Homeಮುಖಪುಟನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

ನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

- Advertisement -
- Advertisement -

ಕಾಂಗ್ರೆಸ್‌ನ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರದ ಇಂಫಾಲ್ ಪಶ್ಚಿಮದ ಸೆಕ್ಮಾಯ್‌ನಿಂದ ಇಂದಿನ ಯಾತ್ರೆ ಆರಂಭವಾಗಿದೆ. ಯಾತ್ರೆಯ ವೇಳೆ ತಮ್ಮನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರ ಜತೆ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದು, ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಬೆಳಿಗ್ಗೆ 7.30ಕ್ಕೆ ಸೇವಾದಳದ ಧ್ವಾಜಾರೋಹಣ ಮಾಡುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆಯ 2ನೇ ದಿನವನ್ನು ಪ್ರಾರಂಭಿಸಲಾಯಿತು. ವಿಶೇಷವಾಗಿ ಸಿದ್ದಪಡಿಸಲಾಗಿರುವ ವೋಲ್ವೊ ಬಸ್‌ನಲ್ಲಿ ಯಾತ್ರೆ ನಡೆಯುತ್ತಿದ್ದು, ರಾಹುಲ್ ಗಾಂಧಿ ಜನರ ಕಷ್ಟಗಳನ್ನು ಆಲಿಸುತ್ತಾ ಯಾತ್ರೆಯಲ್ಲಿ ಸಾಗಿದ್ದಾರೆ. ಯಾತ್ರೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಯಾತ್ರೆಯು ಸೆಕ್ಮಾಯ್‌ಯಿಂದ ಕಂಗ್‌ಪೋಪ್ಕಿ, ಅಲ್ಲಿಂದ ಸೇನಾಪತಿವರೆಗೆ ಸಾಗಲಿದೆ. ರಾತ್ರಿ ನಾ‌ಗಾಲ್ಯಾಂಡ್‌ನಲ್ಲಿ ವಾಸ್ತವ್ಯ  ಇರಲಿದ್ದಾರೆ.

ನಿನ್ನೆ ತೌಬಲ್‌ನ ಖೋಂಗ್‌ಜೋಮ್‌ನಲ್ಲಿರುವ ಮೈದಾನದಿಂದ ಯಾತ್ರೆ ಆರಂಭಿಸಲಾಗಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ, ಖರ್ಗೆ ಸೇರಿ ಕಾಂಗ್ರೆಸ್‌ ನಾಯಕರು ವಾಗ್ಧಾಳಿ ನಡೆಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 66 ದಿನಗಳು ನಡೆಯಲಿದೆ. 15 ರಾಜ್ಯಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. ಮಾರ್ಚ್ ಮೂರನೇ ವಾರದಲ್ಲಿ ಯಾತ್ರೆ ಮುಂಬೈನಲ್ಲಿ ಕೊನೆಗೊಳ್ಳಲಿದೆ.

ದೇಶವು ದೊಡ್ಡ ಅನ್ಯಾಯವನ್ನು ಎದುರಿಸುತ್ತಿರುವ ಕಾರಣ ನಾವು ಯಾತ್ರೆಯನ್ನು ಕೈಗೊಳ್ಳಬೇಕಾಯಿತು ಎಂದು ಹೇಳಿದ ರಾಹುಲ್‌ ಗಾಂಧಿ, ಪಕ್ಷವು ಜನರ ‘ಮನ್ ಕಿ ಬಾತ್’ನ್ನು ಕೇಳಲು ಬಯಸುತ್ತದೆ. ಬಹುಶಃ ಬಿಜೆಪಿ ಮತ್ತು  ಆರೆಸ್ಸೆಸ್ಸ್‌ಗೆ ಮಣಿಪುರ ಭಾರತದ ಭಾಗವಾಗಿಲ್ಲ. ‘ಲಕ್ಷಗಟ್ಟಲೆ ಜನರು ನಷ್ಟವನ್ನು ಎದುರಿಸಿದ್ದಾರೆ. ಆದರೆ, ನಿಮ್ಮ ಕಣ್ಣೀರು ಒರೆಸಲು ಪ್ರಧಾನಿ ಇಲ್ಲಿಗೆ ಬಂದಿಲ್ಲ, ನಿಮ್ಮ ಕೈ ಹಿಡಿದಿಲ್ಲ, ನಿಮ್ಮನ್ನು ಅಪ್ಪಿಕೊಳ್ಳಲಿಲ್ಲ, ಬಹುಶಃ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್‌ಎಸ್ಎಸ್‌ಗೆ ಮಣಿಪುರ ಭಾರತದ ಭಾಗವಲ್ಲ. ನಿಮ್ಮ ನೋವು ಅವರ ನೋವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಈ ವೇಳೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಭಾರತೀಯ ನಾಗರಿಕರ ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಯಾತ್ರೆಯನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ವೋ ಸಮಂದರ್ ಕೆ ಉಪರ್ ಸೈರ್ ಕರ್ತಾ ಫಿರ್ತಾ ಹೈ ಔರ್ ಬೈತೆ ಜಗಹ್ ಜಪ್ ಕರ್ತೆ ರೆಹತೇ ಹೇ ರಾಮ್ ರಾಮ್ (ಅವರು ಸಮುದ್ರದ ಮೇಲಿನ ಸೇತುವೆಯ ಮೇಲೆ ಪ್ರವಾಸ ಮಾಡುತ್ತಿರುವುದನ್ನು ಕಾಣಬಹುದು ಅಥವಾ ರಾಮ್ ರಾಮ್ ಎಂದು ಜಪಿಸುತ್ತಿರುವುದು ಕಂಡುಬರುತ್ತದೆ)’.  ‘ಮುಖ್ ಮೇ ರಾಮ್, ಬಗಲ್ ಮೇ ಚೂರಿ, ಜನರೊಂದಿಗೆ ಹೀಗೆ ಮಾಡಬೇಡಿ… ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ. ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ… ಬಿಜೆಪಿಗರು ಜನರನ್ನು ಪ್ರಚೋದಿಸಲು ಧರ್ಮವನ್ನು ಬಳಸುತ್ತಾರೆ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...