Homeಮುಖಪುಟನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

"ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ"

- Advertisement -
- Advertisement -

ಅಂತರ್ ಧರ್ಮೀಯ ಕುಟುಂಬದ ಸೀಮಂತ ಕಾರ್ಯಕ್ರಮದ ಬಗ್ಗೆ ಜಾಹೀರಾತು ಮಾಡಿದ್ದ ತನಿಷ್ಕ್ ಆಭರಣ ಕಂಪನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳ ಬೆನ್ನಲ್ಲೇ ಕಂಪನಿ ಜಾಹೀರಾತನ್ನು ನಿಲ್ಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ತನಿಷ್ಕ್ನ ಈ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ತನಿಷ್ಕ್ ಜಾಹೀರಾತು ವಿವಾದದ ಬಗ್ಗೆ ಮೊದಲ ಬಾರಿಗೆ ಜಾಹೀರಾತು ನಿರ್ದೇಶಕಿ ಜೊಯೀತಾ ಪಟ್ಪಟಿಯಾ ಪ್ರತಿಕ್ರಿಯೆ ನೀಡಿದ್ದಾರೆ. ’ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಭಯಾನಕ ಸಂಗತಿಗಳು ನನ್ನ ದಾರಿಯಲ್ಲಿ ಬರುತ್ತಿವೆ. ಆದರೆ ಅವುಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಏಷ್ಯಾ ಮತ್ತು ಯುಕೆಗಳಲ್ಲಿ ಜಾಹೀರಾತುಗಳು, ಮ್ಯೂಸಿಕ್ ವಿಡಿಯೋಗಳನ್ನು ನಿರ್ಮಿಸಿ ಪ್ರಶಸ್ತಿ ಪಡೆದಿರುವ ಈಕೆ, ’ ಈ ಅಭಿಯಾನಕ್ಕೆ ಬರುತ್ತಿರುವ ಪ್ರೀತಿ, ಸುಂದರವಾದ ಕಲಾಕೃತಿಗಳು ಮತ್ತು ಸುಂದರ ಟಿಪ್ಪಣಿಗಳನ್ನು ಹಂಚಿಕೊಳ್ಳುವುದು ಉತ್ತಮ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ತನಿಷ್ಕ್ ಅವರ ‘ಏಕತ್ವಂ’ ಅಭಿಯಾನದ ಚಿತ್ರಕಥೆಯು ಏಕತೆಯ ಪರಿಕಲ್ಪನೆಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೊಯೀತಾ ಹೇಳುತ್ತಾರೆ. “ಈ ಅಭಿಯಾನವು ಏಕತೆ ಮತ್ತು ಏಕತೆಯ ಕಲ್ಪನೆಯಿಂದ ಬಂದಿದೆ ಮತ್ತು ಅದಕ್ಕಾಗಿಯೇ ಇದನ್ನು‘ ಏಕತ್ವಂ ’ಎಂದು ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಈ ಅಭಿಯಾನ ನಾಲ್ಕು ಚಿತ್ರಗಳ ಅಭಿಯಾನವಾಗಿತ್ತು. ಇವುಗಳ ಸ್ಕ್ರಿಪ್ಟ್‌ಗಳು ಅದ್ಭುತವಾಗಿದ್ದವು. ನಮಗೆ ಅದರಲ್ಲಿ ಯಾವುದೇ ವಿವಾದಾಸ್ಪದ ಅಂಶ ಕಾಣಿಸಲಿಲ್ಲ. ನಮ್ಮ ಧಾರಾವಾಹಿಗಳು ಕೆಲವು ಬಾರಿ ಅತ್ತೆ ಮತ್ತು ಸೊಸೆಯನ್ನು ನಕಾರಾತ್ಮಕ ಅಂಶದಲ್ಲಿ ತೋರಿಸುತ್ತವೆ. ಆದರೆ ಈ ಸ್ಕ್ರಿಪ್ಟ್ ಓದಿದಾಗ ನನಗೆ ಒಂದೇ ಭಾರಿಗೆ ಇಷ್ಟವಾಗಿತ್ತು. ಇಬ್ಬರು ಮಹಿಳೆಯರ ಕಥೆ ಇದು. ಇಬ್ಬರ ನಡುವಿನ ಪ್ರೀತಿಯ ಬಗ್ಗೆ, ಮಹಿಳೆಯ ಅತ್ತೆ ಮತ್ತು ಅತ್ತೆ ಕುಟುಂಬದ ಪ್ರೀತಿಯ ಕಥೆಯಾಗಿತ್ತು ಎನ್ನುತ್ತಾರೆ.

ಜಾಹೀರಾತು ತಯಾರಿಕೆ ಬಗ್ಗೆ ಮಾತನಾಡಿದ ಜೊಯೀತಾ, ’ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ. ನಾವು ಸಂಶೋಧನೆ ಮಾಡಿ ಈ ವಿಚಾರಗಳನ್ನು ತಿಳಿದುಕೊಂಡು ಸಣ್ಣ ಸಣ್ಣ ವಿವರಗಳನ್ನು ಜಾಹೀರಾತಿನಲ್ಲಿ ಇರಿಸಿದ್ದೇವೆ’ ಎಂದಿದ್ದಾರೆ.

’ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ನಾವು ಮುಂದೆ ಸಾಗಿದ್ದೇವೆ ಎಂದು ಭಾವಿಸಿದ್ದೇನೆ. ಹಿಂದೆ ಹೋಗುತ್ತಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಕೊಂಚ ಮಟ್ಟದ ಚರ್ಚೆ, ಮಾತುಕತೆಯಾಗಬಹುದು ಎಂದು ಭಾವಿಸಿದ್ದೆವು ಆದರೆ ಈ ಮಟ್ಟದ ದ್ವೇಷ, ವಿಷವನ್ನು ಹೊರಹಾಕಲಾಗಿದೆ. ನಿಜವಾಗಿಯೂ ಇದು ಆಘಾತಕಾರಿಯಾದದ್ದು. ಇದೊಂದು ಟ್ರೋಲ್ ಸೈನ್ಯ’ ಎಂದಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಜಾಹೀರಾತಿನ ಬಗ್ಗೆ ಕೆಲವು ಆನ್‌ಲೈನ್ ಚರ್ಚೆಗಳಲ್ಲಿ, ಜಾಹೀರಾತಿನಲ್ಲಿ ಹಿಂದೂ ಅಳಿಯನೊಂದಿಗೆ ಮುಸ್ಲಿಂ ವಧುವನ್ನು ತೋರಿಸಿದ್ದರೆ ವಿವಾದವು ನಡೆಯುತ್ತಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೊಯೀತಾ ಧರ್ಮಗಳನ್ನು ಅದಲು-ಬದಲು ಮಾಡಿದ್ದರೂ ಈ ಪ್ರತಿಕ್ರಿಯೆಗಳು ಭಿನ್ನವಾಗಿರುತ್ತಿರಲಿಲ್ಲ ಎನ್ನುತ್ತಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದರು.

ಜೊಯೀತಾ ಈ ವಿವಾದದ ನಂತರ ತಾನು ಪಡೆಯುತ್ತಿರುವ ಪ್ರೀತಿ ಮತ್ತು ಬೆಂಬಲದ ಕಡೆ ತನ್ನ ಗಮನ ಕೇಂದ್ರಿಕರಿಸಲು ಬಯಸುತ್ತಾರೆ. ಜೊತೆಗೆ ಹೇಳುತ್ತಾರೆ, ಭಾರತದಲ್ಲಿ ಮಾತ್ರವಲ್ಲ, ಪಂಚದಾದ್ಯಂತ ಯಾವಾಗಲೂ ಕೆಟ್ಟ ಸಂಗತಿಗಳು ನಡೆಯುತ್ತಿವೆ. ಪಂಚದಾದ್ಯಂತ ವರ್ಣಭೇದ ನೀತಿ ಇದೆ. ಭಾರತದಲ್ಲಿ ಹಲವಾರು ಸಮುದಾಯಗಳಿವೆ. ಇಲ್ಲಿ ಈಗ ಇದು ಚರ್ಚೆಯ ವಿಷಯವಾಗಿದೆ, ಆದರೆ ಒಂದು ದೇಶವಾಗಿ, ನಾವು ಜಗತ್ತಿಗೆ ದೇಶದ ಒಳ್ಳೆಯ ಭಾಗವನ್ನು ತೋರಿಸಲು ಬಯಸುವುದಿಲ್ಲವೇ..? ಎಂದು ಪ್ರಶ್ನಿಸುತ್ತಾರೆ.

ಜೊತೆಗೆ ನಾವು ಯಾವಾಗಲೂ ಜಾತ್ಯತೀತ ದೇಶದವರಾಗಿದ್ದೇವೆ ಮತ್ತು ನಾವು ಯಾವಾಗಲೂ ಹಾಗೇ ಇರುತ್ತೇವೆ. ಮುಂದಿನ ಪೀಳಿಗೆ ನಾವು ಮಾತನಾಡುತ್ತಿರುವ ವಿಷಯಗಳ ಬಗ್ಗೆ ಬದಲಾವಣೆ ತರುತ್ತದೆ. ಏಕೆಂದರೆ ಯುವ ಪೀಳಿಗೆಯಿಂದ ನನಗೆ ದೊರೆತ ಅದ್ಭುತ ಪ್ರೀತಿ ಮತ್ತು ಬೆಂಬಲ ಅಗಾಧವಾಗಿದೆ” ಎಂದು ಹೇಳುತ್ತಾರೆ ನಿರ್ದೇಶಕಿ.

ತನಿಷ್ಕ್ ಜಾಹೀರಾತಿಗೆ ಅನೇಕ ಜಾಹೀರಾತು ಕಂಪನಿಗಳು ಬೆಂಬಲ ಸೂಚಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಏಕತ್ವಂ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ:  ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....