Homeಮುಖಪುಟ'ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ...

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ನಾಯಕರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯ ಅಕ್ರಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲು ಅವರು ವಿಫಲರಾಗಿದ್ದಾರೆ ಎಂದು ಸೋಮವಾರ (ಆ.18) ಹೇಳಿದರು.

ಇಂಡಿಯಾ ಒಕ್ಕೂಟದ ಸಭೆ ಬಳಿಕ ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಡಿಎಂಕೆ ಮತ್ತು ಆರ್‌ಜೆಡಿ ಸೇರಿದಂತೆ ಎಂಟು ಪ್ರಮುಖ ವಿರೋಧ ಪಕ್ಷಗಳ ಪ್ರತಿನಿಧಿಗಳು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯುಕ್ತರು ಭಾನುವಾರದ ತಮ್ಮ ಪತ್ರಿಕಾಗೋಷ್ಠಿಯನ್ನು ನಮ್ಮ ಮೇಲೆ ವಾಗ್ದಾಳಿ ನಡೆಸಲು ಬಳಸಿಕೊಂಡಿದ್ದಾರೆ ಎಂದರು.

“ಮತದಾನ ಸಂವಿಧಾನ ದೇಶದ ನಾಗರಿಕರಿಗೆ ನೀಡಿರುವ ಪ್ರಮುಖ ಹಕ್ಕು. ಪ್ರಜಾಪ್ರಭುತ್ವವು ಅದರ ಮೇಲೆ ಅವಲಂಬಿತವಾಗಿದೆ. ಚುನಾವಣಾ ಆಯೋಗವು ಅದನ್ನು ರಕ್ಷಿಸಲು ಉದ್ದೇಶಿಸಲಾದ ಸಂಸ್ಥೆಯಾಗಿದೆ. ಆದರೆ, ರಾಜಕೀಯ ಪಕ್ಷಗಳು ಎತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಮುಖ್ಯ ಚುನಾವಣಾ ಆಯುಕ್ತರು ಉತ್ತರಿಸಿಲ್ಲ. ಅವರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಹೇಳಿದರು.

ವಿರೋಧ ಪಕ್ಷಗಳು ಕೇಳಿದ ಸರಿಯಾದ ಪ್ರಶ್ನೆಗಳಿಗೆ ಅವರು ಉತ್ತರಿಸಬೇಕಿತ್ತು. ಆದರೆ, ಅವರು ರಾಜಕೀಯ ಪಕ್ಷಗಳಿಗೇ ಪ್ರಶ್ನೆಗಳನ್ನು ಹಾಕಿ ವಾಗ್ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದರು.

“ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ಮೂರು ತಿಂಗಳು ಬಾಕಿ ಇರುವಾಗ, ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸದೆ ತರಾತುರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದೇಕೆ? ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಲು ಅವರು ಆತುರಪಟ್ಟಿದ್ದೇಕೆ?” ಎಂದು ಗೊಗೊಯ್ ಪ್ರಶ್ನಿಸಿದರು.

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯ. ಆದರೆ, ಆಯೋಗದ ಚುಕ್ಕಾಣಿ ಹಿಡಿಯುವ ಅಧಿಕಾರಿಗಳು ವಿರೋಧ ಪಕ್ಷಗಳ ಆರೋಪಗಳ ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.

“ಚುನಾವಣಾ ಆಯೋಗವು ಕೆಲವು ಪಕ್ಷಪಾತಿ ಅಧಿಕಾರಿಗಳ ಕೈಯಲ್ಲಿದೆ ಎಂಬುದು ಸ್ಪಷ್ಟ. ಅಂತಹ ಅಧಿಕಾರಿಗಳು ಎಲ್ಲಾ ರೀತಿಯ ತನಿಖೆಗಳನ್ನು ವಿರೋಧಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದರು.

ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಮಾತನಾಡಿ, ಚುನಾವಣಾ ಆಯೋಗವು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಕೇಳುತ್ತಿದೆ. ಆದರೆ, ನಮ್ಮ ಪಕ್ಷ 2022ರಲ್ಲಿ ಸುಮಾರು 18,000 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ದೂರನ್ನು ಪ್ರಮಾಣ ಪತ್ರದೊಂದಿಗೆ ಸಲ್ಲಿಸಿದೆ. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

“2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು. ಈ ಆರೋಪಕ್ಕೆ ನಾವು ಪ್ರಮಾಣಪತ್ರ ಸಲ್ಲಿಸಿದ್ದೆವು. ಆದರೆ, ಚುನಾವಣಾ ಆಯೋಗ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ತಿಳಿಸಿದರು.

ಕಳೆದ ಸಾರ್ವತ್ರಿಕ ಚುನಾವಣೆ ನಡೆದ ಮತದಾರರ ಪಟ್ಟಿ ಸರಿಯಾಗಿಲ್ಲದಿದ್ದರೆ, ಲೋಕಸಭೆಯನ್ನು ವಿಸರ್ಜಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಒತ್ತಾಯಿಸಿದರು.

“ಲೋಕಸಭಾ ಚುನಾವಣೆ ನಡೆದ ಪಟ್ಟಿಯು ವಂಚನೆಯೇ? ಅದು ನಿಜವಾಗಿದ್ದರೆ, ಪ್ರಸ್ತುತ ಮತ್ತು ಹಿಂದಿನ ಚುನಾವಣಾ ಆಯುಕ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಈ ಲೋಕಸಭೆಯನ್ನು ತಕ್ಷಣವೇ ವಿಸರ್ಜಿಸಬೇಕು” ಎಂದು ಅವರು ಹೇಳಿದರು.

“ನಿನ್ನೆ ನಾವು ನಮ್ಮ ಚುನಾವಣಾ ಆಯುಕ್ತರನ್ನು ಹುಡುಕುತ್ತಿದ್ದೆವು, ಆದರೆ, ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು” ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಝಾ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವಸೇನೆಯ (ಯುಬಿಟಿ) ನಾಯಕ ಅರವಿಂದ್ ಸಾವಂತ್ ಕೂಡ ಮುಖ್ಯ ಚುನಾವಣಾಧಿಕಾರಿ “ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಭಾನುವಾರ (ಆ.16) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, “ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪಗಳನ್ನು ಆಧಾರರಹಿತ ಎಂಬುವುದಾಗಿ ಪರಿಗಣಿಸಲಾಗುವುದು” ಎಂದಿದ್ದರು. ಅಲ್ಲದೆ, “ಪ್ರಮಾಣಪತ್ರ ಸಲ್ಲಿಸಿ. ಇಲ್ಲವೇ, ಕ್ಷಮೆಯಾಚಿಸಿ” ಎಂದು ರಾಹುಲ್ ಗಾಂಧಿಗೆ ತಾಕೀತು ಮಾಡಿದ್ದರು.

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...