Homeಮುಖಪುಟನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

ನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

- Advertisement -
- Advertisement -

ಕಾಂಗ್ರೆಸ್‌ನ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರದ ಇಂಫಾಲ್ ಪಶ್ಚಿಮದ ಸೆಕ್ಮಾಯ್‌ನಿಂದ ಇಂದಿನ ಯಾತ್ರೆ ಆರಂಭವಾಗಿದೆ. ಯಾತ್ರೆಯ ವೇಳೆ ತಮ್ಮನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರ ಜತೆ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದು, ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಬೆಳಿಗ್ಗೆ 7.30ಕ್ಕೆ ಸೇವಾದಳದ ಧ್ವಾಜಾರೋಹಣ ಮಾಡುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆಯ 2ನೇ ದಿನವನ್ನು ಪ್ರಾರಂಭಿಸಲಾಯಿತು. ವಿಶೇಷವಾಗಿ ಸಿದ್ದಪಡಿಸಲಾಗಿರುವ ವೋಲ್ವೊ ಬಸ್‌ನಲ್ಲಿ ಯಾತ್ರೆ ನಡೆಯುತ್ತಿದ್ದು, ರಾಹುಲ್ ಗಾಂಧಿ ಜನರ ಕಷ್ಟಗಳನ್ನು ಆಲಿಸುತ್ತಾ ಯಾತ್ರೆಯಲ್ಲಿ ಸಾಗಿದ್ದಾರೆ. ಯಾತ್ರೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಯಾತ್ರೆಯು ಸೆಕ್ಮಾಯ್‌ಯಿಂದ ಕಂಗ್‌ಪೋಪ್ಕಿ, ಅಲ್ಲಿಂದ ಸೇನಾಪತಿವರೆಗೆ ಸಾಗಲಿದೆ. ರಾತ್ರಿ ನಾ‌ಗಾಲ್ಯಾಂಡ್‌ನಲ್ಲಿ ವಾಸ್ತವ್ಯ  ಇರಲಿದ್ದಾರೆ.

ನಿನ್ನೆ ತೌಬಲ್‌ನ ಖೋಂಗ್‌ಜೋಮ್‌ನಲ್ಲಿರುವ ಮೈದಾನದಿಂದ ಯಾತ್ರೆ ಆರಂಭಿಸಲಾಗಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ, ಖರ್ಗೆ ಸೇರಿ ಕಾಂಗ್ರೆಸ್‌ ನಾಯಕರು ವಾಗ್ಧಾಳಿ ನಡೆಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 66 ದಿನಗಳು ನಡೆಯಲಿದೆ. 15 ರಾಜ್ಯಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. ಮಾರ್ಚ್ ಮೂರನೇ ವಾರದಲ್ಲಿ ಯಾತ್ರೆ ಮುಂಬೈನಲ್ಲಿ ಕೊನೆಗೊಳ್ಳಲಿದೆ.

ದೇಶವು ದೊಡ್ಡ ಅನ್ಯಾಯವನ್ನು ಎದುರಿಸುತ್ತಿರುವ ಕಾರಣ ನಾವು ಯಾತ್ರೆಯನ್ನು ಕೈಗೊಳ್ಳಬೇಕಾಯಿತು ಎಂದು ಹೇಳಿದ ರಾಹುಲ್‌ ಗಾಂಧಿ, ಪಕ್ಷವು ಜನರ ‘ಮನ್ ಕಿ ಬಾತ್’ನ್ನು ಕೇಳಲು ಬಯಸುತ್ತದೆ. ಬಹುಶಃ ಬಿಜೆಪಿ ಮತ್ತು  ಆರೆಸ್ಸೆಸ್ಸ್‌ಗೆ ಮಣಿಪುರ ಭಾರತದ ಭಾಗವಾಗಿಲ್ಲ. ‘ಲಕ್ಷಗಟ್ಟಲೆ ಜನರು ನಷ್ಟವನ್ನು ಎದುರಿಸಿದ್ದಾರೆ. ಆದರೆ, ನಿಮ್ಮ ಕಣ್ಣೀರು ಒರೆಸಲು ಪ್ರಧಾನಿ ಇಲ್ಲಿಗೆ ಬಂದಿಲ್ಲ, ನಿಮ್ಮ ಕೈ ಹಿಡಿದಿಲ್ಲ, ನಿಮ್ಮನ್ನು ಅಪ್ಪಿಕೊಳ್ಳಲಿಲ್ಲ, ಬಹುಶಃ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್‌ಎಸ್ಎಸ್‌ಗೆ ಮಣಿಪುರ ಭಾರತದ ಭಾಗವಲ್ಲ. ನಿಮ್ಮ ನೋವು ಅವರ ನೋವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಈ ವೇಳೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಭಾರತೀಯ ನಾಗರಿಕರ ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಯಾತ್ರೆಯನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ವೋ ಸಮಂದರ್ ಕೆ ಉಪರ್ ಸೈರ್ ಕರ್ತಾ ಫಿರ್ತಾ ಹೈ ಔರ್ ಬೈತೆ ಜಗಹ್ ಜಪ್ ಕರ್ತೆ ರೆಹತೇ ಹೇ ರಾಮ್ ರಾಮ್ (ಅವರು ಸಮುದ್ರದ ಮೇಲಿನ ಸೇತುವೆಯ ಮೇಲೆ ಪ್ರವಾಸ ಮಾಡುತ್ತಿರುವುದನ್ನು ಕಾಣಬಹುದು ಅಥವಾ ರಾಮ್ ರಾಮ್ ಎಂದು ಜಪಿಸುತ್ತಿರುವುದು ಕಂಡುಬರುತ್ತದೆ)’.  ‘ಮುಖ್ ಮೇ ರಾಮ್, ಬಗಲ್ ಮೇ ಚೂರಿ, ಜನರೊಂದಿಗೆ ಹೀಗೆ ಮಾಡಬೇಡಿ… ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ. ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ… ಬಿಜೆಪಿಗರು ಜನರನ್ನು ಪ್ರಚೋದಿಸಲು ಧರ್ಮವನ್ನು ಬಳಸುತ್ತಾರೆ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...