Homeಮುಖಪುಟತೀರ್ಪಿಗೂ ಮುನ್ನ ನಮ್ಮನ್ನು ಗೃಹಬಂಧನದಲ್ಲಿಟ್ಟಿದ್ದರು: ಒಮರ್ ಅಬ್ದುಲ್ಲಾ

ತೀರ್ಪಿಗೂ ಮುನ್ನ ನಮ್ಮನ್ನು ಗೃಹಬಂಧನದಲ್ಲಿಟ್ಟಿದ್ದರು: ಒಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡುವ ಮೊದಲು ನಮ್ಮನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದರು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಆರೋಪ ಮಾಡಿದ್ದಾರೆ.

ಆರ್ಟಿಕಲ್ 370 ತೀರ್ಪು ಪ್ರಕಟಿಸುವ ಮೊದಲು ಪೊಲೀಸರು ಮಫ್ತಿ ಅವರ ನಿವಾಸದ ಬಾಗಿಲುಗಳನ್ನು ಮುಚ್ಚಿದ್ದರು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಟ್ವೀಟ್‌ನಲ್ಲಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಹೇಳಿಕೆಯನ್ನು ನಿರಾಕರಿಸಿದ್ದು, ಆರೋಪಗಳು ‘ಆಧಾರರಹಿತ’ ಎಂದು ಹೇಳಿದರು.

‘ಈ ಆರೋಪ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಕಾರಣಗಳಿಗಾಗಿ ಯಾರನ್ನೂ ಗೃಹಬಂಧನದಲ್ಲಿ ಇರಿಸಲಾಗಿಲ್ಲ ಹಾಗೂ ಬಂಧಿಸಿಲ್ಲ. ಇದೂ ಕೂಡ ವದಂತಿಗಳನ್ನು ಹರಡುವ ಪ್ರಯತ್ನವಾಗಿದೆ’ ಎಂದು ಅವರು ಹೇಳಿದರು.

ಈ ಬೆಳವಣಿಗೆಗಳ ನಡುವೆಯೇ ಶ್ರೀನಗರದ ಗುಪ್ಕರ್‌ನಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ನಿವಾಸದ ಬಳಿಗೆ ಪತ್ರಕರ್ತರು ಬರುವುದಕ್ಕೆ ಪೊಲೀಸರು ಅವಕಾಶ ನೀಡಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.

ಗುಪ್ಕಾರ್ ರಸ್ತೆಯ ಪ್ರವೇಶ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಮತ್ತು ಎನ್‌ಸಿ ನಾಯಕರ ನಿವಾಸಕ್ಕೆ ಪತ್ರಕರ್ತರು ತೆರಳುವುದನ್ನು ನಿರಾಕರಿಸಲಾಗಿದೆ. ಒಮರ್ ಅಬ್ದುಲ್ಲಾ ಅವರು ಅಕ್ಟೋಬರ್ 2020 ರಲ್ಲಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ ನಂತರ ತಮ್ಮ ತಂದೆಯೊಂದಿಗೆ ವಾಸಿಸುತ್ತಿದ್ದಾರೆ.

ಶ್ರೀನಗರದ ಸಂಸತ್ ಸದಸ್ಯರಾದ ಫಾರೂಕ್ ಅಬ್ದುಲ್ಲಾ ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲ ಅಧಿವೇಶನಕ್ಕಾಗಿ ದೆಹಲಿಯಲ್ಲಿದ್ದರೆ, ಅವರ ಮಗ ಕಾಶ್ಮೀರ ಕಣಿವೆಯಲ್ಲಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಲು ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕೇಂದ್ರವು ಮಸೂದೆಗಳನ್ನು ಅಂಗೀಕರಿಸಿದ ನಂತರ ಮುಫ್ತಿ, ಒಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ ಮತ್ತು ಇತರ ಕಾಶ್ಮೀರಿ ನಾಯಕರನ್ನು ಬಂಧಿಸಿ ಗೃಹ ಬಂಧನಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ; ಜಮ್ಮು-ಕಾಶ್ಮೀರ 370ನೇ ವಿಧಿ ರದ್ದು: ಕೇಂದ್ರದ ನಿರ್ಧಾರ ಎತ್ತಿಹಿಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...