Homeಮುಖಪುಟನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

ನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

- Advertisement -
- Advertisement -

ಕಾಂಗ್ರೆಸ್‌ನ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರದ ಇಂಫಾಲ್ ಪಶ್ಚಿಮದ ಸೆಕ್ಮಾಯ್‌ನಿಂದ ಇಂದಿನ ಯಾತ್ರೆ ಆರಂಭವಾಗಿದೆ. ಯಾತ್ರೆಯ ವೇಳೆ ತಮ್ಮನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರ ಜತೆ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದು, ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಬೆಳಿಗ್ಗೆ 7.30ಕ್ಕೆ ಸೇವಾದಳದ ಧ್ವಾಜಾರೋಹಣ ಮಾಡುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆಯ 2ನೇ ದಿನವನ್ನು ಪ್ರಾರಂಭಿಸಲಾಯಿತು. ವಿಶೇಷವಾಗಿ ಸಿದ್ದಪಡಿಸಲಾಗಿರುವ ವೋಲ್ವೊ ಬಸ್‌ನಲ್ಲಿ ಯಾತ್ರೆ ನಡೆಯುತ್ತಿದ್ದು, ರಾಹುಲ್ ಗಾಂಧಿ ಜನರ ಕಷ್ಟಗಳನ್ನು ಆಲಿಸುತ್ತಾ ಯಾತ್ರೆಯಲ್ಲಿ ಸಾಗಿದ್ದಾರೆ. ಯಾತ್ರೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಯಾತ್ರೆಯು ಸೆಕ್ಮಾಯ್‌ಯಿಂದ ಕಂಗ್‌ಪೋಪ್ಕಿ, ಅಲ್ಲಿಂದ ಸೇನಾಪತಿವರೆಗೆ ಸಾಗಲಿದೆ. ರಾತ್ರಿ ನಾ‌ಗಾಲ್ಯಾಂಡ್‌ನಲ್ಲಿ ವಾಸ್ತವ್ಯ  ಇರಲಿದ್ದಾರೆ.

ನಿನ್ನೆ ತೌಬಲ್‌ನ ಖೋಂಗ್‌ಜೋಮ್‌ನಲ್ಲಿರುವ ಮೈದಾನದಿಂದ ಯಾತ್ರೆ ಆರಂಭಿಸಲಾಗಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ, ಖರ್ಗೆ ಸೇರಿ ಕಾಂಗ್ರೆಸ್‌ ನಾಯಕರು ವಾಗ್ಧಾಳಿ ನಡೆಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 66 ದಿನಗಳು ನಡೆಯಲಿದೆ. 15 ರಾಜ್ಯಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. ಮಾರ್ಚ್ ಮೂರನೇ ವಾರದಲ್ಲಿ ಯಾತ್ರೆ ಮುಂಬೈನಲ್ಲಿ ಕೊನೆಗೊಳ್ಳಲಿದೆ.

ದೇಶವು ದೊಡ್ಡ ಅನ್ಯಾಯವನ್ನು ಎದುರಿಸುತ್ತಿರುವ ಕಾರಣ ನಾವು ಯಾತ್ರೆಯನ್ನು ಕೈಗೊಳ್ಳಬೇಕಾಯಿತು ಎಂದು ಹೇಳಿದ ರಾಹುಲ್‌ ಗಾಂಧಿ, ಪಕ್ಷವು ಜನರ ‘ಮನ್ ಕಿ ಬಾತ್’ನ್ನು ಕೇಳಲು ಬಯಸುತ್ತದೆ. ಬಹುಶಃ ಬಿಜೆಪಿ ಮತ್ತು  ಆರೆಸ್ಸೆಸ್ಸ್‌ಗೆ ಮಣಿಪುರ ಭಾರತದ ಭಾಗವಾಗಿಲ್ಲ. ‘ಲಕ್ಷಗಟ್ಟಲೆ ಜನರು ನಷ್ಟವನ್ನು ಎದುರಿಸಿದ್ದಾರೆ. ಆದರೆ, ನಿಮ್ಮ ಕಣ್ಣೀರು ಒರೆಸಲು ಪ್ರಧಾನಿ ಇಲ್ಲಿಗೆ ಬಂದಿಲ್ಲ, ನಿಮ್ಮ ಕೈ ಹಿಡಿದಿಲ್ಲ, ನಿಮ್ಮನ್ನು ಅಪ್ಪಿಕೊಳ್ಳಲಿಲ್ಲ, ಬಹುಶಃ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್‌ಎಸ್ಎಸ್‌ಗೆ ಮಣಿಪುರ ಭಾರತದ ಭಾಗವಲ್ಲ. ನಿಮ್ಮ ನೋವು ಅವರ ನೋವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಈ ವೇಳೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಭಾರತೀಯ ನಾಗರಿಕರ ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಯಾತ್ರೆಯನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ವೋ ಸಮಂದರ್ ಕೆ ಉಪರ್ ಸೈರ್ ಕರ್ತಾ ಫಿರ್ತಾ ಹೈ ಔರ್ ಬೈತೆ ಜಗಹ್ ಜಪ್ ಕರ್ತೆ ರೆಹತೇ ಹೇ ರಾಮ್ ರಾಮ್ (ಅವರು ಸಮುದ್ರದ ಮೇಲಿನ ಸೇತುವೆಯ ಮೇಲೆ ಪ್ರವಾಸ ಮಾಡುತ್ತಿರುವುದನ್ನು ಕಾಣಬಹುದು ಅಥವಾ ರಾಮ್ ರಾಮ್ ಎಂದು ಜಪಿಸುತ್ತಿರುವುದು ಕಂಡುಬರುತ್ತದೆ)’.  ‘ಮುಖ್ ಮೇ ರಾಮ್, ಬಗಲ್ ಮೇ ಚೂರಿ, ಜನರೊಂದಿಗೆ ಹೀಗೆ ಮಾಡಬೇಡಿ… ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ. ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ… ಬಿಜೆಪಿಗರು ಜನರನ್ನು ಪ್ರಚೋದಿಸಲು ಧರ್ಮವನ್ನು ಬಳಸುತ್ತಾರೆ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...