Homeಮುಖಪುಟ'ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ...

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ನಾಯಕರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯ ಅಕ್ರಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲು ಅವರು ವಿಫಲರಾಗಿದ್ದಾರೆ ಎಂದು ಸೋಮವಾರ (ಆ.18) ಹೇಳಿದರು.

ಇಂಡಿಯಾ ಒಕ್ಕೂಟದ ಸಭೆ ಬಳಿಕ ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಡಿಎಂಕೆ ಮತ್ತು ಆರ್‌ಜೆಡಿ ಸೇರಿದಂತೆ ಎಂಟು ಪ್ರಮುಖ ವಿರೋಧ ಪಕ್ಷಗಳ ಪ್ರತಿನಿಧಿಗಳು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯುಕ್ತರು ಭಾನುವಾರದ ತಮ್ಮ ಪತ್ರಿಕಾಗೋಷ್ಠಿಯನ್ನು ನಮ್ಮ ಮೇಲೆ ವಾಗ್ದಾಳಿ ನಡೆಸಲು ಬಳಸಿಕೊಂಡಿದ್ದಾರೆ ಎಂದರು.

“ಮತದಾನ ಸಂವಿಧಾನ ದೇಶದ ನಾಗರಿಕರಿಗೆ ನೀಡಿರುವ ಪ್ರಮುಖ ಹಕ್ಕು. ಪ್ರಜಾಪ್ರಭುತ್ವವು ಅದರ ಮೇಲೆ ಅವಲಂಬಿತವಾಗಿದೆ. ಚುನಾವಣಾ ಆಯೋಗವು ಅದನ್ನು ರಕ್ಷಿಸಲು ಉದ್ದೇಶಿಸಲಾದ ಸಂಸ್ಥೆಯಾಗಿದೆ. ಆದರೆ, ರಾಜಕೀಯ ಪಕ್ಷಗಳು ಎತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಮುಖ್ಯ ಚುನಾವಣಾ ಆಯುಕ್ತರು ಉತ್ತರಿಸಿಲ್ಲ. ಅವರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಹೇಳಿದರು.

ವಿರೋಧ ಪಕ್ಷಗಳು ಕೇಳಿದ ಸರಿಯಾದ ಪ್ರಶ್ನೆಗಳಿಗೆ ಅವರು ಉತ್ತರಿಸಬೇಕಿತ್ತು. ಆದರೆ, ಅವರು ರಾಜಕೀಯ ಪಕ್ಷಗಳಿಗೇ ಪ್ರಶ್ನೆಗಳನ್ನು ಹಾಕಿ ವಾಗ್ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದರು.

“ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ಮೂರು ತಿಂಗಳು ಬಾಕಿ ಇರುವಾಗ, ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸದೆ ತರಾತುರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದೇಕೆ? ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಲು ಅವರು ಆತುರಪಟ್ಟಿದ್ದೇಕೆ?” ಎಂದು ಗೊಗೊಯ್ ಪ್ರಶ್ನಿಸಿದರು.

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯ. ಆದರೆ, ಆಯೋಗದ ಚುಕ್ಕಾಣಿ ಹಿಡಿಯುವ ಅಧಿಕಾರಿಗಳು ವಿರೋಧ ಪಕ್ಷಗಳ ಆರೋಪಗಳ ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.

“ಚುನಾವಣಾ ಆಯೋಗವು ಕೆಲವು ಪಕ್ಷಪಾತಿ ಅಧಿಕಾರಿಗಳ ಕೈಯಲ್ಲಿದೆ ಎಂಬುದು ಸ್ಪಷ್ಟ. ಅಂತಹ ಅಧಿಕಾರಿಗಳು ಎಲ್ಲಾ ರೀತಿಯ ತನಿಖೆಗಳನ್ನು ವಿರೋಧಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದರು.

ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಮಾತನಾಡಿ, ಚುನಾವಣಾ ಆಯೋಗವು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಕೇಳುತ್ತಿದೆ. ಆದರೆ, ನಮ್ಮ ಪಕ್ಷ 2022ರಲ್ಲಿ ಸುಮಾರು 18,000 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ದೂರನ್ನು ಪ್ರಮಾಣ ಪತ್ರದೊಂದಿಗೆ ಸಲ್ಲಿಸಿದೆ. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

“2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು. ಈ ಆರೋಪಕ್ಕೆ ನಾವು ಪ್ರಮಾಣಪತ್ರ ಸಲ್ಲಿಸಿದ್ದೆವು. ಆದರೆ, ಚುನಾವಣಾ ಆಯೋಗ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ತಿಳಿಸಿದರು.

ಕಳೆದ ಸಾರ್ವತ್ರಿಕ ಚುನಾವಣೆ ನಡೆದ ಮತದಾರರ ಪಟ್ಟಿ ಸರಿಯಾಗಿಲ್ಲದಿದ್ದರೆ, ಲೋಕಸಭೆಯನ್ನು ವಿಸರ್ಜಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಒತ್ತಾಯಿಸಿದರು.

“ಲೋಕಸಭಾ ಚುನಾವಣೆ ನಡೆದ ಪಟ್ಟಿಯು ವಂಚನೆಯೇ? ಅದು ನಿಜವಾಗಿದ್ದರೆ, ಪ್ರಸ್ತುತ ಮತ್ತು ಹಿಂದಿನ ಚುನಾವಣಾ ಆಯುಕ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಈ ಲೋಕಸಭೆಯನ್ನು ತಕ್ಷಣವೇ ವಿಸರ್ಜಿಸಬೇಕು” ಎಂದು ಅವರು ಹೇಳಿದರು.

“ನಿನ್ನೆ ನಾವು ನಮ್ಮ ಚುನಾವಣಾ ಆಯುಕ್ತರನ್ನು ಹುಡುಕುತ್ತಿದ್ದೆವು, ಆದರೆ, ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು” ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಝಾ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವಸೇನೆಯ (ಯುಬಿಟಿ) ನಾಯಕ ಅರವಿಂದ್ ಸಾವಂತ್ ಕೂಡ ಮುಖ್ಯ ಚುನಾವಣಾಧಿಕಾರಿ “ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಭಾನುವಾರ (ಆ.16) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, “ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪಗಳನ್ನು ಆಧಾರರಹಿತ ಎಂಬುವುದಾಗಿ ಪರಿಗಣಿಸಲಾಗುವುದು” ಎಂದಿದ್ದರು. ಅಲ್ಲದೆ, “ಪ್ರಮಾಣಪತ್ರ ಸಲ್ಲಿಸಿ. ಇಲ್ಲವೇ, ಕ್ಷಮೆಯಾಚಿಸಿ” ಎಂದು ರಾಹುಲ್ ಗಾಂಧಿಗೆ ತಾಕೀತು ಮಾಡಿದ್ದರು.

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...