ಚಾನೆಲ್‌ಗಳಲ್ಲಿಯೂ ಸಹ ಕಮೆಂಟ್ ಸೆಕ್ಷನ್‌ ಅನ್ನು ಬ್ಲಾಕ್ ಮಾಡಲಾಗಿದ್ದು, ಯಾರೂ ಸಹ ಕಮೆಂಟ್ ಮಾಡದಂತೆ ತಡೆಯಲಾಗಿದೆ.

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾಸಿಕ ‘ಮನ್ ಕಿ ಬಾತ್’ ಕಾರ್ಯಕ್ರಮ ನಡೆಸಿಕೊಟ್ಟರು. ಆದರೆ ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯುವಜನರು ಯೂಟ್ಯೂಬ್, ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದಿದ್ದು, ನಮಗೆ ನಿಮ್ಮ ಮನ್ ಕಿ ಬಾತ್ ಬೇಕಾಗಿಲ್ಲ, ಬದಲಿಗೆ ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಲಕ್ಷಾಂತರ ಯುವಜನರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಅಭಿವ್ಯಕ್ತಿಯಾಗಿ ಟ್ವಿಟರ್‌ನಲ್ಲಿ ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಹ್ಯಾಷ್‌ಟ್ಯಾಗ್‌ಗಳು ಮೊದಲೆರಡು ಸ್ಥಾನಗಳಲ್ಲಿ ಟ್ರೆಂಡ್ ಆಗಿವೆ. ಅಲ್ಲದೆ ಮನ್ ಕಿ ಬಾತ್ ಬಕ್ವಾಸ್ ಎಂದು ಸಹ ಟ್ರೆಂಡ್ ಮಾಡಲಾಗಿದೆ.

ಇನ್ನು ಎಂದಿನಂತೆ ಇಂದಿನ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಯೂಟ್ಯೂಬ್ ಲೈವ್‌ ವಿಡಿಯೋಗೂ ಸಹ ಲೈಕ್‌ಗಿಂತ ಡಿಸ್‌ಲೈಕ್‌ಗಳ ಸಂಖ್ಯೆಯೇ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ 9,400 ಜನ ಡಿಸ್‌ಲೈಕ್ ಒತ್ತಿದರೆ, 7,800 ಜನ ಮಾತ್ರ ಲೈಕ್ ಒತ್ತಿದ್ದಾರೆ. ಅದೇ ರೀತಿ ಪಿಎಂಓ ಇಂಡಿಯಾ ಮತ್ತು ಭಾರತೀಯ ಜನತಾ ಪಾರ್ಟಿ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಲೈಕ್‌ಗಿಂತ ಡಿಸ್‌ಲೈಕ್‌ಗಳ ಸಂಖ್ಯೆಯೇ ಹೆಚ್ಚಾಗಿದೆ. ಹಾಗಾಗಿ ಮುಜುಗರದಿಂದ ತಪ್ಪಿಸಿಕೊಳ್ಳಲು ಅವುಗಳ ಸಂಖ್ಯೆಯನ್ನು ಕಾಣದಂತೆ ಮರೆಮಾಚಲಾಗಿದೆ. ಅಲ್ಲದೇ ಯುವಜನರ ಕಮೆಂಟ್‌ಗಳಿಗೆ ಹೆದರಿ ಎಲ್ಲಾ ಚಾನೆಲ್‌ಗಳಲ್ಲಿಯೂ ಸಹ ಕಮೆಂಟ್ ಸೆಕ್ಷನ್‌ ಅನ್ನು ಬ್ಲಾಕ್ ಮಾಡಲಾಗಿದ್ದು, ಯಾರೂ ಸಹ ಕಮೆಂಟ್ ಮಾಡದಂತೆ ತಡೆಯಲಾಗಿದೆ.

ಮೂರು ದಿನಗಳ ಹಿಂದೆ ಫೆಬ್ರವರಿ 25 ರಂದು ದೇಶಾದ್ಯಂತ ಯುವಜನರು ಉದ್ಯೋಗ ಬೇಕು ಎಂದು ಟ್ವಿಟರ್‌ನಲ್ಲಿ ಪ್ರಚಾರಾಂದೋಲನ ನಡೆಸಿದ್ದರು. ಒಂದೇ ದಿನ 80 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡುವ ಮೂಲಕ #modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ವಿಶ್ವದಲ್ಲಿಯೇ ಟ್ರೆಂಡಿಂಗ್‌ ಆಗಿದ್ದವು.

2020 ಆಗಸ್ಟ್ 30ರ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಯೂಟ್ಯೂಬ್‌ನಲ್ಲಿ ಬರೋಬ್ಬರಿ ಹತ್ತುಲಕ್ಷ ಡಿಸ್‌ಲೈಕ್‌ಗಳು ದಾಖಲಾಗಿದ್ದವು. ನಂತರ ಅದು ಯಾರಿಗೂ ಕಾಣದಂತೆ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗಿತ್ತು. ಅಲ್ಲಿಂದ ಮೋದಿಯವರ ಮನ್‌ ಕಿ ಬಾತ್‌ ಚರ್ಚೆಗೆ ಯೂಟ್ಯೂಬ್‌ ನಲ್ಲಿ ಲೈಕ್‌ಗಿಂತ ಡಿಸ್‌ಲೈಕ್‌ಗಳೇ ಹೆಚ್ಚಾಗುತ್ತಿವೆ. ಇದು ಯುವಜನರ ನಡುವೆ ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.


10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...