Homeಮುಖಪುಟ"ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು"...ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

- Advertisement -
- Advertisement -

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ.

“ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅಮೃತಸರ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂದಿಳಿದ ಪಂಜಾಬ್ ಮತ್ತು ಹರಿಯಾಣ ಮೂಲದ ಅಕ್ರಮ ವಲಸಿಗರು, ಎಲ್ಲಾ ವಿಧಿ ವಿಧಾನಗಳ ಬಳಿಕ ಪೊಲೀಸ್ ವಾಹನಗಳಲ್ಲಿ ತಮ್ಮ ಊರಿನತ್ತ ತೆರಳಿದ್ದಾರೆ.

ಗಡಿಪಾರು ಮಾಡಲಾದ ಭಾರತೀಯ ವಲಸಿಗರಲ್ಲಿ ಒಬ್ಬರಾದ ಹರಿಯಾಣದ ಜಸ್ಪಾಲ್ ಸಿಂಗ್ “ನಮ್ಮ ಕೈಗೆ ಬೇಡಿ, ಕಾಲಿಗೆ ಸಂಕೋಲೆ ಬಿಗಿದು ಅಮೆರಿಕದಿಂದ ಹೊರದಬ್ಬಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ಮೊದಲಿಗೆ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದಿರಲಿಲ್ಲ. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬರು ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ನಮ್ಮ ಕೈಗಳಿಗೆ ಕೋಳ ಹಾಕಿ, ಕಾಲುಗಳಿಗೆ ಸರಪಳಿ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ಜಸ್ಪಾಲ್ ಸಿಂಗ್ ವಿವರಿಸಿದ್ದಾರೆ.

“ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶದ ಭರವಸೆ ನೀಡಿದ್ದ ಟ್ರಾವೆಲ್ ಏಜೆಂಟ್‌ನಿಂದ ನನಗೆ ವಂಚನೆಯಾಗಿದೆ. ಸರಿಯಾದ ಯುಎಸ್ ವೀಸಾ ಪಡೆದ ನಂತರ ನನ್ನನ್ನು ಕಳುಹಿಸಲು ನಾನು ಏಜೆಂಟರನ್ನು ಕೇಳಿದ್ದೆ. ಆದರೆ, ಅವರು ನನ್ನನ್ನು ವಂಚಿಸಿದರು. ಏಜೆಂಟರೊಂದಿಗಿನ ಒಪ್ಪಂದವನ್ನು 30 ಲಕ್ಷ ರೂ.ಗೆ ಅಂತಿಮಗೊಳಿಸಲಾಗಿತ್ತು” ಎಂದು ಹೇಳಿದ್ದಾರೆ.

“ಕಳೆದ ವರ್ಷ ಜುಲೈನಲ್ಲಿ ತಾನು ವಿಮಾನದ ಮೂಲಕ ಬ್ರೆಝಿಲ್ ತಲುಪಿದ್ದಾಗಿ ಜಸ್ಪಾಲ್ ಹೇಳಿಕೊಂಡಿದ್ದಾರೆ. ಮುಂದಿನ ಹಂತದ ಅಮೆರಿಕ ಪ್ರಯಾಣವೂ ವಿಮಾನದ ಮೂಲಕವೇ ಆಗಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ತನ್ನ ಏಜೆಂಟ್ ಅಕ್ರಮವಾಗಿ ಗಡಿ ದಾಟುವಂತೆ ಒತ್ತಾಯಿಸಿ ವಂಚಿಸಿದ” ಎಂದು ತಿಳಿಸಿದ್ದಾರೆ.

“ಬ್ರೆಝಿಲ್‌ನಲ್ಲಿ ಆರು ತಿಂಗಳು ತಂಗಿದ್ದ ನಾನು ಗಡಿ ದಾಟಿ ಅಮೆರಿಕ ತಲುಪಿದೆ. ಆದರೆ ಅಮೆರಿಕದ ಗಡಿ ಗಸ್ತು ಪಡೆಯಿಂದ ಬಂಧಿನಕ್ಕೊಳಗಾದೆ. ಅವರು 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟು ನಂತರ ಮನೆಗೆ ಕಳುಹಿಸಿದರು” ಎಂದು ಜಸ್ಪಾಲ್ ಹೇಳಿದ್ದಾರೆ.

“ಅಮೆರಿಕಕ್ಕೆ ತೆರಳಲು ಸಾಲ ಪಡೆದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೆ.ಇದೀಗ ಗಡಿಪಾರು ಮಾಡುವಿಕೆಯಿಂದ ತಾನು ಜರ್ಜರಿತನಾಗಿದ್ದೇನೆ” ಎಂದು ಜಸ್ಪಾಲ್ ಹೇಳಿಕೊಂಡಿದ್ದಾರೆ.

ಗಡಿಪಾರು ಪ್ರಕ್ರಿಯೆ ಕುರಿತು ಮಾತನಾಡಿರುವ ಜಸ್ಪಾಲ್, “ಇದು ಸರ್ಕಾರಗಳ ಸಮಸ್ಯೆ. ನಾವು ಕನಸುಗಳನ್ನು ಹೊತ್ತು ನಮ್ಮ ಕುಟುಂಬದ ಭವಿಷ್ಯಕ್ಕಾಗಿ ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗಿರುತ್ತೇವೆ. ಯಾರದ್ದೋ ತಪ್ಪಿಗೆ ನಾವು ಬಲಿಪಶುಗಳಾಗಿದ್ದೇವೆ” ಎಂದಿದ್ದಾರೆ.

Courtesy : timesofindia.indiatimes.com

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...