Homeಮುಖಪುಟ'ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ...

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ನಾಯಕರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯ ಅಕ್ರಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲು ಅವರು ವಿಫಲರಾಗಿದ್ದಾರೆ ಎಂದು ಸೋಮವಾರ (ಆ.18) ಹೇಳಿದರು.

ಇಂಡಿಯಾ ಒಕ್ಕೂಟದ ಸಭೆ ಬಳಿಕ ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಡಿಎಂಕೆ ಮತ್ತು ಆರ್‌ಜೆಡಿ ಸೇರಿದಂತೆ ಎಂಟು ಪ್ರಮುಖ ವಿರೋಧ ಪಕ್ಷಗಳ ಪ್ರತಿನಿಧಿಗಳು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯುಕ್ತರು ಭಾನುವಾರದ ತಮ್ಮ ಪತ್ರಿಕಾಗೋಷ್ಠಿಯನ್ನು ನಮ್ಮ ಮೇಲೆ ವಾಗ್ದಾಳಿ ನಡೆಸಲು ಬಳಸಿಕೊಂಡಿದ್ದಾರೆ ಎಂದರು.

“ಮತದಾನ ಸಂವಿಧಾನ ದೇಶದ ನಾಗರಿಕರಿಗೆ ನೀಡಿರುವ ಪ್ರಮುಖ ಹಕ್ಕು. ಪ್ರಜಾಪ್ರಭುತ್ವವು ಅದರ ಮೇಲೆ ಅವಲಂಬಿತವಾಗಿದೆ. ಚುನಾವಣಾ ಆಯೋಗವು ಅದನ್ನು ರಕ್ಷಿಸಲು ಉದ್ದೇಶಿಸಲಾದ ಸಂಸ್ಥೆಯಾಗಿದೆ. ಆದರೆ, ರಾಜಕೀಯ ಪಕ್ಷಗಳು ಎತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಮುಖ್ಯ ಚುನಾವಣಾ ಆಯುಕ್ತರು ಉತ್ತರಿಸಿಲ್ಲ. ಅವರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಹೇಳಿದರು.

ವಿರೋಧ ಪಕ್ಷಗಳು ಕೇಳಿದ ಸರಿಯಾದ ಪ್ರಶ್ನೆಗಳಿಗೆ ಅವರು ಉತ್ತರಿಸಬೇಕಿತ್ತು. ಆದರೆ, ಅವರು ರಾಜಕೀಯ ಪಕ್ಷಗಳಿಗೇ ಪ್ರಶ್ನೆಗಳನ್ನು ಹಾಕಿ ವಾಗ್ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದರು.

“ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ಮೂರು ತಿಂಗಳು ಬಾಕಿ ಇರುವಾಗ, ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸದೆ ತರಾತುರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದೇಕೆ? ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಲು ಅವರು ಆತುರಪಟ್ಟಿದ್ದೇಕೆ?” ಎಂದು ಗೊಗೊಯ್ ಪ್ರಶ್ನಿಸಿದರು.

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯ. ಆದರೆ, ಆಯೋಗದ ಚುಕ್ಕಾಣಿ ಹಿಡಿಯುವ ಅಧಿಕಾರಿಗಳು ವಿರೋಧ ಪಕ್ಷಗಳ ಆರೋಪಗಳ ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.

“ಚುನಾವಣಾ ಆಯೋಗವು ಕೆಲವು ಪಕ್ಷಪಾತಿ ಅಧಿಕಾರಿಗಳ ಕೈಯಲ್ಲಿದೆ ಎಂಬುದು ಸ್ಪಷ್ಟ. ಅಂತಹ ಅಧಿಕಾರಿಗಳು ಎಲ್ಲಾ ರೀತಿಯ ತನಿಖೆಗಳನ್ನು ವಿರೋಧಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದರು.

ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಮಾತನಾಡಿ, ಚುನಾವಣಾ ಆಯೋಗವು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಕೇಳುತ್ತಿದೆ. ಆದರೆ, ನಮ್ಮ ಪಕ್ಷ 2022ರಲ್ಲಿ ಸುಮಾರು 18,000 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ದೂರನ್ನು ಪ್ರಮಾಣ ಪತ್ರದೊಂದಿಗೆ ಸಲ್ಲಿಸಿದೆ. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

“2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು. ಈ ಆರೋಪಕ್ಕೆ ನಾವು ಪ್ರಮಾಣಪತ್ರ ಸಲ್ಲಿಸಿದ್ದೆವು. ಆದರೆ, ಚುನಾವಣಾ ಆಯೋಗ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ತಿಳಿಸಿದರು.

ಕಳೆದ ಸಾರ್ವತ್ರಿಕ ಚುನಾವಣೆ ನಡೆದ ಮತದಾರರ ಪಟ್ಟಿ ಸರಿಯಾಗಿಲ್ಲದಿದ್ದರೆ, ಲೋಕಸಭೆಯನ್ನು ವಿಸರ್ಜಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಒತ್ತಾಯಿಸಿದರು.

“ಲೋಕಸಭಾ ಚುನಾವಣೆ ನಡೆದ ಪಟ್ಟಿಯು ವಂಚನೆಯೇ? ಅದು ನಿಜವಾಗಿದ್ದರೆ, ಪ್ರಸ್ತುತ ಮತ್ತು ಹಿಂದಿನ ಚುನಾವಣಾ ಆಯುಕ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಈ ಲೋಕಸಭೆಯನ್ನು ತಕ್ಷಣವೇ ವಿಸರ್ಜಿಸಬೇಕು” ಎಂದು ಅವರು ಹೇಳಿದರು.

“ನಿನ್ನೆ ನಾವು ನಮ್ಮ ಚುನಾವಣಾ ಆಯುಕ್ತರನ್ನು ಹುಡುಕುತ್ತಿದ್ದೆವು, ಆದರೆ, ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು” ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಝಾ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವಸೇನೆಯ (ಯುಬಿಟಿ) ನಾಯಕ ಅರವಿಂದ್ ಸಾವಂತ್ ಕೂಡ ಮುಖ್ಯ ಚುನಾವಣಾಧಿಕಾರಿ “ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಭಾನುವಾರ (ಆ.16) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, “ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪಗಳನ್ನು ಆಧಾರರಹಿತ ಎಂಬುವುದಾಗಿ ಪರಿಗಣಿಸಲಾಗುವುದು” ಎಂದಿದ್ದರು. ಅಲ್ಲದೆ, “ಪ್ರಮಾಣಪತ್ರ ಸಲ್ಲಿಸಿ. ಇಲ್ಲವೇ, ಕ್ಷಮೆಯಾಚಿಸಿ” ಎಂದು ರಾಹುಲ್ ಗಾಂಧಿಗೆ ತಾಕೀತು ಮಾಡಿದ್ದರು.

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...