Homeಮುಖಪುಟನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

ನ್ಯಾಯ ಯಾತ್ರೆ Day-2: ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಬಯಸುತ್ತೇನೆ; ಜನರ ಜೊತೆ ರಾಹುಲ್‌ ಗಾಂಧಿ ಸಂವಾದ

- Advertisement -
- Advertisement -

ಕಾಂಗ್ರೆಸ್‌ನ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರದ ಇಂಫಾಲ್ ಪಶ್ಚಿಮದ ಸೆಕ್ಮಾಯ್‌ನಿಂದ ಇಂದಿನ ಯಾತ್ರೆ ಆರಂಭವಾಗಿದೆ. ಯಾತ್ರೆಯ ವೇಳೆ ತಮ್ಮನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರ ಜತೆ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದು, ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಬೆಳಿಗ್ಗೆ 7.30ಕ್ಕೆ ಸೇವಾದಳದ ಧ್ವಾಜಾರೋಹಣ ಮಾಡುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆಯ 2ನೇ ದಿನವನ್ನು ಪ್ರಾರಂಭಿಸಲಾಯಿತು. ವಿಶೇಷವಾಗಿ ಸಿದ್ದಪಡಿಸಲಾಗಿರುವ ವೋಲ್ವೊ ಬಸ್‌ನಲ್ಲಿ ಯಾತ್ರೆ ನಡೆಯುತ್ತಿದ್ದು, ರಾಹುಲ್ ಗಾಂಧಿ ಜನರ ಕಷ್ಟಗಳನ್ನು ಆಲಿಸುತ್ತಾ ಯಾತ್ರೆಯಲ್ಲಿ ಸಾಗಿದ್ದಾರೆ. ಯಾತ್ರೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಯಾತ್ರೆಯು ಸೆಕ್ಮಾಯ್‌ಯಿಂದ ಕಂಗ್‌ಪೋಪ್ಕಿ, ಅಲ್ಲಿಂದ ಸೇನಾಪತಿವರೆಗೆ ಸಾಗಲಿದೆ. ರಾತ್ರಿ ನಾ‌ಗಾಲ್ಯಾಂಡ್‌ನಲ್ಲಿ ವಾಸ್ತವ್ಯ  ಇರಲಿದ್ದಾರೆ.

ನಿನ್ನೆ ತೌಬಲ್‌ನ ಖೋಂಗ್‌ಜೋಮ್‌ನಲ್ಲಿರುವ ಮೈದಾನದಿಂದ ಯಾತ್ರೆ ಆರಂಭಿಸಲಾಗಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ, ಖರ್ಗೆ ಸೇರಿ ಕಾಂಗ್ರೆಸ್‌ ನಾಯಕರು ವಾಗ್ಧಾಳಿ ನಡೆಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 66 ದಿನಗಳು ನಡೆಯಲಿದೆ. 15 ರಾಜ್ಯಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. ಮಾರ್ಚ್ ಮೂರನೇ ವಾರದಲ್ಲಿ ಯಾತ್ರೆ ಮುಂಬೈನಲ್ಲಿ ಕೊನೆಗೊಳ್ಳಲಿದೆ.

ದೇಶವು ದೊಡ್ಡ ಅನ್ಯಾಯವನ್ನು ಎದುರಿಸುತ್ತಿರುವ ಕಾರಣ ನಾವು ಯಾತ್ರೆಯನ್ನು ಕೈಗೊಳ್ಳಬೇಕಾಯಿತು ಎಂದು ಹೇಳಿದ ರಾಹುಲ್‌ ಗಾಂಧಿ, ಪಕ್ಷವು ಜನರ ‘ಮನ್ ಕಿ ಬಾತ್’ನ್ನು ಕೇಳಲು ಬಯಸುತ್ತದೆ. ಬಹುಶಃ ಬಿಜೆಪಿ ಮತ್ತು  ಆರೆಸ್ಸೆಸ್ಸ್‌ಗೆ ಮಣಿಪುರ ಭಾರತದ ಭಾಗವಾಗಿಲ್ಲ. ‘ಲಕ್ಷಗಟ್ಟಲೆ ಜನರು ನಷ್ಟವನ್ನು ಎದುರಿಸಿದ್ದಾರೆ. ಆದರೆ, ನಿಮ್ಮ ಕಣ್ಣೀರು ಒರೆಸಲು ಪ್ರಧಾನಿ ಇಲ್ಲಿಗೆ ಬಂದಿಲ್ಲ, ನಿಮ್ಮ ಕೈ ಹಿಡಿದಿಲ್ಲ, ನಿಮ್ಮನ್ನು ಅಪ್ಪಿಕೊಳ್ಳಲಿಲ್ಲ, ಬಹುಶಃ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್‌ಎಸ್ಎಸ್‌ಗೆ ಮಣಿಪುರ ಭಾರತದ ಭಾಗವಲ್ಲ. ನಿಮ್ಮ ನೋವು ಅವರ ನೋವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಈ ವೇಳೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಭಾರತೀಯ ನಾಗರಿಕರ ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಯಾತ್ರೆಯನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ವೋ ಸಮಂದರ್ ಕೆ ಉಪರ್ ಸೈರ್ ಕರ್ತಾ ಫಿರ್ತಾ ಹೈ ಔರ್ ಬೈತೆ ಜಗಹ್ ಜಪ್ ಕರ್ತೆ ರೆಹತೇ ಹೇ ರಾಮ್ ರಾಮ್ (ಅವರು ಸಮುದ್ರದ ಮೇಲಿನ ಸೇತುವೆಯ ಮೇಲೆ ಪ್ರವಾಸ ಮಾಡುತ್ತಿರುವುದನ್ನು ಕಾಣಬಹುದು ಅಥವಾ ರಾಮ್ ರಾಮ್ ಎಂದು ಜಪಿಸುತ್ತಿರುವುದು ಕಂಡುಬರುತ್ತದೆ)’.  ‘ಮುಖ್ ಮೇ ರಾಮ್, ಬಗಲ್ ಮೇ ಚೂರಿ, ಜನರೊಂದಿಗೆ ಹೀಗೆ ಮಾಡಬೇಡಿ… ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ. ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ… ಬಿಜೆಪಿಗರು ಜನರನ್ನು ಪ್ರಚೋದಿಸಲು ಧರ್ಮವನ್ನು ಬಳಸುತ್ತಾರೆ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...