Homeಮುಖಪುಟ"ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು"...ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

- Advertisement -
- Advertisement -

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ.

“ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅಮೃತಸರ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂದಿಳಿದ ಪಂಜಾಬ್ ಮತ್ತು ಹರಿಯಾಣ ಮೂಲದ ಅಕ್ರಮ ವಲಸಿಗರು, ಎಲ್ಲಾ ವಿಧಿ ವಿಧಾನಗಳ ಬಳಿಕ ಪೊಲೀಸ್ ವಾಹನಗಳಲ್ಲಿ ತಮ್ಮ ಊರಿನತ್ತ ತೆರಳಿದ್ದಾರೆ.

ಗಡಿಪಾರು ಮಾಡಲಾದ ಭಾರತೀಯ ವಲಸಿಗರಲ್ಲಿ ಒಬ್ಬರಾದ ಹರಿಯಾಣದ ಜಸ್ಪಾಲ್ ಸಿಂಗ್ “ನಮ್ಮ ಕೈಗೆ ಬೇಡಿ, ಕಾಲಿಗೆ ಸಂಕೋಲೆ ಬಿಗಿದು ಅಮೆರಿಕದಿಂದ ಹೊರದಬ್ಬಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ಮೊದಲಿಗೆ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದಿರಲಿಲ್ಲ. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬರು ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ನಮ್ಮ ಕೈಗಳಿಗೆ ಕೋಳ ಹಾಕಿ, ಕಾಲುಗಳಿಗೆ ಸರಪಳಿ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ಜಸ್ಪಾಲ್ ಸಿಂಗ್ ವಿವರಿಸಿದ್ದಾರೆ.

“ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶದ ಭರವಸೆ ನೀಡಿದ್ದ ಟ್ರಾವೆಲ್ ಏಜೆಂಟ್‌ನಿಂದ ನನಗೆ ವಂಚನೆಯಾಗಿದೆ. ಸರಿಯಾದ ಯುಎಸ್ ವೀಸಾ ಪಡೆದ ನಂತರ ನನ್ನನ್ನು ಕಳುಹಿಸಲು ನಾನು ಏಜೆಂಟರನ್ನು ಕೇಳಿದ್ದೆ. ಆದರೆ, ಅವರು ನನ್ನನ್ನು ವಂಚಿಸಿದರು. ಏಜೆಂಟರೊಂದಿಗಿನ ಒಪ್ಪಂದವನ್ನು 30 ಲಕ್ಷ ರೂ.ಗೆ ಅಂತಿಮಗೊಳಿಸಲಾಗಿತ್ತು” ಎಂದು ಹೇಳಿದ್ದಾರೆ.

“ಕಳೆದ ವರ್ಷ ಜುಲೈನಲ್ಲಿ ತಾನು ವಿಮಾನದ ಮೂಲಕ ಬ್ರೆಝಿಲ್ ತಲುಪಿದ್ದಾಗಿ ಜಸ್ಪಾಲ್ ಹೇಳಿಕೊಂಡಿದ್ದಾರೆ. ಮುಂದಿನ ಹಂತದ ಅಮೆರಿಕ ಪ್ರಯಾಣವೂ ವಿಮಾನದ ಮೂಲಕವೇ ಆಗಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ತನ್ನ ಏಜೆಂಟ್ ಅಕ್ರಮವಾಗಿ ಗಡಿ ದಾಟುವಂತೆ ಒತ್ತಾಯಿಸಿ ವಂಚಿಸಿದ” ಎಂದು ತಿಳಿಸಿದ್ದಾರೆ.

“ಬ್ರೆಝಿಲ್‌ನಲ್ಲಿ ಆರು ತಿಂಗಳು ತಂಗಿದ್ದ ನಾನು ಗಡಿ ದಾಟಿ ಅಮೆರಿಕ ತಲುಪಿದೆ. ಆದರೆ ಅಮೆರಿಕದ ಗಡಿ ಗಸ್ತು ಪಡೆಯಿಂದ ಬಂಧಿನಕ್ಕೊಳಗಾದೆ. ಅವರು 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟು ನಂತರ ಮನೆಗೆ ಕಳುಹಿಸಿದರು” ಎಂದು ಜಸ್ಪಾಲ್ ಹೇಳಿದ್ದಾರೆ.

“ಅಮೆರಿಕಕ್ಕೆ ತೆರಳಲು ಸಾಲ ಪಡೆದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೆ.ಇದೀಗ ಗಡಿಪಾರು ಮಾಡುವಿಕೆಯಿಂದ ತಾನು ಜರ್ಜರಿತನಾಗಿದ್ದೇನೆ” ಎಂದು ಜಸ್ಪಾಲ್ ಹೇಳಿಕೊಂಡಿದ್ದಾರೆ.

ಗಡಿಪಾರು ಪ್ರಕ್ರಿಯೆ ಕುರಿತು ಮಾತನಾಡಿರುವ ಜಸ್ಪಾಲ್, “ಇದು ಸರ್ಕಾರಗಳ ಸಮಸ್ಯೆ. ನಾವು ಕನಸುಗಳನ್ನು ಹೊತ್ತು ನಮ್ಮ ಕುಟುಂಬದ ಭವಿಷ್ಯಕ್ಕಾಗಿ ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗಿರುತ್ತೇವೆ. ಯಾರದ್ದೋ ತಪ್ಪಿಗೆ ನಾವು ಬಲಿಪಶುಗಳಾಗಿದ್ದೇವೆ” ಎಂದಿದ್ದಾರೆ.

Courtesy : timesofindia.indiatimes.com

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...