Homeಮುಖಪುಟನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

"ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ"

- Advertisement -
- Advertisement -

ಅಂತರ್ ಧರ್ಮೀಯ ಕುಟುಂಬದ ಸೀಮಂತ ಕಾರ್ಯಕ್ರಮದ ಬಗ್ಗೆ ಜಾಹೀರಾತು ಮಾಡಿದ್ದ ತನಿಷ್ಕ್ ಆಭರಣ ಕಂಪನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳ ಬೆನ್ನಲ್ಲೇ ಕಂಪನಿ ಜಾಹೀರಾತನ್ನು ನಿಲ್ಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ತನಿಷ್ಕ್ನ ಈ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ತನಿಷ್ಕ್ ಜಾಹೀರಾತು ವಿವಾದದ ಬಗ್ಗೆ ಮೊದಲ ಬಾರಿಗೆ ಜಾಹೀರಾತು ನಿರ್ದೇಶಕಿ ಜೊಯೀತಾ ಪಟ್ಪಟಿಯಾ ಪ್ರತಿಕ್ರಿಯೆ ನೀಡಿದ್ದಾರೆ. ’ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಭಯಾನಕ ಸಂಗತಿಗಳು ನನ್ನ ದಾರಿಯಲ್ಲಿ ಬರುತ್ತಿವೆ. ಆದರೆ ಅವುಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಏಷ್ಯಾ ಮತ್ತು ಯುಕೆಗಳಲ್ಲಿ ಜಾಹೀರಾತುಗಳು, ಮ್ಯೂಸಿಕ್ ವಿಡಿಯೋಗಳನ್ನು ನಿರ್ಮಿಸಿ ಪ್ರಶಸ್ತಿ ಪಡೆದಿರುವ ಈಕೆ, ’ ಈ ಅಭಿಯಾನಕ್ಕೆ ಬರುತ್ತಿರುವ ಪ್ರೀತಿ, ಸುಂದರವಾದ ಕಲಾಕೃತಿಗಳು ಮತ್ತು ಸುಂದರ ಟಿಪ್ಪಣಿಗಳನ್ನು ಹಂಚಿಕೊಳ್ಳುವುದು ಉತ್ತಮ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ತನಿಷ್ಕ್ ಅವರ ‘ಏಕತ್ವಂ’ ಅಭಿಯಾನದ ಚಿತ್ರಕಥೆಯು ಏಕತೆಯ ಪರಿಕಲ್ಪನೆಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೊಯೀತಾ ಹೇಳುತ್ತಾರೆ. “ಈ ಅಭಿಯಾನವು ಏಕತೆ ಮತ್ತು ಏಕತೆಯ ಕಲ್ಪನೆಯಿಂದ ಬಂದಿದೆ ಮತ್ತು ಅದಕ್ಕಾಗಿಯೇ ಇದನ್ನು‘ ಏಕತ್ವಂ ’ಎಂದು ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಈ ಅಭಿಯಾನ ನಾಲ್ಕು ಚಿತ್ರಗಳ ಅಭಿಯಾನವಾಗಿತ್ತು. ಇವುಗಳ ಸ್ಕ್ರಿಪ್ಟ್‌ಗಳು ಅದ್ಭುತವಾಗಿದ್ದವು. ನಮಗೆ ಅದರಲ್ಲಿ ಯಾವುದೇ ವಿವಾದಾಸ್ಪದ ಅಂಶ ಕಾಣಿಸಲಿಲ್ಲ. ನಮ್ಮ ಧಾರಾವಾಹಿಗಳು ಕೆಲವು ಬಾರಿ ಅತ್ತೆ ಮತ್ತು ಸೊಸೆಯನ್ನು ನಕಾರಾತ್ಮಕ ಅಂಶದಲ್ಲಿ ತೋರಿಸುತ್ತವೆ. ಆದರೆ ಈ ಸ್ಕ್ರಿಪ್ಟ್ ಓದಿದಾಗ ನನಗೆ ಒಂದೇ ಭಾರಿಗೆ ಇಷ್ಟವಾಗಿತ್ತು. ಇಬ್ಬರು ಮಹಿಳೆಯರ ಕಥೆ ಇದು. ಇಬ್ಬರ ನಡುವಿನ ಪ್ರೀತಿಯ ಬಗ್ಗೆ, ಮಹಿಳೆಯ ಅತ್ತೆ ಮತ್ತು ಅತ್ತೆ ಕುಟುಂಬದ ಪ್ರೀತಿಯ ಕಥೆಯಾಗಿತ್ತು ಎನ್ನುತ್ತಾರೆ.

ಜಾಹೀರಾತು ತಯಾರಿಕೆ ಬಗ್ಗೆ ಮಾತನಾಡಿದ ಜೊಯೀತಾ, ’ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ. ನಾವು ಸಂಶೋಧನೆ ಮಾಡಿ ಈ ವಿಚಾರಗಳನ್ನು ತಿಳಿದುಕೊಂಡು ಸಣ್ಣ ಸಣ್ಣ ವಿವರಗಳನ್ನು ಜಾಹೀರಾತಿನಲ್ಲಿ ಇರಿಸಿದ್ದೇವೆ’ ಎಂದಿದ್ದಾರೆ.

’ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ನಾವು ಮುಂದೆ ಸಾಗಿದ್ದೇವೆ ಎಂದು ಭಾವಿಸಿದ್ದೇನೆ. ಹಿಂದೆ ಹೋಗುತ್ತಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಕೊಂಚ ಮಟ್ಟದ ಚರ್ಚೆ, ಮಾತುಕತೆಯಾಗಬಹುದು ಎಂದು ಭಾವಿಸಿದ್ದೆವು ಆದರೆ ಈ ಮಟ್ಟದ ದ್ವೇಷ, ವಿಷವನ್ನು ಹೊರಹಾಕಲಾಗಿದೆ. ನಿಜವಾಗಿಯೂ ಇದು ಆಘಾತಕಾರಿಯಾದದ್ದು. ಇದೊಂದು ಟ್ರೋಲ್ ಸೈನ್ಯ’ ಎಂದಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಜಾಹೀರಾತಿನ ಬಗ್ಗೆ ಕೆಲವು ಆನ್‌ಲೈನ್ ಚರ್ಚೆಗಳಲ್ಲಿ, ಜಾಹೀರಾತಿನಲ್ಲಿ ಹಿಂದೂ ಅಳಿಯನೊಂದಿಗೆ ಮುಸ್ಲಿಂ ವಧುವನ್ನು ತೋರಿಸಿದ್ದರೆ ವಿವಾದವು ನಡೆಯುತ್ತಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೊಯೀತಾ ಧರ್ಮಗಳನ್ನು ಅದಲು-ಬದಲು ಮಾಡಿದ್ದರೂ ಈ ಪ್ರತಿಕ್ರಿಯೆಗಳು ಭಿನ್ನವಾಗಿರುತ್ತಿರಲಿಲ್ಲ ಎನ್ನುತ್ತಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದರು.

ಜೊಯೀತಾ ಈ ವಿವಾದದ ನಂತರ ತಾನು ಪಡೆಯುತ್ತಿರುವ ಪ್ರೀತಿ ಮತ್ತು ಬೆಂಬಲದ ಕಡೆ ತನ್ನ ಗಮನ ಕೇಂದ್ರಿಕರಿಸಲು ಬಯಸುತ್ತಾರೆ. ಜೊತೆಗೆ ಹೇಳುತ್ತಾರೆ, ಭಾರತದಲ್ಲಿ ಮಾತ್ರವಲ್ಲ, ಪಂಚದಾದ್ಯಂತ ಯಾವಾಗಲೂ ಕೆಟ್ಟ ಸಂಗತಿಗಳು ನಡೆಯುತ್ತಿವೆ. ಪಂಚದಾದ್ಯಂತ ವರ್ಣಭೇದ ನೀತಿ ಇದೆ. ಭಾರತದಲ್ಲಿ ಹಲವಾರು ಸಮುದಾಯಗಳಿವೆ. ಇಲ್ಲಿ ಈಗ ಇದು ಚರ್ಚೆಯ ವಿಷಯವಾಗಿದೆ, ಆದರೆ ಒಂದು ದೇಶವಾಗಿ, ನಾವು ಜಗತ್ತಿಗೆ ದೇಶದ ಒಳ್ಳೆಯ ಭಾಗವನ್ನು ತೋರಿಸಲು ಬಯಸುವುದಿಲ್ಲವೇ..? ಎಂದು ಪ್ರಶ್ನಿಸುತ್ತಾರೆ.

ಜೊತೆಗೆ ನಾವು ಯಾವಾಗಲೂ ಜಾತ್ಯತೀತ ದೇಶದವರಾಗಿದ್ದೇವೆ ಮತ್ತು ನಾವು ಯಾವಾಗಲೂ ಹಾಗೇ ಇರುತ್ತೇವೆ. ಮುಂದಿನ ಪೀಳಿಗೆ ನಾವು ಮಾತನಾಡುತ್ತಿರುವ ವಿಷಯಗಳ ಬಗ್ಗೆ ಬದಲಾವಣೆ ತರುತ್ತದೆ. ಏಕೆಂದರೆ ಯುವ ಪೀಳಿಗೆಯಿಂದ ನನಗೆ ದೊರೆತ ಅದ್ಭುತ ಪ್ರೀತಿ ಮತ್ತು ಬೆಂಬಲ ಅಗಾಧವಾಗಿದೆ” ಎಂದು ಹೇಳುತ್ತಾರೆ ನಿರ್ದೇಶಕಿ.

ತನಿಷ್ಕ್ ಜಾಹೀರಾತಿಗೆ ಅನೇಕ ಜಾಹೀರಾತು ಕಂಪನಿಗಳು ಬೆಂಬಲ ಸೂಚಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಏಕತ್ವಂ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ:  ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...