Homeಮುಖಪುಟನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

"ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ"

- Advertisement -
- Advertisement -

ಅಂತರ್ ಧರ್ಮೀಯ ಕುಟುಂಬದ ಸೀಮಂತ ಕಾರ್ಯಕ್ರಮದ ಬಗ್ಗೆ ಜಾಹೀರಾತು ಮಾಡಿದ್ದ ತನಿಷ್ಕ್ ಆಭರಣ ಕಂಪನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳ ಬೆನ್ನಲ್ಲೇ ಕಂಪನಿ ಜಾಹೀರಾತನ್ನು ನಿಲ್ಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ತನಿಷ್ಕ್ನ ಈ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ತನಿಷ್ಕ್ ಜಾಹೀರಾತು ವಿವಾದದ ಬಗ್ಗೆ ಮೊದಲ ಬಾರಿಗೆ ಜಾಹೀರಾತು ನಿರ್ದೇಶಕಿ ಜೊಯೀತಾ ಪಟ್ಪಟಿಯಾ ಪ್ರತಿಕ್ರಿಯೆ ನೀಡಿದ್ದಾರೆ. ’ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಭಯಾನಕ ಸಂಗತಿಗಳು ನನ್ನ ದಾರಿಯಲ್ಲಿ ಬರುತ್ತಿವೆ. ಆದರೆ ಅವುಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಏಷ್ಯಾ ಮತ್ತು ಯುಕೆಗಳಲ್ಲಿ ಜಾಹೀರಾತುಗಳು, ಮ್ಯೂಸಿಕ್ ವಿಡಿಯೋಗಳನ್ನು ನಿರ್ಮಿಸಿ ಪ್ರಶಸ್ತಿ ಪಡೆದಿರುವ ಈಕೆ, ’ ಈ ಅಭಿಯಾನಕ್ಕೆ ಬರುತ್ತಿರುವ ಪ್ರೀತಿ, ಸುಂದರವಾದ ಕಲಾಕೃತಿಗಳು ಮತ್ತು ಸುಂದರ ಟಿಪ್ಪಣಿಗಳನ್ನು ಹಂಚಿಕೊಳ್ಳುವುದು ಉತ್ತಮ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ತನಿಷ್ಕ್ ಅವರ ‘ಏಕತ್ವಂ’ ಅಭಿಯಾನದ ಚಿತ್ರಕಥೆಯು ಏಕತೆಯ ಪರಿಕಲ್ಪನೆಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೊಯೀತಾ ಹೇಳುತ್ತಾರೆ. “ಈ ಅಭಿಯಾನವು ಏಕತೆ ಮತ್ತು ಏಕತೆಯ ಕಲ್ಪನೆಯಿಂದ ಬಂದಿದೆ ಮತ್ತು ಅದಕ್ಕಾಗಿಯೇ ಇದನ್ನು‘ ಏಕತ್ವಂ ’ಎಂದು ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಈ ಅಭಿಯಾನ ನಾಲ್ಕು ಚಿತ್ರಗಳ ಅಭಿಯಾನವಾಗಿತ್ತು. ಇವುಗಳ ಸ್ಕ್ರಿಪ್ಟ್‌ಗಳು ಅದ್ಭುತವಾಗಿದ್ದವು. ನಮಗೆ ಅದರಲ್ಲಿ ಯಾವುದೇ ವಿವಾದಾಸ್ಪದ ಅಂಶ ಕಾಣಿಸಲಿಲ್ಲ. ನಮ್ಮ ಧಾರಾವಾಹಿಗಳು ಕೆಲವು ಬಾರಿ ಅತ್ತೆ ಮತ್ತು ಸೊಸೆಯನ್ನು ನಕಾರಾತ್ಮಕ ಅಂಶದಲ್ಲಿ ತೋರಿಸುತ್ತವೆ. ಆದರೆ ಈ ಸ್ಕ್ರಿಪ್ಟ್ ಓದಿದಾಗ ನನಗೆ ಒಂದೇ ಭಾರಿಗೆ ಇಷ್ಟವಾಗಿತ್ತು. ಇಬ್ಬರು ಮಹಿಳೆಯರ ಕಥೆ ಇದು. ಇಬ್ಬರ ನಡುವಿನ ಪ್ರೀತಿಯ ಬಗ್ಗೆ, ಮಹಿಳೆಯ ಅತ್ತೆ ಮತ್ತು ಅತ್ತೆ ಕುಟುಂಬದ ಪ್ರೀತಿಯ ಕಥೆಯಾಗಿತ್ತು ಎನ್ನುತ್ತಾರೆ.

ಜಾಹೀರಾತು ತಯಾರಿಕೆ ಬಗ್ಗೆ ಮಾತನಾಡಿದ ಜೊಯೀತಾ, ’ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ. ನಾವು ಸಂಶೋಧನೆ ಮಾಡಿ ಈ ವಿಚಾರಗಳನ್ನು ತಿಳಿದುಕೊಂಡು ಸಣ್ಣ ಸಣ್ಣ ವಿವರಗಳನ್ನು ಜಾಹೀರಾತಿನಲ್ಲಿ ಇರಿಸಿದ್ದೇವೆ’ ಎಂದಿದ್ದಾರೆ.

’ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ನಾವು ಮುಂದೆ ಸಾಗಿದ್ದೇವೆ ಎಂದು ಭಾವಿಸಿದ್ದೇನೆ. ಹಿಂದೆ ಹೋಗುತ್ತಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಕೊಂಚ ಮಟ್ಟದ ಚರ್ಚೆ, ಮಾತುಕತೆಯಾಗಬಹುದು ಎಂದು ಭಾವಿಸಿದ್ದೆವು ಆದರೆ ಈ ಮಟ್ಟದ ದ್ವೇಷ, ವಿಷವನ್ನು ಹೊರಹಾಕಲಾಗಿದೆ. ನಿಜವಾಗಿಯೂ ಇದು ಆಘಾತಕಾರಿಯಾದದ್ದು. ಇದೊಂದು ಟ್ರೋಲ್ ಸೈನ್ಯ’ ಎಂದಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಜಾಹೀರಾತಿನ ಬಗ್ಗೆ ಕೆಲವು ಆನ್‌ಲೈನ್ ಚರ್ಚೆಗಳಲ್ಲಿ, ಜಾಹೀರಾತಿನಲ್ಲಿ ಹಿಂದೂ ಅಳಿಯನೊಂದಿಗೆ ಮುಸ್ಲಿಂ ವಧುವನ್ನು ತೋರಿಸಿದ್ದರೆ ವಿವಾದವು ನಡೆಯುತ್ತಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೊಯೀತಾ ಧರ್ಮಗಳನ್ನು ಅದಲು-ಬದಲು ಮಾಡಿದ್ದರೂ ಈ ಪ್ರತಿಕ್ರಿಯೆಗಳು ಭಿನ್ನವಾಗಿರುತ್ತಿರಲಿಲ್ಲ ಎನ್ನುತ್ತಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದರು.

ಜೊಯೀತಾ ಈ ವಿವಾದದ ನಂತರ ತಾನು ಪಡೆಯುತ್ತಿರುವ ಪ್ರೀತಿ ಮತ್ತು ಬೆಂಬಲದ ಕಡೆ ತನ್ನ ಗಮನ ಕೇಂದ್ರಿಕರಿಸಲು ಬಯಸುತ್ತಾರೆ. ಜೊತೆಗೆ ಹೇಳುತ್ತಾರೆ, ಭಾರತದಲ್ಲಿ ಮಾತ್ರವಲ್ಲ, ಪಂಚದಾದ್ಯಂತ ಯಾವಾಗಲೂ ಕೆಟ್ಟ ಸಂಗತಿಗಳು ನಡೆಯುತ್ತಿವೆ. ಪಂಚದಾದ್ಯಂತ ವರ್ಣಭೇದ ನೀತಿ ಇದೆ. ಭಾರತದಲ್ಲಿ ಹಲವಾರು ಸಮುದಾಯಗಳಿವೆ. ಇಲ್ಲಿ ಈಗ ಇದು ಚರ್ಚೆಯ ವಿಷಯವಾಗಿದೆ, ಆದರೆ ಒಂದು ದೇಶವಾಗಿ, ನಾವು ಜಗತ್ತಿಗೆ ದೇಶದ ಒಳ್ಳೆಯ ಭಾಗವನ್ನು ತೋರಿಸಲು ಬಯಸುವುದಿಲ್ಲವೇ..? ಎಂದು ಪ್ರಶ್ನಿಸುತ್ತಾರೆ.

ಜೊತೆಗೆ ನಾವು ಯಾವಾಗಲೂ ಜಾತ್ಯತೀತ ದೇಶದವರಾಗಿದ್ದೇವೆ ಮತ್ತು ನಾವು ಯಾವಾಗಲೂ ಹಾಗೇ ಇರುತ್ತೇವೆ. ಮುಂದಿನ ಪೀಳಿಗೆ ನಾವು ಮಾತನಾಡುತ್ತಿರುವ ವಿಷಯಗಳ ಬಗ್ಗೆ ಬದಲಾವಣೆ ತರುತ್ತದೆ. ಏಕೆಂದರೆ ಯುವ ಪೀಳಿಗೆಯಿಂದ ನನಗೆ ದೊರೆತ ಅದ್ಭುತ ಪ್ರೀತಿ ಮತ್ತು ಬೆಂಬಲ ಅಗಾಧವಾಗಿದೆ” ಎಂದು ಹೇಳುತ್ತಾರೆ ನಿರ್ದೇಶಕಿ.

ತನಿಷ್ಕ್ ಜಾಹೀರಾತಿಗೆ ಅನೇಕ ಜಾಹೀರಾತು ಕಂಪನಿಗಳು ಬೆಂಬಲ ಸೂಚಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಏಕತ್ವಂ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ:  ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...