Homeಮುಖಪುಟ"ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು"...ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

- Advertisement -
- Advertisement -

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ.

“ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅಮೃತಸರ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂದಿಳಿದ ಪಂಜಾಬ್ ಮತ್ತು ಹರಿಯಾಣ ಮೂಲದ ಅಕ್ರಮ ವಲಸಿಗರು, ಎಲ್ಲಾ ವಿಧಿ ವಿಧಾನಗಳ ಬಳಿಕ ಪೊಲೀಸ್ ವಾಹನಗಳಲ್ಲಿ ತಮ್ಮ ಊರಿನತ್ತ ತೆರಳಿದ್ದಾರೆ.

ಗಡಿಪಾರು ಮಾಡಲಾದ ಭಾರತೀಯ ವಲಸಿಗರಲ್ಲಿ ಒಬ್ಬರಾದ ಹರಿಯಾಣದ ಜಸ್ಪಾಲ್ ಸಿಂಗ್ “ನಮ್ಮ ಕೈಗೆ ಬೇಡಿ, ಕಾಲಿಗೆ ಸಂಕೋಲೆ ಬಿಗಿದು ಅಮೆರಿಕದಿಂದ ಹೊರದಬ್ಬಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ಮೊದಲಿಗೆ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದಿರಲಿಲ್ಲ. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬರು ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ನಮ್ಮ ಕೈಗಳಿಗೆ ಕೋಳ ಹಾಕಿ, ಕಾಲುಗಳಿಗೆ ಸರಪಳಿ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ಜಸ್ಪಾಲ್ ಸಿಂಗ್ ವಿವರಿಸಿದ್ದಾರೆ.

“ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶದ ಭರವಸೆ ನೀಡಿದ್ದ ಟ್ರಾವೆಲ್ ಏಜೆಂಟ್‌ನಿಂದ ನನಗೆ ವಂಚನೆಯಾಗಿದೆ. ಸರಿಯಾದ ಯುಎಸ್ ವೀಸಾ ಪಡೆದ ನಂತರ ನನ್ನನ್ನು ಕಳುಹಿಸಲು ನಾನು ಏಜೆಂಟರನ್ನು ಕೇಳಿದ್ದೆ. ಆದರೆ, ಅವರು ನನ್ನನ್ನು ವಂಚಿಸಿದರು. ಏಜೆಂಟರೊಂದಿಗಿನ ಒಪ್ಪಂದವನ್ನು 30 ಲಕ್ಷ ರೂ.ಗೆ ಅಂತಿಮಗೊಳಿಸಲಾಗಿತ್ತು” ಎಂದು ಹೇಳಿದ್ದಾರೆ.

“ಕಳೆದ ವರ್ಷ ಜುಲೈನಲ್ಲಿ ತಾನು ವಿಮಾನದ ಮೂಲಕ ಬ್ರೆಝಿಲ್ ತಲುಪಿದ್ದಾಗಿ ಜಸ್ಪಾಲ್ ಹೇಳಿಕೊಂಡಿದ್ದಾರೆ. ಮುಂದಿನ ಹಂತದ ಅಮೆರಿಕ ಪ್ರಯಾಣವೂ ವಿಮಾನದ ಮೂಲಕವೇ ಆಗಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ತನ್ನ ಏಜೆಂಟ್ ಅಕ್ರಮವಾಗಿ ಗಡಿ ದಾಟುವಂತೆ ಒತ್ತಾಯಿಸಿ ವಂಚಿಸಿದ” ಎಂದು ತಿಳಿಸಿದ್ದಾರೆ.

“ಬ್ರೆಝಿಲ್‌ನಲ್ಲಿ ಆರು ತಿಂಗಳು ತಂಗಿದ್ದ ನಾನು ಗಡಿ ದಾಟಿ ಅಮೆರಿಕ ತಲುಪಿದೆ. ಆದರೆ ಅಮೆರಿಕದ ಗಡಿ ಗಸ್ತು ಪಡೆಯಿಂದ ಬಂಧಿನಕ್ಕೊಳಗಾದೆ. ಅವರು 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟು ನಂತರ ಮನೆಗೆ ಕಳುಹಿಸಿದರು” ಎಂದು ಜಸ್ಪಾಲ್ ಹೇಳಿದ್ದಾರೆ.

“ಅಮೆರಿಕಕ್ಕೆ ತೆರಳಲು ಸಾಲ ಪಡೆದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೆ.ಇದೀಗ ಗಡಿಪಾರು ಮಾಡುವಿಕೆಯಿಂದ ತಾನು ಜರ್ಜರಿತನಾಗಿದ್ದೇನೆ” ಎಂದು ಜಸ್ಪಾಲ್ ಹೇಳಿಕೊಂಡಿದ್ದಾರೆ.

ಗಡಿಪಾರು ಪ್ರಕ್ರಿಯೆ ಕುರಿತು ಮಾತನಾಡಿರುವ ಜಸ್ಪಾಲ್, “ಇದು ಸರ್ಕಾರಗಳ ಸಮಸ್ಯೆ. ನಾವು ಕನಸುಗಳನ್ನು ಹೊತ್ತು ನಮ್ಮ ಕುಟುಂಬದ ಭವಿಷ್ಯಕ್ಕಾಗಿ ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗಿರುತ್ತೇವೆ. ಯಾರದ್ದೋ ತಪ್ಪಿಗೆ ನಾವು ಬಲಿಪಶುಗಳಾಗಿದ್ದೇವೆ” ಎಂದಿದ್ದಾರೆ.

Courtesy : timesofindia.indiatimes.com

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಮಹಿಳೆಯರಿಗಷ್ಟೇ ಏಕೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...