Homeಮುಖಪುಟನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

ನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

- Advertisement -
- Advertisement -

ಕಾಂಗ್ರೆಸ್‌ನ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರದ ಇಂಫಾಲ್ ಪಶ್ಚಿಮದ ಸೆಕ್ಮಾಯ್‌ನಿಂದ ಇಂದಿನ ಯಾತ್ರೆ ಆರಂಭವಾಗಿದೆ. ಯಾತ್ರೆಯ ವೇಳೆ ತಮ್ಮನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರ ಜತೆ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದು, ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಬೆಳಿಗ್ಗೆ 7.30ಕ್ಕೆ ಸೇವಾದಳದ ಧ್ವಾಜಾರೋಹಣ ಮಾಡುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆಯ 2ನೇ ದಿನವನ್ನು ಪ್ರಾರಂಭಿಸಲಾಯಿತು. ವಿಶೇಷವಾಗಿ ಸಿದ್ದಪಡಿಸಲಾಗಿರುವ ವೋಲ್ವೊ ಬಸ್‌ನಲ್ಲಿ ಯಾತ್ರೆ ನಡೆಯುತ್ತಿದ್ದು, ರಾಹುಲ್ ಗಾಂಧಿ ಜನರ ಕಷ್ಟಗಳನ್ನು ಆಲಿಸುತ್ತಾ ಯಾತ್ರೆಯಲ್ಲಿ ಸಾಗಿದ್ದಾರೆ. ಯಾತ್ರೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಯಾತ್ರೆಯು ಸೆಕ್ಮಾಯ್‌ಯಿಂದ ಕಂಗ್‌ಪೋಪ್ಕಿ, ಅಲ್ಲಿಂದ ಸೇನಾಪತಿವರೆಗೆ ಸಾಗಲಿದೆ. ರಾತ್ರಿ ನಾ‌ಗಾಲ್ಯಾಂಡ್‌ನಲ್ಲಿ ವಾಸ್ತವ್ಯ  ಇರಲಿದ್ದಾರೆ.

ನಿನ್ನೆ ತೌಬಲ್‌ನ ಖೋಂಗ್‌ಜೋಮ್‌ನಲ್ಲಿರುವ ಮೈದಾನದಿಂದ ಯಾತ್ರೆ ಆರಂಭಿಸಲಾಗಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ, ಖರ್ಗೆ ಸೇರಿ ಕಾಂಗ್ರೆಸ್‌ ನಾಯಕರು ವಾಗ್ಧಾಳಿ ನಡೆಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 66 ದಿನಗಳು ನಡೆಯಲಿದೆ. 15 ರಾಜ್ಯಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. ಮಾರ್ಚ್ ಮೂರನೇ ವಾರದಲ್ಲಿ ಯಾತ್ರೆ ಮುಂಬೈನಲ್ಲಿ ಕೊನೆಗೊಳ್ಳಲಿದೆ.

ದೇಶವು ದೊಡ್ಡ ಅನ್ಯಾಯವನ್ನು ಎದುರಿಸುತ್ತಿರುವ ಕಾರಣ ನಾವು ಯಾತ್ರೆಯನ್ನು ಕೈಗೊಳ್ಳಬೇಕಾಯಿತು ಎಂದು ಹೇಳಿದ ರಾಹುಲ್‌ ಗಾಂಧಿ, ಪಕ್ಷವು ಜನರ ‘ಮನ್ ಕಿ ಬಾತ್’ನ್ನು ಕೇಳಲು ಬಯಸುತ್ತದೆ. ಬಹುಶಃ ಬಿಜೆಪಿ ಮತ್ತು  ಆರೆಸ್ಸೆಸ್ಸ್‌ಗೆ ಮಣಿಪುರ ಭಾರತದ ಭಾಗವಾಗಿಲ್ಲ. ‘ಲಕ್ಷಗಟ್ಟಲೆ ಜನರು ನಷ್ಟವನ್ನು ಎದುರಿಸಿದ್ದಾರೆ. ಆದರೆ, ನಿಮ್ಮ ಕಣ್ಣೀರು ಒರೆಸಲು ಪ್ರಧಾನಿ ಇಲ್ಲಿಗೆ ಬಂದಿಲ್ಲ, ನಿಮ್ಮ ಕೈ ಹಿಡಿದಿಲ್ಲ, ನಿಮ್ಮನ್ನು ಅಪ್ಪಿಕೊಳ್ಳಲಿಲ್ಲ, ಬಹುಶಃ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್‌ಎಸ್ಎಸ್‌ಗೆ ಮಣಿಪುರ ಭಾರತದ ಭಾಗವಲ್ಲ. ನಿಮ್ಮ ನೋವು ಅವರ ನೋವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಈ ವೇಳೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಭಾರತೀಯ ನಾಗರಿಕರ ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಯಾತ್ರೆಯನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ವೋ ಸಮಂದರ್ ಕೆ ಉಪರ್ ಸೈರ್ ಕರ್ತಾ ಫಿರ್ತಾ ಹೈ ಔರ್ ಬೈತೆ ಜಗಹ್ ಜಪ್ ಕರ್ತೆ ರೆಹತೇ ಹೇ ರಾಮ್ ರಾಮ್ (ಅವರು ಸಮುದ್ರದ ಮೇಲಿನ ಸೇತುವೆಯ ಮೇಲೆ ಪ್ರವಾಸ ಮಾಡುತ್ತಿರುವುದನ್ನು ಕಾಣಬಹುದು ಅಥವಾ ರಾಮ್ ರಾಮ್ ಎಂದು ಜಪಿಸುತ್ತಿರುವುದು ಕಂಡುಬರುತ್ತದೆ)’.  ‘ಮುಖ್ ಮೇ ರಾಮ್, ಬಗಲ್ ಮೇ ಚೂರಿ, ಜನರೊಂದಿಗೆ ಹೀಗೆ ಮಾಡಬೇಡಿ… ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ. ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ… ಬಿಜೆಪಿಗರು ಜನರನ್ನು ಪ್ರಚೋದಿಸಲು ಧರ್ಮವನ್ನು ಬಳಸುತ್ತಾರೆ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...