Homeಮುಖಪುಟ"ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು"...ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

- Advertisement -
- Advertisement -

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ.

“ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅಮೃತಸರ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂದಿಳಿದ ಪಂಜಾಬ್ ಮತ್ತು ಹರಿಯಾಣ ಮೂಲದ ಅಕ್ರಮ ವಲಸಿಗರು, ಎಲ್ಲಾ ವಿಧಿ ವಿಧಾನಗಳ ಬಳಿಕ ಪೊಲೀಸ್ ವಾಹನಗಳಲ್ಲಿ ತಮ್ಮ ಊರಿನತ್ತ ತೆರಳಿದ್ದಾರೆ.

ಗಡಿಪಾರು ಮಾಡಲಾದ ಭಾರತೀಯ ವಲಸಿಗರಲ್ಲಿ ಒಬ್ಬರಾದ ಹರಿಯಾಣದ ಜಸ್ಪಾಲ್ ಸಿಂಗ್ “ನಮ್ಮ ಕೈಗೆ ಬೇಡಿ, ಕಾಲಿಗೆ ಸಂಕೋಲೆ ಬಿಗಿದು ಅಮೆರಿಕದಿಂದ ಹೊರದಬ್ಬಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ಮೊದಲಿಗೆ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದಿರಲಿಲ್ಲ. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬರು ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ನಮ್ಮ ಕೈಗಳಿಗೆ ಕೋಳ ಹಾಕಿ, ಕಾಲುಗಳಿಗೆ ಸರಪಳಿ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ಜಸ್ಪಾಲ್ ಸಿಂಗ್ ವಿವರಿಸಿದ್ದಾರೆ.

“ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶದ ಭರವಸೆ ನೀಡಿದ್ದ ಟ್ರಾವೆಲ್ ಏಜೆಂಟ್‌ನಿಂದ ನನಗೆ ವಂಚನೆಯಾಗಿದೆ. ಸರಿಯಾದ ಯುಎಸ್ ವೀಸಾ ಪಡೆದ ನಂತರ ನನ್ನನ್ನು ಕಳುಹಿಸಲು ನಾನು ಏಜೆಂಟರನ್ನು ಕೇಳಿದ್ದೆ. ಆದರೆ, ಅವರು ನನ್ನನ್ನು ವಂಚಿಸಿದರು. ಏಜೆಂಟರೊಂದಿಗಿನ ಒಪ್ಪಂದವನ್ನು 30 ಲಕ್ಷ ರೂ.ಗೆ ಅಂತಿಮಗೊಳಿಸಲಾಗಿತ್ತು” ಎಂದು ಹೇಳಿದ್ದಾರೆ.

“ಕಳೆದ ವರ್ಷ ಜುಲೈನಲ್ಲಿ ತಾನು ವಿಮಾನದ ಮೂಲಕ ಬ್ರೆಝಿಲ್ ತಲುಪಿದ್ದಾಗಿ ಜಸ್ಪಾಲ್ ಹೇಳಿಕೊಂಡಿದ್ದಾರೆ. ಮುಂದಿನ ಹಂತದ ಅಮೆರಿಕ ಪ್ರಯಾಣವೂ ವಿಮಾನದ ಮೂಲಕವೇ ಆಗಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ತನ್ನ ಏಜೆಂಟ್ ಅಕ್ರಮವಾಗಿ ಗಡಿ ದಾಟುವಂತೆ ಒತ್ತಾಯಿಸಿ ವಂಚಿಸಿದ” ಎಂದು ತಿಳಿಸಿದ್ದಾರೆ.

“ಬ್ರೆಝಿಲ್‌ನಲ್ಲಿ ಆರು ತಿಂಗಳು ತಂಗಿದ್ದ ನಾನು ಗಡಿ ದಾಟಿ ಅಮೆರಿಕ ತಲುಪಿದೆ. ಆದರೆ ಅಮೆರಿಕದ ಗಡಿ ಗಸ್ತು ಪಡೆಯಿಂದ ಬಂಧಿನಕ್ಕೊಳಗಾದೆ. ಅವರು 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟು ನಂತರ ಮನೆಗೆ ಕಳುಹಿಸಿದರು” ಎಂದು ಜಸ್ಪಾಲ್ ಹೇಳಿದ್ದಾರೆ.

“ಅಮೆರಿಕಕ್ಕೆ ತೆರಳಲು ಸಾಲ ಪಡೆದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೆ.ಇದೀಗ ಗಡಿಪಾರು ಮಾಡುವಿಕೆಯಿಂದ ತಾನು ಜರ್ಜರಿತನಾಗಿದ್ದೇನೆ” ಎಂದು ಜಸ್ಪಾಲ್ ಹೇಳಿಕೊಂಡಿದ್ದಾರೆ.

ಗಡಿಪಾರು ಪ್ರಕ್ರಿಯೆ ಕುರಿತು ಮಾತನಾಡಿರುವ ಜಸ್ಪಾಲ್, “ಇದು ಸರ್ಕಾರಗಳ ಸಮಸ್ಯೆ. ನಾವು ಕನಸುಗಳನ್ನು ಹೊತ್ತು ನಮ್ಮ ಕುಟುಂಬದ ಭವಿಷ್ಯಕ್ಕಾಗಿ ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗಿರುತ್ತೇವೆ. ಯಾರದ್ದೋ ತಪ್ಪಿಗೆ ನಾವು ಬಲಿಪಶುಗಳಾಗಿದ್ದೇವೆ” ಎಂದಿದ್ದಾರೆ.

Courtesy : timesofindia.indiatimes.com

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...