Homeಮುಖಪುಟನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

"ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ"

- Advertisement -
- Advertisement -

ಅಂತರ್ ಧರ್ಮೀಯ ಕುಟುಂಬದ ಸೀಮಂತ ಕಾರ್ಯಕ್ರಮದ ಬಗ್ಗೆ ಜಾಹೀರಾತು ಮಾಡಿದ್ದ ತನಿಷ್ಕ್ ಆಭರಣ ಕಂಪನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳ ಬೆನ್ನಲ್ಲೇ ಕಂಪನಿ ಜಾಹೀರಾತನ್ನು ನಿಲ್ಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ತನಿಷ್ಕ್ನ ಈ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ತನಿಷ್ಕ್ ಜಾಹೀರಾತು ವಿವಾದದ ಬಗ್ಗೆ ಮೊದಲ ಬಾರಿಗೆ ಜಾಹೀರಾತು ನಿರ್ದೇಶಕಿ ಜೊಯೀತಾ ಪಟ್ಪಟಿಯಾ ಪ್ರತಿಕ್ರಿಯೆ ನೀಡಿದ್ದಾರೆ. ’ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಭಯಾನಕ ಸಂಗತಿಗಳು ನನ್ನ ದಾರಿಯಲ್ಲಿ ಬರುತ್ತಿವೆ. ಆದರೆ ಅವುಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಏಷ್ಯಾ ಮತ್ತು ಯುಕೆಗಳಲ್ಲಿ ಜಾಹೀರಾತುಗಳು, ಮ್ಯೂಸಿಕ್ ವಿಡಿಯೋಗಳನ್ನು ನಿರ್ಮಿಸಿ ಪ್ರಶಸ್ತಿ ಪಡೆದಿರುವ ಈಕೆ, ’ ಈ ಅಭಿಯಾನಕ್ಕೆ ಬರುತ್ತಿರುವ ಪ್ರೀತಿ, ಸುಂದರವಾದ ಕಲಾಕೃತಿಗಳು ಮತ್ತು ಸುಂದರ ಟಿಪ್ಪಣಿಗಳನ್ನು ಹಂಚಿಕೊಳ್ಳುವುದು ಉತ್ತಮ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ತನಿಷ್ಕ್ ಅವರ ‘ಏಕತ್ವಂ’ ಅಭಿಯಾನದ ಚಿತ್ರಕಥೆಯು ಏಕತೆಯ ಪರಿಕಲ್ಪನೆಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೊಯೀತಾ ಹೇಳುತ್ತಾರೆ. “ಈ ಅಭಿಯಾನವು ಏಕತೆ ಮತ್ತು ಏಕತೆಯ ಕಲ್ಪನೆಯಿಂದ ಬಂದಿದೆ ಮತ್ತು ಅದಕ್ಕಾಗಿಯೇ ಇದನ್ನು‘ ಏಕತ್ವಂ ’ಎಂದು ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಈ ಅಭಿಯಾನ ನಾಲ್ಕು ಚಿತ್ರಗಳ ಅಭಿಯಾನವಾಗಿತ್ತು. ಇವುಗಳ ಸ್ಕ್ರಿಪ್ಟ್‌ಗಳು ಅದ್ಭುತವಾಗಿದ್ದವು. ನಮಗೆ ಅದರಲ್ಲಿ ಯಾವುದೇ ವಿವಾದಾಸ್ಪದ ಅಂಶ ಕಾಣಿಸಲಿಲ್ಲ. ನಮ್ಮ ಧಾರಾವಾಹಿಗಳು ಕೆಲವು ಬಾರಿ ಅತ್ತೆ ಮತ್ತು ಸೊಸೆಯನ್ನು ನಕಾರಾತ್ಮಕ ಅಂಶದಲ್ಲಿ ತೋರಿಸುತ್ತವೆ. ಆದರೆ ಈ ಸ್ಕ್ರಿಪ್ಟ್ ಓದಿದಾಗ ನನಗೆ ಒಂದೇ ಭಾರಿಗೆ ಇಷ್ಟವಾಗಿತ್ತು. ಇಬ್ಬರು ಮಹಿಳೆಯರ ಕಥೆ ಇದು. ಇಬ್ಬರ ನಡುವಿನ ಪ್ರೀತಿಯ ಬಗ್ಗೆ, ಮಹಿಳೆಯ ಅತ್ತೆ ಮತ್ತು ಅತ್ತೆ ಕುಟುಂಬದ ಪ್ರೀತಿಯ ಕಥೆಯಾಗಿತ್ತು ಎನ್ನುತ್ತಾರೆ.

ಜಾಹೀರಾತು ತಯಾರಿಕೆ ಬಗ್ಗೆ ಮಾತನಾಡಿದ ಜೊಯೀತಾ, ’ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ. ನಾವು ಸಂಶೋಧನೆ ಮಾಡಿ ಈ ವಿಚಾರಗಳನ್ನು ತಿಳಿದುಕೊಂಡು ಸಣ್ಣ ಸಣ್ಣ ವಿವರಗಳನ್ನು ಜಾಹೀರಾತಿನಲ್ಲಿ ಇರಿಸಿದ್ದೇವೆ’ ಎಂದಿದ್ದಾರೆ.

’ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ನಾವು ಮುಂದೆ ಸಾಗಿದ್ದೇವೆ ಎಂದು ಭಾವಿಸಿದ್ದೇನೆ. ಹಿಂದೆ ಹೋಗುತ್ತಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಕೊಂಚ ಮಟ್ಟದ ಚರ್ಚೆ, ಮಾತುಕತೆಯಾಗಬಹುದು ಎಂದು ಭಾವಿಸಿದ್ದೆವು ಆದರೆ ಈ ಮಟ್ಟದ ದ್ವೇಷ, ವಿಷವನ್ನು ಹೊರಹಾಕಲಾಗಿದೆ. ನಿಜವಾಗಿಯೂ ಇದು ಆಘಾತಕಾರಿಯಾದದ್ದು. ಇದೊಂದು ಟ್ರೋಲ್ ಸೈನ್ಯ’ ಎಂದಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಜಾಹೀರಾತಿನ ಬಗ್ಗೆ ಕೆಲವು ಆನ್‌ಲೈನ್ ಚರ್ಚೆಗಳಲ್ಲಿ, ಜಾಹೀರಾತಿನಲ್ಲಿ ಹಿಂದೂ ಅಳಿಯನೊಂದಿಗೆ ಮುಸ್ಲಿಂ ವಧುವನ್ನು ತೋರಿಸಿದ್ದರೆ ವಿವಾದವು ನಡೆಯುತ್ತಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೊಯೀತಾ ಧರ್ಮಗಳನ್ನು ಅದಲು-ಬದಲು ಮಾಡಿದ್ದರೂ ಈ ಪ್ರತಿಕ್ರಿಯೆಗಳು ಭಿನ್ನವಾಗಿರುತ್ತಿರಲಿಲ್ಲ ಎನ್ನುತ್ತಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದರು.

ಜೊಯೀತಾ ಈ ವಿವಾದದ ನಂತರ ತಾನು ಪಡೆಯುತ್ತಿರುವ ಪ್ರೀತಿ ಮತ್ತು ಬೆಂಬಲದ ಕಡೆ ತನ್ನ ಗಮನ ಕೇಂದ್ರಿಕರಿಸಲು ಬಯಸುತ್ತಾರೆ. ಜೊತೆಗೆ ಹೇಳುತ್ತಾರೆ, ಭಾರತದಲ್ಲಿ ಮಾತ್ರವಲ್ಲ, ಪಂಚದಾದ್ಯಂತ ಯಾವಾಗಲೂ ಕೆಟ್ಟ ಸಂಗತಿಗಳು ನಡೆಯುತ್ತಿವೆ. ಪಂಚದಾದ್ಯಂತ ವರ್ಣಭೇದ ನೀತಿ ಇದೆ. ಭಾರತದಲ್ಲಿ ಹಲವಾರು ಸಮುದಾಯಗಳಿವೆ. ಇಲ್ಲಿ ಈಗ ಇದು ಚರ್ಚೆಯ ವಿಷಯವಾಗಿದೆ, ಆದರೆ ಒಂದು ದೇಶವಾಗಿ, ನಾವು ಜಗತ್ತಿಗೆ ದೇಶದ ಒಳ್ಳೆಯ ಭಾಗವನ್ನು ತೋರಿಸಲು ಬಯಸುವುದಿಲ್ಲವೇ..? ಎಂದು ಪ್ರಶ್ನಿಸುತ್ತಾರೆ.

ಜೊತೆಗೆ ನಾವು ಯಾವಾಗಲೂ ಜಾತ್ಯತೀತ ದೇಶದವರಾಗಿದ್ದೇವೆ ಮತ್ತು ನಾವು ಯಾವಾಗಲೂ ಹಾಗೇ ಇರುತ್ತೇವೆ. ಮುಂದಿನ ಪೀಳಿಗೆ ನಾವು ಮಾತನಾಡುತ್ತಿರುವ ವಿಷಯಗಳ ಬಗ್ಗೆ ಬದಲಾವಣೆ ತರುತ್ತದೆ. ಏಕೆಂದರೆ ಯುವ ಪೀಳಿಗೆಯಿಂದ ನನಗೆ ದೊರೆತ ಅದ್ಭುತ ಪ್ರೀತಿ ಮತ್ತು ಬೆಂಬಲ ಅಗಾಧವಾಗಿದೆ” ಎಂದು ಹೇಳುತ್ತಾರೆ ನಿರ್ದೇಶಕಿ.

ತನಿಷ್ಕ್ ಜಾಹೀರಾತಿಗೆ ಅನೇಕ ಜಾಹೀರಾತು ಕಂಪನಿಗಳು ಬೆಂಬಲ ಸೂಚಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಏಕತ್ವಂ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ:  ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...