Homeಮುಖಪುಟನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

"ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ"

- Advertisement -
- Advertisement -

ಅಂತರ್ ಧರ್ಮೀಯ ಕುಟುಂಬದ ಸೀಮಂತ ಕಾರ್ಯಕ್ರಮದ ಬಗ್ಗೆ ಜಾಹೀರಾತು ಮಾಡಿದ್ದ ತನಿಷ್ಕ್ ಆಭರಣ ಕಂಪನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳ ಬೆನ್ನಲ್ಲೇ ಕಂಪನಿ ಜಾಹೀರಾತನ್ನು ನಿಲ್ಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ತನಿಷ್ಕ್ನ ಈ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ತನಿಷ್ಕ್ ಜಾಹೀರಾತು ವಿವಾದದ ಬಗ್ಗೆ ಮೊದಲ ಬಾರಿಗೆ ಜಾಹೀರಾತು ನಿರ್ದೇಶಕಿ ಜೊಯೀತಾ ಪಟ್ಪಟಿಯಾ ಪ್ರತಿಕ್ರಿಯೆ ನೀಡಿದ್ದಾರೆ. ’ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಭಯಾನಕ ಸಂಗತಿಗಳು ನನ್ನ ದಾರಿಯಲ್ಲಿ ಬರುತ್ತಿವೆ. ಆದರೆ ಅವುಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಏಷ್ಯಾ ಮತ್ತು ಯುಕೆಗಳಲ್ಲಿ ಜಾಹೀರಾತುಗಳು, ಮ್ಯೂಸಿಕ್ ವಿಡಿಯೋಗಳನ್ನು ನಿರ್ಮಿಸಿ ಪ್ರಶಸ್ತಿ ಪಡೆದಿರುವ ಈಕೆ, ’ ಈ ಅಭಿಯಾನಕ್ಕೆ ಬರುತ್ತಿರುವ ಪ್ರೀತಿ, ಸುಂದರವಾದ ಕಲಾಕೃತಿಗಳು ಮತ್ತು ಸುಂದರ ಟಿಪ್ಪಣಿಗಳನ್ನು ಹಂಚಿಕೊಳ್ಳುವುದು ಉತ್ತಮ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ತನಿಷ್ಕ್ ಅವರ ‘ಏಕತ್ವಂ’ ಅಭಿಯಾನದ ಚಿತ್ರಕಥೆಯು ಏಕತೆಯ ಪರಿಕಲ್ಪನೆಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೊಯೀತಾ ಹೇಳುತ್ತಾರೆ. “ಈ ಅಭಿಯಾನವು ಏಕತೆ ಮತ್ತು ಏಕತೆಯ ಕಲ್ಪನೆಯಿಂದ ಬಂದಿದೆ ಮತ್ತು ಅದಕ್ಕಾಗಿಯೇ ಇದನ್ನು‘ ಏಕತ್ವಂ ’ಎಂದು ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಈ ಅಭಿಯಾನ ನಾಲ್ಕು ಚಿತ್ರಗಳ ಅಭಿಯಾನವಾಗಿತ್ತು. ಇವುಗಳ ಸ್ಕ್ರಿಪ್ಟ್‌ಗಳು ಅದ್ಭುತವಾಗಿದ್ದವು. ನಮಗೆ ಅದರಲ್ಲಿ ಯಾವುದೇ ವಿವಾದಾಸ್ಪದ ಅಂಶ ಕಾಣಿಸಲಿಲ್ಲ. ನಮ್ಮ ಧಾರಾವಾಹಿಗಳು ಕೆಲವು ಬಾರಿ ಅತ್ತೆ ಮತ್ತು ಸೊಸೆಯನ್ನು ನಕಾರಾತ್ಮಕ ಅಂಶದಲ್ಲಿ ತೋರಿಸುತ್ತವೆ. ಆದರೆ ಈ ಸ್ಕ್ರಿಪ್ಟ್ ಓದಿದಾಗ ನನಗೆ ಒಂದೇ ಭಾರಿಗೆ ಇಷ್ಟವಾಗಿತ್ತು. ಇಬ್ಬರು ಮಹಿಳೆಯರ ಕಥೆ ಇದು. ಇಬ್ಬರ ನಡುವಿನ ಪ್ರೀತಿಯ ಬಗ್ಗೆ, ಮಹಿಳೆಯ ಅತ್ತೆ ಮತ್ತು ಅತ್ತೆ ಕುಟುಂಬದ ಪ್ರೀತಿಯ ಕಥೆಯಾಗಿತ್ತು ಎನ್ನುತ್ತಾರೆ.

ಜಾಹೀರಾತು ತಯಾರಿಕೆ ಬಗ್ಗೆ ಮಾತನಾಡಿದ ಜೊಯೀತಾ, ’ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ. ನಾವು ಸಂಶೋಧನೆ ಮಾಡಿ ಈ ವಿಚಾರಗಳನ್ನು ತಿಳಿದುಕೊಂಡು ಸಣ್ಣ ಸಣ್ಣ ವಿವರಗಳನ್ನು ಜಾಹೀರಾತಿನಲ್ಲಿ ಇರಿಸಿದ್ದೇವೆ’ ಎಂದಿದ್ದಾರೆ.

’ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ನಾವು ಮುಂದೆ ಸಾಗಿದ್ದೇವೆ ಎಂದು ಭಾವಿಸಿದ್ದೇನೆ. ಹಿಂದೆ ಹೋಗುತ್ತಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಕೊಂಚ ಮಟ್ಟದ ಚರ್ಚೆ, ಮಾತುಕತೆಯಾಗಬಹುದು ಎಂದು ಭಾವಿಸಿದ್ದೆವು ಆದರೆ ಈ ಮಟ್ಟದ ದ್ವೇಷ, ವಿಷವನ್ನು ಹೊರಹಾಕಲಾಗಿದೆ. ನಿಜವಾಗಿಯೂ ಇದು ಆಘಾತಕಾರಿಯಾದದ್ದು. ಇದೊಂದು ಟ್ರೋಲ್ ಸೈನ್ಯ’ ಎಂದಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಜಾಹೀರಾತಿನ ಬಗ್ಗೆ ಕೆಲವು ಆನ್‌ಲೈನ್ ಚರ್ಚೆಗಳಲ್ಲಿ, ಜಾಹೀರಾತಿನಲ್ಲಿ ಹಿಂದೂ ಅಳಿಯನೊಂದಿಗೆ ಮುಸ್ಲಿಂ ವಧುವನ್ನು ತೋರಿಸಿದ್ದರೆ ವಿವಾದವು ನಡೆಯುತ್ತಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೊಯೀತಾ ಧರ್ಮಗಳನ್ನು ಅದಲು-ಬದಲು ಮಾಡಿದ್ದರೂ ಈ ಪ್ರತಿಕ್ರಿಯೆಗಳು ಭಿನ್ನವಾಗಿರುತ್ತಿರಲಿಲ್ಲ ಎನ್ನುತ್ತಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದರು.

ಜೊಯೀತಾ ಈ ವಿವಾದದ ನಂತರ ತಾನು ಪಡೆಯುತ್ತಿರುವ ಪ್ರೀತಿ ಮತ್ತು ಬೆಂಬಲದ ಕಡೆ ತನ್ನ ಗಮನ ಕೇಂದ್ರಿಕರಿಸಲು ಬಯಸುತ್ತಾರೆ. ಜೊತೆಗೆ ಹೇಳುತ್ತಾರೆ, ಭಾರತದಲ್ಲಿ ಮಾತ್ರವಲ್ಲ, ಪಂಚದಾದ್ಯಂತ ಯಾವಾಗಲೂ ಕೆಟ್ಟ ಸಂಗತಿಗಳು ನಡೆಯುತ್ತಿವೆ. ಪಂಚದಾದ್ಯಂತ ವರ್ಣಭೇದ ನೀತಿ ಇದೆ. ಭಾರತದಲ್ಲಿ ಹಲವಾರು ಸಮುದಾಯಗಳಿವೆ. ಇಲ್ಲಿ ಈಗ ಇದು ಚರ್ಚೆಯ ವಿಷಯವಾಗಿದೆ, ಆದರೆ ಒಂದು ದೇಶವಾಗಿ, ನಾವು ಜಗತ್ತಿಗೆ ದೇಶದ ಒಳ್ಳೆಯ ಭಾಗವನ್ನು ತೋರಿಸಲು ಬಯಸುವುದಿಲ್ಲವೇ..? ಎಂದು ಪ್ರಶ್ನಿಸುತ್ತಾರೆ.

ಜೊತೆಗೆ ನಾವು ಯಾವಾಗಲೂ ಜಾತ್ಯತೀತ ದೇಶದವರಾಗಿದ್ದೇವೆ ಮತ್ತು ನಾವು ಯಾವಾಗಲೂ ಹಾಗೇ ಇರುತ್ತೇವೆ. ಮುಂದಿನ ಪೀಳಿಗೆ ನಾವು ಮಾತನಾಡುತ್ತಿರುವ ವಿಷಯಗಳ ಬಗ್ಗೆ ಬದಲಾವಣೆ ತರುತ್ತದೆ. ಏಕೆಂದರೆ ಯುವ ಪೀಳಿಗೆಯಿಂದ ನನಗೆ ದೊರೆತ ಅದ್ಭುತ ಪ್ರೀತಿ ಮತ್ತು ಬೆಂಬಲ ಅಗಾಧವಾಗಿದೆ” ಎಂದು ಹೇಳುತ್ತಾರೆ ನಿರ್ದೇಶಕಿ.

ತನಿಷ್ಕ್ ಜಾಹೀರಾತಿಗೆ ಅನೇಕ ಜಾಹೀರಾತು ಕಂಪನಿಗಳು ಬೆಂಬಲ ಸೂಚಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಏಕತ್ವಂ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ:  ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...